ಅಕ್ರಮ ಹಣ ವರ್ಗಾವಣೆ ಕೇಸ್; ಡಿಕೆ ಶಿವಕುಮಾರ್ ಗೆ ಜಾಮೀನು, 48 ದಿನಗಳ ಜೈಲುವಾಸ ಅಂತ್ಯ
Team Udayavani, Oct 23, 2019, 2:36 PM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ತೀರ್ಪು ನೀಡಿದೆ
ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ಐಪಿಸಿ ಸೆಕ್ಷನ್ 120 ಬಿ ಬಗ್ಗೆ ವಿವರಣೆ ನೀಡಿ ತೀರ್ಪನ್ನು ಪ್ರಕಟಿಸಿದರು. ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಬುಧವಾರಕ್ಕೆ ಕಾಯ್ದಿರಿಸಿದ್ದರು.
ಹೈಲೈಟ್ಸ್:
*ಅನಾರೋಗ್ಯದ ಕಾರಣ ನೀಡಿ ಡಿಕೆಶಿಗೆ ಜಾಮೀನು ಮಂಜೂರು
*ವಿದೇಶಕ್ಕೆ ಪಲಾಯನ ಮಾಡುವ ಸಾಧ್ಯತೆ ಇಲ್ಲ
*ವಿದೇಶಕ್ಕೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು
*25 ಲಕ್ಷ ರೂಪಾಯಿ ಬಾಂಡ್ ನೀಡಬೇಕು
*ಸಾಕ್ಷ್ಯ ನಾಶಕ್ಕೆ ಪುರಾವೆ ಇಲ್ಲ
* ಷರತ್ತು ವಿಧಿಸಿ ಜಾಮೀನು ಮಂಜೂರು
*ಡಿಕೆ ಶಿವಕುಮಾರ್ ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ಒಪ್ಪಿಸಬೇಕು.
*ಡಿಕೆ ಶಿವಕುಮಾರ್ ಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್