Mukesh Ambani; ಸ್ನೇಹಿತ, ರಿಲಯನ್ಸ್‌ ಉದ್ಯೋಗಿಗೆ 1,500 ಕೋಟಿ ರೂ. ಮೌಲ್ಯದ ಬಂಗಲೆ ಉಡುಗೊರೆ

ಕೆಲವೊಂದು ಪೀಠೋಪಕರಣಗಳನ್ನು ಇಟಲಿಯಿಂದ ಖರೀದಿಸಲಾಗಿದೆ

Team Udayavani, Apr 25, 2023, 2:53 PM IST

Mukesh Ambani; ಸ್ನೇಹಿತ, ರಿಲಯನ್ಸ್‌ ಉದ್ಯೋಗಿಗೆ 1,500 ಕೋಟಿ ರೂ. ಮೌಲ್ಯದ ಬಂಗಲೆ ಉಡುಗೊರೆ

ಮುಂಬೈ: ಭಾರತದ ಆಗರ್ಭ ಶ್ರೀಮಂತ ಉದ್ಯಮಿ, ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ತನ್ನ  ಆಪ್ತ, ಕಂಪನಿಯ ಉದ್ಯೋಗಿಯೊಬ್ಬರಿಗೆ ಮುಂಬೈಯಲ್ಲಿ ಬರೋಬ್ಬರಿ 1,500 ಕೋಟಿ ರೂಪಾಯಿ ಮೌಲ್ಯದ ಬೃಹತ್‌ ಬಂಗಲೆಯನ್ನು ಉಡುಗೊರೆಯಾಗಿ ನೀಡಿರುವುದಾಗಿ ಡಿಎನ್‌ ಎ ವರದಿ ಮಾಡಿದೆ.

ಇದನ್ನೂ ಓದಿ:ಗೇಮ್‌ ಆಡುತ್ತಿರುವಾಗ ಮೊಬೈಲ್‌ ಸ್ಫೋಟಗೊಂಡು 8 ವರ್ಷದ ಬಾಲಕಿ ಮೃತ್ಯು

ಮುಕೇಶ್‌ ಅಂಬಾನಿಯವರ ಬಲಗೈ ಬಂಟ ಎಂದೇ ಜನಪ್ರಿಯರಾಗಿರುವ ಮನೋಜ್‌ ಮೋದಿಗೆ ಮುಂಬೈನ ನೇಪಿಯನ್‌ ಸೀ ರೋಡ್‌ ಸಮೀಪದಲ್ಲಿರುವ ಬಂಗಲೆಯನ್ನು ಉಡುಗೊರೆಯಾಗಿ ನೀಡಲಾಗಿದೆ.

ಮ್ಯಾಜಿಕ್‌ ಬ್ರಿಕ್ಸ್‌ ಡಾಟ್‌ ಕಾಮ್‌ ವರದಿ ಪ್ರಕಾರ, 1.7 ಲಕ್ಷ ಚದರ ಅಡಿಯಷ್ಟು ವಿಸ್ತಾರದ ಪ್ರದೇಶದಲ್ಲಿ 22 ಅಂತಸ್ತುಗಳ ಬಹುಮಹಡಿ ಕಟ್ಟಡವನ್ನು ಮನೋಜ್‌ ಮೋದಿಯವರಿಗೆ ನೀಡಲಾಗಿದ್ದು, ಇದು 1,500 ಕೋಟಿ ರೂಪಾಯಿ ಮೌಲ್ಯದ ಆಸ್ತಿಯಾಗಿದೆ ಎಂದು ತಿಳಿಸಿದೆ.

ಮುಕೇಶ್‌ ಅಂಬಾನಿ ಉಡುಗೊರೆಯಾಗಿ ನೀಡಿರುವ ಈ ಬಂಗಲೆಯನ್ನು ತಲಾತಿ ಮತ್ತು ಎಲ್‌ ಎಲ್‌ ಪಿ ಪಾರ್ಟನರ್ಸ್‌ ವಿನ್ಯಾಸಗೊಳಿಸಿದ್ದು, ಕೆಲವೊಂದು ಪೀಠೋಪಕರಣಗಳನ್ನು ಇಟಲಿಯಿಂದ ಖರೀದಿಸಲಾಗಿದೆ ಎಂದು ಡಿಎನ್‌ ಎ ವರದಿ ವಿವರಿಸಿದೆ.

ಯಾರಿವರು ಮನೋಜ್‌ Modi :

ಮನೋಜ್‌ ಮೋದಿ ಅವರು ಮುಕೇಶ್‌ ಅಂಬಾನಿಯ ಬ್ಯಾಚ್‌ ಮೇಟ್.‌ ಇವರಿಬ್ಬರು ಕಾಲೇಜು ವಿದ್ಯಾಭ್ಯಾಸ ಹಾಗೂ ಮುಂಬೈ ಯೂನಿರ್ವಸಿಟಿಯ ಕೆಮಿಕಲ್‌ ಟೆಕ್ನಾಲಜಿ ಪದವಿಯಿಂದ ಈವರೆಗೂ ಆತ್ಮೀಯ ಗೆಳೆಯರಾಗಿದ್ದಾರೆ. ಮುಕೇಶ್‌ ಅಂಬಾನಿಯ ತಂದೆ ಧೀರೂಭಾಯಿ ಅಂಬಾನಿ ರಿಲಯನ್ಸ್‌ ಕಂಪನಿಯನ್ನು ಮುನ್ನಡೆಸುತ್ತಿದ್ದ (1980) ಸಂದರ್ಭದಲ್ಲಿ ಮನೋಜ್‌ ಮೋದಿ ಕಂಪನಿಗೆ ಸೇರ್ಪಡೆಗೊಂಡಿದ್ದರು. ಆ ಬಳಿಕ ಮುಕೇಶ್‌ ಮತ್ತು ನೀತಾ ಅಂಬಾನಿ ಜೊತೆ ದಶಕಗಳಿಂದಲೂ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಮನೋಜ್‌ ಮೋದಿ ಅವರು ಆಕಾಶ್‌ ಅಂಬಾನಿ ಮತ್ತು ಇಶಾ ಅಂಬಾನಿಯ ಜೊತೆ ಕಾರ್ಯನಿರ್ವಹಿಸುತ್ತಿದ್ದಾರೆ. ರಿಲಯನ್ಸ್‌ ಕಂಪನಿಯ ಬಹುಕೋಟಿ ರೂಪಾಯಿ ಒಪ್ಪಂದಗಳ ಹಿಂದಿನ ರೂವಾರಿ ಈ ಮನೋಜ್‌ ಮೋದಿ. ಪ್ರಸ್ತುತ ಮೋದಿ ರಿಲಯನ್ಸ್‌ ರಿಟೈಲ್‌ ಮತ್ತು ರಿಲಯನ್ಸ್‌ ಜಿಯೋದ ನಿರ್ದೇಶಕರಾಗಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.