ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ


Team Udayavani, Feb 8, 2023, 4:28 PM IST

yashawantraya

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ ಸೃಷ್ಟಿಯಿಂದ ತ್ವರಿತ ಅಭಿವೃದ್ಧಿ ಪ್ರತಿಪಾದಿಸಿದೆ. ಇಂಡಿ ಜಿಲ್ಲೆ ಸೃಷ್ಟಿಸಲು ಸದನದಲ್ಲಿ ದ್ವನಿ ಎತ್ತಿದ್ದೇನೆ ಎಂದರು.

ಜಿಲ್ಲಾ ಕೇಂದ್ರಕ್ಕೆ ಅಗತ್ಯ ಇರುವ ಪೂರಕ ಮೂಲಭೂತ ಎಲ್ಲ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಕೇಂದ್ರ ಮಾಡಿದಲ್ಲಿ ಚಡಚಣ, ಆಲಮೇಲ, ಸಿಂದಗಿ, ದೇವರಹಿಪ್ಪರಗಿ ತಾಲೂಕಗಳು ಇಂಡಿ ಕೇಂದ್ರಕ್ಕೆ ಹತ್ತಿರ ಇದೆ. ಹೀಗಾಗಿ ಇಂಡಿ ಜಿಲ್ಲೆ ರೂಪಿಸುವಲ್ಲಿ ಸದಾ ನನ್ನದು ರಾಜಕೀಯ ಬದ್ಧತೆ ತೋರುತ್ತೇನೆ ಎಂದರು.

ಹೀಗಾಗಿ ಇಂಡಿ ಜಿಲ್ಲಾ ಕೇಂದ್ರ ಮಾಡುವಲ್ಲಿ ನನ್ನ ಹೋರಾಟ ಮುಂದುವರೆಯಲಿದೆ. ಇಂಡಿ ಜಿಲ್ಲಾ ಕೇಂದ್ರ ರಚನೆಯಿಂದ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಇಂಡಿ ಭಾಗದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಹಾಗೂ ಸಮಾಜ ಬಾಹೀರ ಕೃತ್ಯಗಳಿಗೆ ಜಿಲ್ಲಾ ಕೇಂದ್ರ ರೂಪಿಸುವುದರಿಂದ ಕಡಿವಾಣ ಬೀಳಲಿದೆ ಎಂದರು.

ಇಂಡಿ ನಗರಸಭೆ ಹಂತಕ್ಕೆ ಮೇಲ್ದರ್ಜೆಗೆ ಏರಲು ಅಗತ್ಯದ ಜನಸಂಖ್ಯೆ ಹಾಗೂ ಸೌಲಭ್ಯ ಹೊಂದಿದೆ. ಇಂಡಿ ಪಟ್ಟಣದ ಜನರಿಗೆ ನಿರಂತರ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಿದ್ದೇನೆ ಎಂದರು.

ಲಿಂಬೆ ಅಭಿವೃದ್ಧಿ ಮಂಡಳಿ, ಇಂಡಿ ಭಾಗದಲ್ಲಿ ಬೆಳೆಯುವ ಕಾಗ್ಜಿ ಲಿಂಬೆಗೆ ಜಿಐ ಟ್ಯಾಗಿಂಗ್ ಮಾನ್ಯತೆ ಸಿಕ್ಕಿದೆ. ಇದು ನಾನು ರಾಜಕೀಯ ರಹಿತ ಹಾಗೂ ಅಭಿವೃದ್ಧಿ ವಿಷಯದಲ್ಲಿ ನಾನು ತೋರಿದ ಬದ್ಧತೆಯ ಪ್ರತೀಕ ಎಂದರು.

ಇಂಡಿ ಮಾತ್ರವಲ್ಲ ಮುದ್ದೇಬಿಹಾಳ ತಾಲೂಕಿನಿಂದ ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಇರುವ ಅಂತರ ನೂರಾರು ಕಿ.ಮೀ. ದೂರವಿದೆ. ಬಾಗಲಕೋಟೆ ಜಿಲ್ಲೆಯಿಂದ ಜಮಖಂಡಿ ಪ್ರತ್ಯೇಕ ಜಿಲ್ಲೆ ಮಾಡುವ ಕೂಗಿದೆ. ಸುಗಮ ಆಡಳಿತಕ್ಕಾಗಿ ಸಣ್ಣ ಜಿಲ್ಲೆಗಳ ರಚನೆ ಅಗತ್ಯವಿದೆ ಎಂದರು.

ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇರುವ ನಾನು ಹೋರಾಟ ರಹಿತವಾಗಿ ನಮ್ಮ ಭಾಗದಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಹೀಗಾಗಿ ಇಂಡಿ ಜಿಲ್ಲಾ ನಿರ್ಮಾಣ ನನ್ನ ಕನಸಿನ ಯೋಜನೆ ಖಂಡಿತಾ ಸಾಧ್ಯವಿದೆ ಎಂದರು.

ಇದನ್ನೂ ಓದಿ: ವಿಐಎಸ್ಎಲ್ ವಿಚಾರದಲ್ಲಿ ಬಿಜೆಪಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್

ಟಾಪ್ ನ್ಯೂಸ್

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ

bel defence

ಭಾರತೀಯ ರಕ್ಷಣಾ ಸಚಿವಾಲಯದೊಂದಿಗೆ ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮಹತ್ವದ ಒಪ್ಪಂದ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

ananth kumar hegde

ಕೇಂದ್ರ ಸರಕಾರದಿಂದ ಉತ್ತರ ಕನ್ನಡ ಜಿಲ್ಲೆಗೆ 232 ಕೋ.ರೂ. ಅನುದಾನ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ: ಅಮಿತ್ ಶಾ

ಅತಂತ್ರ ಸ್ಥಿತಿ ಬೇಡ, ಬಿಜೆಪಿಗೆ ಪೂರ್ಣ ಬಹುಮತ ನೀಡಿ ಮೋದಿ ಕೈ ಬಲಪಡಿಸಿ: ಅಮಿತ್ ಶಾ

ಎಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್‌ ಪಟ್ಟಿ

ಎಪ್ರಿಲ್‌ ಮೊದಲ ವಾರ ಬಿಜೆಪಿ ಪಟ್ಟಿ: ಬಿಡುಗಡೆ ಭಾಗ್ಯ ಕಾಣದ ಕಾಂಗ್ರೆಸ್‌ ಪಟ್ಟಿ

ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್‌ ಶೋ

ಅಂತಿಮವಾಗದ ಸಿದ್ದರಾಮಯ್ಯ ಕ್ಷೇತ್ರ: ಇಂದು ಬಾದಾಮಿಯಲ್ಲಿ 2. ಕಿ. ಮೀ. ರೋಡ್‌ ಶೋ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

ಮಂಗಳೂರು/ಉಡುಪಿ: ಬಿಸಿಲ ನಡುವೆಯೂ ಪ್ರವಾಸಿಗರ ದಂಡು, ಚಾರಣಕ್ಕೆ ಸದ್ಯ ಅವಕಾಶವಿಲ್ಲ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.