ಪ್ರಚೋದನೆ ಸಾಬೀತಾಗಬೇಕು: ಸುಪ್ರೀಂ ಕೋರ್ಟ್
Team Udayavani, Oct 4, 2020, 1:44 AM IST
ಹೊಸದಿಲ್ಲಿ: “”ಒಬ್ಬ ವ್ಯಕ್ತಿಯ ಆತ್ಮಹತ್ಯೆಯ ಹಿಂದೆ ಬೇರೊಬ್ಬ ವ್ಯಕ್ತಿಯ ಪ್ರಚೋದನೆಯೇ ಕಾರಣ ಎಂಬುದನ್ನು ಆ ಪ್ರಕರಣದ ತನಿಖಾ ವರದಿಯಲ್ಲಾಗಲೀ ಅಥವಾ ವಿಚಾರಣೆ ಹಂತದಲ್ಲಾಗಲೀ ಸಾಬೀತುಪಡಿಸಬೇಕು” ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ.
1997ರಲ್ಲಿ ಸಂಭವಿಸಿದ್ದ ಪಂಜಾಬ್ನ ವಿವಾಹಿತ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಕರಣವೊಂದರಲ್ಲಿ ಆಕೆಯ ಪತಿಯೇ ಆತ್ಮಹತ್ಯೆಗೆ ಪರೋಕ್ಷವಾಗಿ ಪ್ರಚೋದನೆ ನೀಡಿದ್ದಾರೆಂದು ಪರಿಗಣಿಸಿದ್ದ ಪಂಜಾಬ್ನ ಕೆಳ ನ್ಯಾಯಾಲಯ ಹಾಗೂ ಅಲ್ಲಿನ ಹೈಕೋರ್ಟ್ ಗುರುಚರಣ್ ಸಿಂಗ್ ಎಂಬವರಿಗೆ ಜೈಲು ಶಿಕ್ಷೆ ವಿಧಿಸಿತ್ತು.
ಆದರೆ, ಕೆಳಹಂತದ ನ್ಯಾಯಾಲಯ ನೀಡಿದ್ದ ತೀರ್ಪನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ, “”ಅಪರಾಧದ ಹಿಂದೆ ಪ್ರಚೋದನೆಯ ಪಾತ್ರವನ್ನು ಕೇವಲ ಮೇಲ್ನೋಟಕ್ಕೆ ಊಹಿಸುವುದು ಸಲ್ಲದು. ಆ ಪ್ರಚೋದನೆಯ ಕಾರಣ, ಪ್ರಕರಣದ ತನಿಖೆಯಲ್ಲಾಗಲೀ, ನ್ಯಾಯಾಲಯದ ವಿಚಾರಣೆಯಲ್ಲಾಗಲೀ ಸೂಕ್ತ ಸಾûಾ$Âಧಾರಗಳ ಮೂಲಕ ಸಾಬೀತಾಗಬೇಕು” ಎಂದು ಹೇಳಿರುವುದಲ್ಲದೆ, ಗುರುಚರಣ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ