ಮೋದಿ ಕೆಲಸ ಮೆಚ್ಚಿ ಶಾಸಕರು ಬಿಜೆಪಿಗೆ ಬರುತ್ತಿದ್ದಾರೆ: ಡಾ. ಉಮೇಶ್ ಜಾಧವ್
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಅಹ್ವಾನ
Team Udayavani, Sep 15, 2019, 12:47 PM IST
ಸಂಗ್ರಹ ಚಿತ್ರ
ಕಲಬುರಗಿ : ರಾಜ್ಯದಲ್ಲಿ ಆಪರೇಷನ್ ಕಮಲ ಪಾರ್ಟ್ 2 ಇಲ್ಲ. ತಾನಾಗಿಯೇ ಹಲವು ಶಾಸಕರು ನಮ್ಮ ಪಕ್ಷಕ್ಕೆ ಬರ್ತಿದ್ದಾರೆ. ಪ್ರಧಾನಿ ಮೋದಿ ಆಡಳಿತ, ಬಿಜೆಪಿ ಸರಕಾರದ ಮೆಚ್ಚಿ ಬರ್ತಿದ್ದಾರೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಎಲ್ಲಾ ಪಾರ್ಟಿ ಕ್ಲೀನ್ ಆಗಿದೆ. ಬಹುತೇಕ ಶಾಸಕರು ಸ್ವಯಂ ಪ್ರೇರಿತರಾಗಿ ನಿರ್ಧಾರ ತಗೋತಿದ್ದಾರೆ. ಕರ್ನಾಟಕದಲ್ಲಿ ಅದೇ ಪರಿಸ್ಥಿತಿ ನಿರ್ಮಾಣ ಆಗುತ್ತೆ ನೋಡಿ ಎಂದು ಸಂಸದ ಡಾ. ಉಮೇಶ್ ಜಾಧವ್ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಶಾಸಕರು ಬಿಜೆಪಿಗೆ ಸೇರುತ್ತಾರೆಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಉಮೇಶ್ ಜಾಧವ್ ಮಾತನಾಡಿದರು.
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಅಹ್ವಾನ ನೀಡಲಾಗುವುದು. ಉದ್ಘಾಟನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಸಿಎಂ ಯಡಿಯೂರಪ್ಪ ಅವರೇ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಿದ್ದರು. ಈಗ ಅವರ ನೇತೃತ್ವದಲ್ಲಿಯೇ ನಿಲ್ದಾಣ ಶುಭಾರಂಭಗೊಳ್ಳುತ್ತಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ರವಿವಾರ ಪತ್ರಿಕಾಗೋಷ್ಠಿಯಲ್ಲಿಯಲ್ಲಿ ಮಾತನಾಡಿದ ಅವರು ಈಗಾಗಲೇ ವಿಮಾನ ನಿಲ್ದಾಣ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಕೆಲಸಗಳು ಭರದಿಂದ ಸಾಗಿವೆ ಎಂದರು.
ಕಲಬುರಗಿಯಲ್ಲಿ ರೈಲ್ವೇ ವಿಭಾಗೀಯ ಕಚೇರಿ ಆರಂಭಕ್ಕೆ ಶಕ್ತಿ ಮೀರಿ ಶ್ರಮಿಸಲಾಗುವುದು. ಒಂದು ವೇಳೆ ಆಗದಿದ್ದರೆ ಪರಿಣಾಮವೇ ಬೇರೆ ಇರುತ್ತದೆ ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ ಸಂಸದರು, ರೈಲ್ವೆ ವಿಭಾಗೀಯ ಕಚೇರಿ ಕಾರ್ಯಾರಂಭದ ಕಾರ್ಯ ಯಾವ ಹಂತದಲ್ಲಿದೆ ಎಂಬುದು ಎರಡು ಮೂರು ದಿನದೊಳಗೆ ಗೊತ್ತಾಗುತ್ತದೆ. ರೈಲ್ವೆ ವಿಭಾಗೀಯ ಕಚೇರಿ ಕಲಬುರಗಿಯಲ್ಲಿ ಪ್ರಾರಂಭವಾಗುತ್ತದೆ. ಆದರೆ ಯಾವಾಗ ಎಂಬ ಸಮಯ ಹೇಳಲಿಕ್ಕಾಗದು ಎಂದರು.
17ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕದ ಧ್ವಜಾರೋಹಣ ನೆರವೇರಿಸುವರು ಎಂದು ಸಂಸದ ಡಾ. ಜಾಧವ್ ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪ ಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ