ಕೇರಳಕ್ಕೆ ಮುಂಗಾರು; ನಿಸರ್ಗ ಜತೆಗೂಡಿ ಭಾರೀ ಮಳೆ
Team Udayavani, Jun 2, 2020, 5:50 AM IST
ಹೊಸದಿಲ್ಲಿ: ಕೇರಳಕ್ಕೆ ವಾಡಿಕೆಯಂತೆ ಜೂ.1ರಂದು ನೈಋತ್ಯ ಮುಂಗಾರು ಪ್ರವೇಶಿಸಿದೆ. ಸದ್ಯ ದಲ್ಲೇ ಕರ್ನಾಟಕವನ್ನೂ ತಲುಪುವ ಸಾಧ್ಯತೆ ಇದೆ. 2013ರ ಬಳಿಕ ಇದೇ ಮೊದಲ ಬಾರಿಗೆ ನಿಗದಿತ ಸಮಯಕ್ಕೇ ಮಳೆ ಮಾರುತಗಳು ಆಗಮಿಸಿದ್ದು, ಈ ವರ್ಷ ವಾಡಿಕೆಗಿಂತ ಅಧಿಕ ಮಳೆ ಸುರಿಸಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದು ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮುಂಗಾರು ಮಾರುತಗಳ ಜಂಟಿ ಪರಿಣಾಮ. ಉಡುಪಿ, ದಕ್ಷಿಣ ಕನ್ನಡ ಸಹಿತ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಸೋಮ ವಾರ ಸಂಜೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ 24 ತಾಸುಗಳ ಅವಧಿಯಲ್ಲಿ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾ,ಗುಜರಾತ್ಗೆ ನಾಳೆ “ನಿಸರ್ಗ’
ಅರಬಿ ಸಮುದ್ರದ ನೈಋತ್ಯ ಭಾಗ ದಲ್ಲಿ ಸೃಷ್ಟಿ ಯಾಗಿರುವ ವಾಯುಭಾರ ಕುಸಿತ ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದೆ.ಇದು ಮಂಗಳವಾರದ ಹೊತ್ತಿಗೆ ಚಂಡಮಾರುತ ವಾಗಲಿದ್ದು, ಜೂ.3ರಂದು ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ. ಇದಕ್ಕೆ “ನಿಸರ್ಗ’ ಎಂದು ಹೆಸರಿಡಲಾಗಿದೆ. ಕರ್ನಾಟಕ,ಕೇರಳ,ಗೋವಾಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಕರಾವಳಿಯಲ್ಲೂ ಭಾರೀ ಮಳೆ ಜತೆಗೆ ವೇಗದ ಗಾಳಿ ಬೀಸ ಲಿದ್ದು, ಮೀನುಗಾರರು ಸಮುದ್ರಕ್ಕಿಳಿ ಯದಂತೆ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ