ಮೂಳೂರು : ವಾಹನಗಳೆರಡು ಢಿಕ್ಕಿ, ಸಂಚಾರ ಅಸ್ತವ್ಯಸ್ತ
Team Udayavani, May 27, 2020, 10:01 AM IST
ಕಾಪು : ಶಿವಮೊಗ್ಗದಿಂದ ಮಂಗಳೂರು ಕಡೆ ಸಾಗುತ್ತಿದ್ದ ಪಿಕ್ಆಪ್ ವಾಹನವೊಂದು ಹೆದ್ದಾರಿ ಮದ್ಯೆ ಪಲ್ಟಿ ಹೊಡೆದು ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ರಾ.ಹೆ. 66 ರ ಮೂಳೂರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ಬಳಿ ಬುಧವಾರ ಮುಂಜಾನೆ ನಡೆದಿದೆ.
ಬಾಳೆಹಣ್ಣು ತುಂಬಿಸಿಕೊಂಡು ಮಂಗಳೂರಿಗೆ ತೆರಳುತ್ತಿದ್ದ ಮಿನಿ ಟೆಂಫೋ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಿಂಬದಿಯಲ್ಲಿ ಮೀನು ತುಂಬಿಸಿಕೊಂಡು ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಬಾಳೆಹಣ್ಣು ವಾಹನದ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅರ್ಧ ಗಂಟೆಗಳ ಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರ ಸುಗಮಗೊಳಿಸಿದ್ದಾರೆ.