ಮುದ್ದೇಬಿಹಾಳ : ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, May 12, 2022, 9:04 PM IST
ಮುದ್ದೇಬಿಹಾಳ : ವಿಜಯಪುರ ಮುಖ್ಯ ರಸ್ತೆ ಮುದ್ದೇಬಿಹಾಳ – ಢವಳಗಿ ನಡುವೆ ಗುರುವಾರ ರಾತ್ರಿ ಸಂಭವಿಸಿದ ಕಾರು, ಬೈಕ್ ಅಪಘಾತದಲ್ಲಿ ಬೈಕ್ ಸವಾರ ಹಳ್ಳೂರು ಗ್ರಾಮದ ಮೋಹನ ಶಿವಪ್ಪ ಮಾದರ (32) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಾರು ಬೈಕ್ ಗೆ ಢಿಕ್ಕಿ ಹೊಡೆದು ಬಳಿಕ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಭಾರೀ ಗಾಳಿ, ಮಳೆಯಿಂದಾಗಿ ಎದುರಿನ ವಾಹನ ಕಾಣದೆ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.
ಘಟನೆ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.
ಇದನ್ನೂ ಓದಿ : ಗ್ಯಾಸ್ ಸಿಲಿಂಡರ್ ಲಾರಿಯಲ್ಲಿ ಅಗ್ನಿ ಅವಘಡ: ಸ್ಥಳೀಯರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ