ಚೆನ್ನೈ ಮೂಲಕ ಭಾರತ- ಚೀನಾ ನಡುವಿನ ಹೊಸ ಯುಗ ಆರಂಭ
Team Udayavani, Oct 12, 2019, 2:31 PM IST
ಚೆನ್ನೈ: ಭಾರತ ಮತ್ತು ಚೀನಾ ದೇಶಗಳ ನಡುವಿನ ಸಂಬಂಧಗಳ ಹೊಸ ಯುಗ ಚೆನ್ನೈ ವಿಷನ್ ಮೂಲಕ ಆರಂಭವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ತಮಿಳುನಾಡಿನ ಕೋವಲಂನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ ಪಿಂಗ್ ಜೊತೆಗಿನ ಅನೌಪಚಾರಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚೀನಾ ಮತ್ತು ತಮಿಳುನಾಡಿನ ನಡುವೆ ತುಂಬಾ ಹಳೆಯದಾದ ಸಾಂಸ್ಕೃತಿಕ ಮತ್ತು ವ್ಯಾಪಾರ ಸಂಬಂಧ ಇದೆ. ಕಳೆದ ವರ್ಷ ವುಹಾನ್ ನಲ್ಲಿ ನಡೆದ ಉಭಯ ದೇಶಗಳ ನಡುವಿನ ಮೊದಲ ಅನೌಪಚಾರಿಕ ಶೃಂಗ ಸಭೆ ನಮ್ಮ ನಡುವಿನ ಸಂಬಂಧಕ್ಕೆ ಹೊಸ ವೇಗ ನೀಡಿತ್ತು ಎಂದರು.
ಈ ವೇಳೆ ಮಾತನಾಡಿದ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್, ನಿಮ್ಮ ಆತಿಥ್ಯ ನಮಗೆ ಬಹಳ ಸಂತೋಷ ತಂದಿದೆ. ನಾನು ಮತ್ತು ಮತ್ತು ನನ್ನ ಸಹೋದ್ಯೋಗಿಗಳಿಗೆ ಮರೆಯಲಾಗದ ಅನುಭವ ತಂದಿದೆ ಎಂದರು.
ಈ ಅನೌಪಚಾರಿಕ ಶೃಂಗಸಭೆಯನ್ನು ಆಯೋಜಿಸದ ಕಾರಣಕ್ಕಾಗಿ ಮೋದಿಯವರಿಗೆ ಧನ್ಯವಾಧ ಸಮರ್ಪಿಸಿದ ಜಿನ್ ಪಿಂಗ್, ಇಂತಹ ಅನೌಪಚಾರಿಕ ಶೃಂಗಸಭೆಗಳನ್ನು ನಡೆಸುತ್ತಿರಬೇಕು ಎಂದರು.
ಸಭೆಯಲ್ಲಿ ವಿದೇಶಾಂಗ ಸಚಿವ ಡಾ. ಜೈಶಂಕರ್, ಅಜಿತ್ ದೋವಲ್ ಮುಂತಾದ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ