ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು: ಶಾಸಕ ಪಿ.ರಾಜೀವ್
Team Udayavani, Nov 14, 2019, 3:33 PM IST
ಕಲಬುರಗಿ: ಉಪಚುನಾವಣೆಯ ಎಲ್ಲ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ, ಕುಡಚಿ ಶಾಸಕ ಪಿ.ರಾಜೀವ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದುವರೆಯಬೇಕೆಂದು ರಾಜ್ಯದ ಜನತೆ ಬಯಸುತ್ತಿದ್ದಾರೆ. ಹೀಗಾಗಿ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ಧ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರು ಅಧಿಕಾರವನ್ನು ಪೂರೈಸುತ್ತಾರೆ ಎಂದರು.
ಬಿಜೆಪಿಯ ಟಿಕೆಟ್ ಸಿಗದ ವಂಚಿತರ ಬಂಡಾಯದಿಂದ ಪಕ್ಷಕ್ಕೆ ಯಾವುದೆ ತೊಂದರೆ ಆಗಲ್ಲ. ಕಮಲದ ಚಿಹ್ನೆಯಡಿ ಯಾರು ನಿಲ್ಲುತ್ತಾರೋ ಅವರನ್ನು ಮಾತ್ರ ಬಿಜೆಪಿ ಕಾರ್ಯಕರ್ತರು ಗೆಲ್ಲಿಸಿ ಕೊಡುತ್ತಾರೆ. ಶರತ್ ಬಚ್ಚೇಗೌಡ ಸ್ವಾರ್ಥಕ್ಕಾಗಿ ಪಕ್ಷವನ್ನು ಬಳಸಿಕೊಂಡು ಚುನಾವಣೆಗೆ ಸ್ಪರ್ಥಿಸುತ್ತಿದ್ದಾರೆ. ಸಮುದ್ರಕ್ಕೆ ಹೊಂದಿಕೊಳ್ಳದ ಕಸವನ್ನು ಸಮುದ್ರ ಹೇಗೆ ಹೊರ ಹಾಕುತ್ತೋ, ಹಾಗೆ ಬಿಜೆಪಿ ಪಕ್ಷಕ್ಕೆ ಹೊಂದಿಕೊಳ್ಳದವರು ಪಕ್ಷದಿಂದ ಹೊರ ಹೊಗುತ್ತಾರೆ ಎಂದು ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…