ಯಾರಿಗೆ ಗುರುಬಲ?

ವಿಶ್ವಾಸಮತ ಯಾಚನೆಗೆ ಗುರುವಾರ ಮುಹೂರ್ತ ನಿಗದಿ

Team Udayavani, Jul 16, 2019, 6:00 AM IST

HDKJ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರಕಾರದ ಅಗ್ನಿಪರೀಕ್ಷೆಯಾದ ವಿಶ್ವಾಸಮತ ಯಾಚನೆಗೆ ಗುರುವಾರ ಸಮಯ ನಿಗದಿಪಡಿಸಲಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳು ತಾರ್ಕಿಕ ಅಂತ್ಯ ಕಾಣುವ ಹಂತಕ್ಕೆ ತಲುಪಿವೆ.

ವಿಶ್ವಾಸಮತ ಯಾಚನೆ ನಿರ್ಣಯ ಮಂಡನೆಯಾಗಿ ಬಹುಮತ ಸಾಬೀತು ಬಳಿಕವಷ್ಟೇ ಸದನದ ಇತರ ಕಲಾಪ ನಡೆಯಬೇಕು. ಇಲ್ಲದಿದ್ದರೆ ನಾವು ಕಲಾಪಕ್ಕೆ ಬರುವುದಿಲ್ಲ ಎಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದ್ದರಿಂದ ಗುರುವಾರ ಬೆಳಗ್ಗೆ 11 ಗಂಟೆಯವರೆಗೂ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ.

ಮಂಗಳವಾರ ಶಾಸಕರ ರಾಜೀನಾಮೆ ಅಂಗೀಕಾರ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು ಅಲ್ಲಿನ ತೀರ್ಪು ನೋಡಿಕೊಂಡು ಕಾಂಗ್ರೆಸ್‌- ಜೆಡಿಎಸ್‌ ಮುಂದಿನ ಕಾರ್ಯತಂತ್ರ ರೂಪಿಸಲು ನಿರ್ಧರಿಸಿವೆ. ಅದೇ ರೀತಿ ವಿಪಕ್ಷ ಬಿಜೆಪಿ ಸಹ ಸುಪ್ರೀಂ ಕೋರ್ಟ್‌ನ ತೀರ್ಪಿನತ್ತ ಚಿತ್ತ ನೆಟ್ಟಿದೆ.

ಈ ಕ್ಷಣದವರೆಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ವಿಶ್ವಾಸಮತ ಗೆಲ್ಲುವ ಭರವಸೆಯಿದ್ದರೆ, ವಿಪಕ್ಷ ಬಿಜೆಪಿಗೆ ಸಮ್ಮಿಶ್ರ ಸರಕಾರ ಪತನಗೊಳ್ಳುವ ವಿಶ್ವಾಸವಿದೆ. ಗುರುವಾರದವರೆಗೂ ಯಾವೆಲ್ಲ ರಾಜಕೀಯ ವಿದ್ಯಮಾನಗಳು ನಡೆಯಲಿವೆ ಎಂಬುದರ ಆಧಾರದ ಮೇಲೆ ಎಲ್ಲವೂ ನಿಂತಿದೆ.

ಸಮಯ ನಿಗದಿ
ವಿಧಾನಸೌಧದಲ್ಲಿ ಸೋಮವಾರ ಸ್ಪೀಕರ್‌ ರಮೇಶ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಗೊಳಿಸುವ ಬಗ್ಗೆ ಚರ್ಚೆ ನಡೆದು ಗುರುವಾರ ಸಮಯ ನಿಗದಿಪಡಿಸಲಾಯಿತು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸಹಿತ ಮೂರೂ ಪಕ್ಷಗಳ ನಾಯಕರು ಭಾಗವಹಿಸಿದ್ದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಪ್ರಸ್ತಾವ ಮಾಡಿದ್ದು ಬುಧವಾರ ಸಮಯ ಕೋರಿದ್ದಾರೆ.

ಆದರೆ ವಿಪಕ್ಷ ನಾಯಕರನ್ನೊಳಗೊಂಡ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂಬ ಸಂಪ್ರದಾಯ ದಂತೆ ಇಂದುಸಭೆ ಕರೆಲಾಗಿದೆ ಎಂದು ಸ್ಪೀಕರ್‌ ತಿಳಿಸಿ ದರು. ಅನಂತರ ಗುರುವಾರ ವಿಶ್ವಾಸ  ಮತಯಾಚನೆಗೆ ಒಮ್ಮತದಿಂದ ಸಮಯ ನಿಗದಿಪಡಿಸಲಾಯಿತು.

ಸ್ಪೀಕರ್‌ ರಮೇಶ್‌ ಕುಮಾರ್‌ ಅವರು ಸದನಕ್ಕೆ ಕಲಾಪ ಸಲಹಾಸಮಿತಿಯಲ್ಲಿ ನಡೆದ ಚರ್ಚೆಯ ಮಾಹಿತಿ ನೀಡಿದರು. ಬೆಳಗ್ಗೆ ಬಿಜೆಪಿಯ ಸಿ.ಎಂ. ಉದಾಸಿ ಸಹಿತ ಶಾಸಕರು ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ತಮ್ಮ ಕಚೇರಿಗೆ ಬಂದಿದ್ದರು. ಈಗಾಗಲೇ ಮುಖ್ಯಮಂತ್ರಿ ವಿಶ್ವಾಸಮತ ಯಾಚನೆ ಪ್ರಸ್ತಾವ ಮಾಡಿರುವುದರಿಂದ ಕಲಾಪ ಸಲಹಾ ಸಮಿತಿಯಲ್ಲಿ ಆ ಕುರಿತು ಸಮಯ ನಿಗದಿ ಮಾಡುವುದರಿಂದ ಅಲ್ಲೇ ತೀರ್ಮಾನವಾಗುತ್ತದೆ ಎಂದು ಹೇಳಿದ್ದೆ. ಅದರಂತೆ ಸಭೆಯಲ್ಲಿ ಚರ್ಚೆ ನಡೆದು ಗುರುವಾರ ವಿಶ್ವಾಸಮತ ಯಾಚನೆ ನಿರ್ಣಯ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಲು ಸಮಯ ನಿಗದಿಪಡಿಸಲು ಎಲ್ಲರೂ ಒಪ್ಪಿದ್ದಾರೆ ಎಂದರು.

ಈ ಮಧ್ಯೆ, ಅಲ್ಲಿಯವರೆಗೂ ಕಲಾಪ ನಡೆಸುವುದೋ ಬೇಡವೋ ಎಂಬ ಬಗ್ಗೆಯೂ ಪ್ರಸ್ತಾವವಾಗಿ ಸಂಸತ್‌ನಲ್ಲಿ ಯಾವ ಪರಿಪಾಠ ಇದೆ ಎಂದೆಲ್ಲ ಮಾಹಿತಿ ಪಡೆದು ತೀರ್ಮಾನಿಸಲು ನಾನು ನಿರ್ಧರಿಸಿದ್ದೆ. ಆದರೆ ಯಡಿಯೂರಪ್ಪ, ಸರಕಾರ ಬಹುಮತ ಸಾಬೀತು ಮಾಡುವರೆಗೂ ಯಾವುದೇ ಕಲಾಪ ಬೇಡ, ಕಲಾಪ ನಡೆಸಿದರೂ ನಾವು ಹಾಜರಾಗುವುದಿಲ್ಲ ಎಂದು ತಿಳಿಸಿದರು. ಹೀಗಾಗಿ ಕಲಾಪ ನಡೆಸು ವುದರಲ್ಲಿ ಅರ್ಥವಿಲ್ಲ ಎಂದು ಗುರುವಾರದವರೆಗೂ ಸದನ ಮುಂದೂಡಲಾಗಿದೆ ಎಂದರು.

ಗುರುವಾರ ಬಿಎಸ್‌ವೈ ದಿಲ್ಲಿಗೆ?
ವಿಶ್ವಾಸಮತ ಯಾಚನೆ ಪ್ರಕ್ರಿಯೆ ಒಂದೇ ದಿನದಲ್ಲಿ ಮುಗಿದು ಸರಕಾರ ಪತನ ಗೊಂಡರೆ ಹೊಸದಾಗಿ ಸರಕಾರ ರಚನೆ ಸಂಬಂಧ ಯಡಿಯೂರಪ್ಪ ಅವರು ದಿಲ್ಲಿಗೆ ತೆರಳಿ ಹೈಕಮಾಂಡ್‌ ನಾಯಕರ ಜತೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ. ವಿಶ್ವಾಸಮತ ನಿರ್ಣಯ ಮಂಡನೆಗೆ ಗುರುವಾರ ದಿನಾಂಕ ನಿಗದಿಯಾಗಿರುವುದರಿಂದ ಈಗಾಗಲೇ ಕೇಂದ್ರ ನಾಯಕರ ಜತೆ ಮುಂದಿನ ಸಾಧ್ಯಾ-ಸಾಧ್ಯತೆಗಳ ಬಗ್ಗೆಯೂ ಯಡಿಯೂರಪ್ಪ ಚರ್ಚಿಸಿದ್ದಾರೆ ಎನ್ನಲಾಗಿದೆ.

ಗುರುವಾರ ವಿಶ್ವಾಸಮತ ಯಾಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸ್ಪೀಕರ್‌ ಅವರು ಸೂಚಿಸಿದ್ದಾರೆ. ಗುರುವಾರದವರೆಗೂ ಬೆಳವಣಿಗೆ ಕಾದು ನೋಡುತ್ತೇವೆ.
– ಬಿ.ಎಸ್‌. ಯಡಿಯೂರಪ್ಪ ವಿಪಕ್ಷ ನಾಯಕ

ಗುರುವಾರ ವಿಶ್ವಾಸಮತ ಯಾಚನೆಗೆ ಒಪ್ಪಿಗೆ ನೀಡಿದ್ದೇವೆ. ಬಿಜೆಪಿ ನಾಯಕರೂ ಇದಕ್ಕೆ ಒಪ್ಪಿಕೊಂಡಿದ್ದಾರೆ. ನಮಗೆ ವಿಶ್ವಾಸ ಇರುವುದರಿಂದಲೇ ವಿಶ್ವಾಸಮತ ಯಾಚನೆಗೆ ಮುಂದಾಗಿರುವುದು.
– ಸಿದ್ದರಾಮಯ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷ ನಾಯಕ

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.