ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆ
Team Udayavani, Dec 23, 2022, 1:33 PM IST
ಬೆಳಗಾವಿ: ವಿಧಾನ ಪರಿಷತ್ ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ ಆಯ್ಕೆಯಾಗಿದ್ದಾರೆ.
ಇಂದು ವಿಧಾನ ಪರಿಷತ್ ಉಪಸಭಾಪತಿ ಆಯ್ಕೆಗೆ ಚುನಾವಣೆ ನಡೆಯಿತು. ಎಂ,ಕೆ ಪ್ರಾಣೇಶ್ 39 ಮತ ಪಡೆಯುವ ಮೂಲಕ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ನ ಅರವಿಂದ ಅರಳಿ 26 ಮತ ಪಡೆದರು.
ಬಿಜೆಪಿಯಿಂದ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ ಪ್ರಾಣೇಶ್ ಹೆಸರನ್ನು ಕೋಟಾ ಶ್ರೀನಿವಾಸ್ ಪೂಜಾರಿ, ಎಸ್. ರುದ್ರೇಗೌಡ, ತಳವಾರ್ ಸಾಬಣ್ಣ, ಅರುಣ್ ಡಿಎಸ್ ಅವರು ಪ್ರಸ್ತಾಪ ಮಾಡಿದರು. ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಅರವಿಂದ ಕುಮಾರ್ ಅರಳಿ ಅವರ ಹೆಸರನ್ನು ಬಿ.ಕೆ. ಹರಿಪಸ್ರಾದ್ ಪ್ರಸ್ತಾಪ ಮಾಡಿದರು.
ಜೆಡಿಎಸ್ ನ ಯಾರೊಬ್ಬರೂ ಕೂಡ ಮತ ಚಲಾಯಿಸದೆ ತಟಸ್ಥವಾಗಿದ್ದರು. ಸದನದಲ್ಲಿ 39 ಬಿಜೆಪಿ ಸದಸ್ಯರು, 26 ಕಾಂಗ್ರೆಸ್ ಸದಸ್ಯರು, 8 ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದರು.
ಇದನ್ನೂ ಓದಿ:ಟೀಂ ಇಂಡಿಯಾ ಆಯ್ಕೆ ಸಮಿತಿಗಾಗಿ ಅರ್ಜಿ ಸಲ್ಲಿಸಿದ ಧೋನಿ, ಸಚಿನ್, ಇಂಝಮಾಮ್ ಉಲ್ ಹಕ್!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಶುಭ ಹಾರೈಸಿದ್ದು, ವಿಧಾನ ಪರಿಷತ್ ನ ನೂತನ ಉಪ ಸಭಾಪತಿಯಾಗಿ ಆಯ್ಕೆಯಾಗಿರುವ ಎಂ.ಕೆ ಪ್ರಾಣೇಶ್ ಅವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅನುಭವ ಸದನದ ಕಲಾಪಗಳ ಘನತೆಯನ್ನು ಮತ್ತಷ್ಟು ಹೆಚ್ಚಿಸಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಜವಾಬ್ದಾರಿಯುತ ವ್ಯಕ್ತಿ, ಸಜ್ಜನ, ಪ್ರಗತಿಪರ ಚಿಂತನೆ ಇರುವ ರಾಜಕಾರಣಿಯಾದ ಎಂ.ಕೆ. ಪ್ರಾಣೇಶ್ ಅವರಿಂದ ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಬೆಲೆ ಸಿಗಲಿದೆ. ಆ ಮೂಲಕ ಕರ್ನಾಟಕದ ಜನರ ಸಮಸ್ಯೆಗಳಿಗೆ ಉತ್ತರ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
MUST WATCH
ಹೊಸ ಸೇರ್ಪಡೆ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು