ಸಿಗಲಿದೆ ಇನ್ನಷ್ಟು ವಿನಾಯಿತಿ? ಲಾಕ್‌ ಡೌನ್‌ 3 ಮುಕ್ತಾಯ; ಹೊಸ ನಿಯಮ ನಾಳೆ


Team Udayavani, May 17, 2020, 6:15 AM IST

ಸಿಗಲಿದೆ ಇನ್ನಷ್ಟು ವಿನಾಯಿತಿ? ಲಾಕ್‌ ಡೌನ್‌ 3 ಮುಕ್ತಾಯ; ಹೊಸ ನಿಯಮ ನಾಳೆ

ಬೆಂಗಳೂರು: ಮೂರನೇ ಹಂತದ ಲಾಕ್‌ಡೌನ್‌ ರವಿವಾರ ಮುಕ್ತಾಯವಾಗಲಿದ್ದು, ನಾಲ್ಕನೇ ಹಂತ ಸೋಮವಾರದಿಂದ ಆರಂಭವಾಗಲಿದೆ. ಈ ವೇಳೆ ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ ಉಳಿದೆಡೆ ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡಿ ಸಾಮಾನ್ಯ ಸ್ಥಿತಿ ನಿರ್ಮಿಸುವ ಬಗ್ಗೆ ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ.

ಈ ಸಂಬಂಧ ರಾಜ್ಯ ಸರಕಾರವು ಕೇಂದ್ರ ಮಾರ್ಗಸೂಚಿಯ ನಿರೀಕ್ಷೆಯಲ್ಲಿದ್ದು, ಅದನ್ನು ಆಧರಿಸಿ ರಾಜ್ಯ ಮಾರ್ಗಸೂಚಿ ಸಿದ್ಧಪಡಿಸಲಿದೆ. ವಲಯ ಮತ್ತು ಕಂಟೈನ್‌ಮೆಂಟ್‌ ಪ್ರದೇಶದ ನಿರ್ಬಂಧಿತ ವ್ಯಾಪ್ತಿ ಗುರುತಿಸುವ ಅಧಿಕಾರವನ್ನು ಕೇಂದ್ರವು ರಾಜ್ಯಗಳಿಗೇ ನೀಡಿದರೆ ಕಂಟೈನ್‌ಮೆಂಟ್‌ ಪ್ರದೇಶ ಬಿಟ್ಟು ಉಳಿದೆಡೆ ಸಹಜ ಸ್ಥಿತಿ ನಿರ್ಮಾಣವಾಗುವ ನಿರೀಕ್ಷೆ ಮೂಡಿದೆ.ಅದಕ್ಕೆ ಪುಷ್ಟಿ ನೀಡುವಂತೆ ಬಿಎಂಟಿಸಿಯು ಮೇ 18ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸಿಬಂದಿಗೆ ಸೂಚಿಸಿದೆ.

ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಹೆಚ್ಚಿನ ನಿರ್ಬಂಧಗಳಿರುವುದಿಲ್ಲ. ಜನಜೀವನ ಸಹಜ ಸ್ಥಿತಿಗೆ ಮರಳಬಹುದು. ಕೇಂದ್ರವು ಮೇ 17ರ ಅನಂತರ ಪಂಚತಾರಾ ಹೊಟೇಲ್‌ ಹೊರತುಪಡಿಸಿ ಉಳಿದ ಬಹುತೇಕ ನಿರ್ಬಂಧ ಸಡಿಲಿಸಬಹುದು ಎಂಬುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಹೇಳಿದ್ದರು.

ಸೆಲೂನ್‌ಗಳು, ಫಿಟ್‌ನೆಸ್‌ ಕೇಂದ್ರಗಳು, ಹೊಟೇಲ್‌ಗ‌ಳಲ್ಲಿ ಚಟುವಟಿಕೆ ಆರಂಭಕ್ಕೂ ಅವಕಾಶ ನೀಡುವ ನಿರೀಕ್ಷೆಯಲ್ಲಿ ರಾಜ್ಯ ಸರಕಾರವಿದೆ. ಕಂಟೈನ್‌ಮೆಂಟ್‌ ಪ್ರದೇಶ ಬಿಟ್ಟು ಬಹುತೇಕ ಸಹಜ ಸ್ಥಿತಿ ನಿರ್ಮಾಣಕ್ಕೆ ಪೂರಕ ಕ್ರಮಗಳನ್ನು ಹಂತಹಂತವಾಗಿ ಕೈಗೊಳ್ಳಲು ಚಿಂತಿಸಿದೆ. ಕೇಂದ್ರದ ಮಾರ್ಗಸೂಚಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಿದೆ.

ಮತ್ತೆ 36 ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಹಾವಳಿ ಹೆಚ್ಚಾಗು ತ್ತಿದ್ದು, ಶನಿವಾರ ಬೆಂಗಳೂರಿನಲ್ಲಿ 14 ಪ್ರಕರಣಗಳು ಸೇರಿ ಒಟ್ಟು 36 ಪ್ರಕರಣಗಳು ದೃಢಪಟ್ಟಿವೆ.ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 1,092ಕ್ಕೆ ಏರಿದೆ.ಕಳೆದ 48 ತಾಸುಗಳಲ್ಲಿ 105 ಮಂದಿಗೆ ಸೋಂಕು ದೃಢವಾಗಿದೆ.ಬೆಂಗಳೂರಿನಲ್ಲಿ ವರದಿಯಾದ ಎಲ್ಲ ಪ್ರಕರಣಗಳು ಶಿವಾಜಿನಗರದ ಸೋಂಕುಪೀಡಿತ ಹೊಟೇಲ್‌ ಹೌಸ್‌ ಕೀಪಿಂಗ್‌ ಸಿಬಂದಿಯ ದ್ವಿತೀಯ ಸಂಪರ್ಕದಿಂದ ಹರಡಿದವು ಆಗಿವೆ.

ಕೆಲವು ದಿನಗಳ ಹಿಂದೆ ಹಸುರು ವಲಯ ದಲ್ಲಿದ್ದ ಹಾಸನದಲ್ಲಿ ಶನಿವಾರ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಶನಿವಾ ರದ 36 ಪ್ರಕರಣಗಳಲ್ಲಿ 10ಕ್ಕೆ ಮಹಾರಾಷ್ಟ್ರದ ನಂಟಿದ್ದರೆ, ತಲಾ ಒಂದು ದುಬಾೖ, ಅಹ್ಮದಾಬಾದ್‌ ಪ್ರಯಾಣ ಹಿನ್ನೆಲೆಯವು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.