ಕೇರಳ ಚುನಾವಣಾ ಅಖಾಡ: ಪಿಣರಾಯಿ ವಿರುದ್ಧ ವಾಳಯಾರ್ ಹೆಣ್ಮಕ್ಕಳ ತಾಯಿ ಸ್ಪರ್ಧೆ
ರಾಜ್ಯ ಸರಕಾರದ ನೀತಿಯನ್ನು ಪ್ರತಿಭಟಿಸಿ ಈ ತಾಯಿ ಕೇಶಮುಂಡನ ಮಾಡಿಸಿಕೊಂಡಿದ್ದರು.
Team Udayavani, Mar 16, 2021, 6:38 PM IST
ಕಾಸರಗೋಡು, ಮಾ.16: ತೃಶ್ಶೂರಿನ ವಾಳಯಾರ್ನಲ್ಲಿ ಲೈಂಗಿಕ ಕಿರುಕುಳದ ಬಳಿಕ ಕೊಲೆಯಾದ ಹೆಣ್ಮಕ್ಕಳ ತಾಯಿ ಧರ್ಮಡ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಸ್ಪರ್ಧಿಸಲಿದ್ದಾರೆ. ತೃಶ್ಶೂರು ಪ್ರೆಸ್ ಕ್ಲಬ್ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ತನ್ನ ಮಕ್ಕಳಿಗೆ ನ್ಯಾಯ ಲಭಿಸಲು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೆಣ್ಮಕ್ಕಳ ತಾಯಿ ಹೇಳಿದ್ದಾರೆ. ತನ್ನನ್ನು ಬೀದಿಗಿಳಿಸಿದ ಡಿವೈಎಸ್ಪಿ ಸೋಜನ್ ತನಗಿಂತ ಕೆಳಮಟ್ಟದಲ್ಲಿ ಒಂದು ದಿನ ತಲೆಯಲ್ಲಿ ಟೋಪಿಯಿಲ್ಲದೆ ಕಾಣಲು ಆಗ್ರಹಿಸುತ್ತಿದ್ದೇನೆ. ಸೋಜನ್ನಂತೆ ಹಲವಾರು ಪೊಲೀಸರು ಬಡ ಹೆಣ್ಮಕ್ಕಳ ಕೇಸುಗಳನ್ನು ವಸ್ತುನಿಷ್ಠವಾಗಿ ತನಿಖೆ ನಡೆಸಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ತೋರಿದ್ದು ಈ ಕಾರಣದಿಂದಲೇ ಎಂದಿದ್ದಾರೆ. ಇಂತಹ ಎಲ್ಲಾ ಕುಟುಂಬಗಳ ಪರವಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸಹೋದರಿಯರು ಲೈಂಗಿಕ ಕಿರುಕುಳಕ್ಕೆ ತುತ್ತಾಗಿ ಕೊಲೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಬುಡಮೇಲುಗೊಳಿಸಿದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳದ ರಾಜ್ಯ ಸರಕಾರದ ನೀತಿಯನ್ನು ಪ್ರತಿಭಟಿಸಿ ಈ ತಾಯಿ ಕೇಶಮುಂಡನ ಮಾಡಿಸಿಕೊಂಡಿದ್ದರು. ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಜ.26 ರಿಂದ ಪಾಲ್ಗಾ ಟ್ನಲ್ಲಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ