ಕೊಲೆ ಪ್ರಕರಣ: ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ
Team Udayavani, May 22, 2021, 10:11 PM IST
ಹೊಸದಿಲ್ಲಿ : ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಪಂಜಾಬ್ನ ಭಟಿಂಡಾದಲ್ಲಿ ಶನಿವಾರ ಬಂಧನಕ್ಕೊಳಗಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿ ಯಾಗಿ ತಲೆಮರೆಸಿಕೊಂಡಿದ್ದ ಅವರನ್ನು ಬಂಧಿಸಲು ಕಡೆಗೂ ದಿಲ್ಲಿ ಪೊಲೀಸರು ಯಶಸ್ವಿಯಾದರು. ಅವರನ್ನು ಹೆಚ್ಚಿನ ವಿಚಾರಣೆಗಾಗಿ ಹೊಸದಿಲ್ಲಿಗೆ ಒಯ್ಯಲಾಗಿದೆ.
ಹೊಸದಿಲ್ಲಿಯ ಛತ್ರಸಾಲ ಮೈದಾನದಲ್ಲಿ ಮೇ 4ರ ರಾತ್ರಿ ನಡೆದ ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಹೆಸರು ಕೇಳಿಬಂದಿತ್ತು. ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಅವರು ಈ ಹತ್ಯೆ ಮಾಡಿದ್ದಾರೆಂಬುದು ಸುಶೀಲ್ ಮೇಲಿನ ಆರೋಪವಾಗಿತ್ತು. ಬಳಿಕ ಸುಶೀಲ್ ತಲೆಮರೆಸಿಕೊಂಡಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಇದನ್ನು ದಿಲ್ಲಿ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು.
ಇದನ್ನೂ ಓದಿ :ಮೇ.30ಕ್ಕೆ ಮೋದಿ ಸರಕಾರ ಅಧಿಕಾರಕ್ಕೆ ಬಂದು 7 ವರ್ಷ, ಸಂಭ್ರಮಾಚರಣೆ ಬೇಡವೆಂದು ನಡ್ಡಾ ಮನವಿ
ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಕಂಚು, ಲಂಡನ್ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಸುಶೀಲ್ ಅವರನ್ನು ಲಕ್ಷಾಂತರ ಭಾರತೀಯರು ಆರಾಧಿಸುತ್ತಿದ್ದರು. ಈಗ ತಮ್ಮ ಹೆಸರು ಕೆಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ