ಸಚಿವರಿಂದ ಮಾರುಕಟ್ಟೆ ಭೇಟಿ: ತರಕಾರಿ ಖರೀದಿ ಹಾಗೂ ಮಾರಾಟಕ್ಕೆ ಸುಗಮ ವ್ಯವಸ್ಥೆ
Team Udayavani, Apr 3, 2020, 10:45 AM IST
ಬೆಂಗಳೂರು: ಯಡಿಯೂರಪ್ಪ ಸಂಪುಟದ ಐವರು ಸಚಿವರು ಶುಕ್ರವಾರ ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಲಾಕ್ ಡೌನ್ ಹಿನ್ನೆಲೆಯಲ್ಲಿ ತರಕಾರಿ, ಹಣ್ಣುಗಳ ಸಾಗಾಟಕ್ಕೆ ಅಡಚಣೆ ಆಗದಂತೆ ವ್ಯವಸ್ಥೆ ಮಾಡಿದರು.
ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ತೋಟಗಾರಿಕಾ ಸಚಿವ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್,ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದರು.
ಸಾಗಾಟಕ್ಕೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ತರಕಾರಿ ಬರಲಾರಂಬಿಸಿತು. ಈ ಹಿನ್ನೆಲೆಯಲ್ಲಿ ರೈತರು, ವ್ಯಾಪಾರಸ್ಥರು ಸಚಿವರ ಬಳಿ ಸಂತಸ ವ್ಯಕ್ತಪಡಿಸಿದರು.
ಮೊದಲು ಬ್ಯಾಟರಾಯನ ಪುರ ಮಾರುಕಟ್ಟೆಗೆ ಬೆಳಿಗ್ಗೆ 6 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು ಮಾರುಕಟ್ಟೆಯಲ್ಲಿ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹಾಗೂ ಕಡ್ಡಾಯ ಮಾಸ್ಕ್ ಧರಿಸುವಂತೆ ಸಚಿವರು ಸೂಚಿಸಿದರು.
ಬಳಿಕ ದಾಸನಪುರ ಉಪ ಮಾರುಕಟ್ಟೆಗೆ ಭೇಟಿ ನೀಡಿ ತರಕಾರಿ ಹಾಗೂ ಈರುಳ್ಳಿ ಮಾರುಕಟ್ಟೆಗೆ ತೆರಳಿ ವ್ಯಾಪಾರಸ್ಥರು ಮತ್ತು ರೈತರ ಜೊತೆ ಮಾತುಕತೆ ನಡೆಸಿದರು. ರೈತರಿಂದ ಎಷ್ಟು ಹಣಕ್ಕೆ ಖರೀದಿಸಲಾಗಿದೆ ಹಾಗೂ ಎಷ್ಟು ಹಣಕ್ಕೆ ಗ್ರಾಹಕರಿಗೆ ನೀಡಲಾಗುತ್ತಿದೆ ಎನ್ನುವುದನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ತೋಟಗಾರಿಕಾ ಸಚಿವ ಡಾ. ನಾರಾಯಣ ಗೌಡ ರೈತರು ಬೆಳೆದ ಬೆಳೆ ಮಾರಾಟವಾಗುತ್ತಿಲ್ಲ, ಸಾಗಾಟಕ್ಕೂ ಸಮಸ್ಯೆ ಆಗಿದೆ ಎಂಬ ಆರೋಪ ಇತ್ತು. ಈಗ ಎಲ್ಲ ಸಮಸ್ಯೆ ಪರಿಹರಿಸಲಾಗಿದೆ. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆ ಸರಿಹೋಗಲಿದೆ. ಗ್ರಾಹಕರಿಗೂ ತರಕಾರಿ, ಹಣ್ಣು ಎಂದಿನಂತೆ ಲಭ್ಯವಾಗಲಿದೆ. ಮಾರುಕಟ್ಟೆ ಆರಂಭವಾಗಿರುವ ಕಾರಣ ರೈತರಿಗೂ ಅನುಕೂಲ, ಜನಸಾಮಾನ್ಯರಿಗೂ ಅನುಕೂಲವಾಗಲಿದೆ. ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಹಾಕಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ