UP Viral Video: ರಂಜಾನ್ ಆರಂಭಕ್ಕೂ ಮುನ್ನ ಮುಸ್ಲಿಂ ವ್ಯಕ್ತಿ ಹಿಂದೂ ಧರ್ಮಕ್ಕೆ ಮತಾಂತರ!
ಹಿಂದೂ ಧಾರ್ಮಿಕ ವಿಧಿ ವಿಧಾನ ನೆರವೇರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
Team Udayavani, Mar 12, 2024, 2:53 PM IST
ಲಕ್ನೋ: ರಂಜಾನ್ ಉಪವಾಸ ಆರಂಭಕ್ಕೂ ಮುನ್ನ ಉತ್ತರಪ್ರದೇಶದ ಸಹರಾನ್ ಪುರದಲ್ಲೊಂದು ಅಪರೂಪದ ಘಟನೆ ನಡೆದಿದ್ದು, ಇಲ್ಲಿನ ಮೊಹಮ್ಮದ್ ಸಾಜಿದ್ ಎಂಬಾತ ತನ್ನ ಹಿಂದೂ ಧರ್ಮದ ಪತ್ನಿಗೆ ಮುಸ್ಲಿಂ ಯುವಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಪ್ರಕರಣ ನಡೆದಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಟ್ರಕ್ ಡಿಕ್ಕಿ ಹೊಡೆದು ಬಸ್ಸಿನ ಫುಟ್ಬೋರ್ಡ್ ಮೇಲೆ ನಿಂತಿದ್ದ 3 ವಿದ್ಯಾರ್ಥಿಗಳ ದಾರುಣ ಅಂತ್ಯ
ಮೊಹಮ್ಮದ್ ಸಾಜಿದ್ ಇದೀಗ ತನ್ನ ಹೆಸರನ್ನು ಸತ್ಬೀರ್ ರಾಣಾ ಎಂದು ಬದಲಾಯಿಸಿಕೊಂಡಿದ್ದು, ಈ ಬೆಳವಣಿಗೆಯ ನಂತರ ಸತ್ಬೀರ್ ಮತ್ತು ಪತ್ನಿ ಅನಿತಾ ಜತೆಯಾಗಿ ಹಿಂದೂ ಧಾರ್ಮಿಕ ವಿಧಿ ವಿಧಾನ ನೆರವೇರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಪತ್ನಿ ಹಿಂದೂ ಎಂಬ ಕಾರಣಕ್ಕಾಗಿಯೇ ಕೆಲವು ವರ್ಷಗಳಿಂದ ಸ್ಥಳೀಯ ಜನರು ನಮಗೆ ಕಿರುಕುಳ ನೀಡುತ್ತಿದ್ದು, ಈ ಕಾರಣದಿಂದಾಗಿಯೇ ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಜಿದ್ ಅಲಿಯಾಸ್ ರಾಣಾ ತಿಳಿಸಿರುವುದಾಗಿ ಮಾಧ್ಯಮ ವರದಿ ತಿಳಿಸಿದೆ.
#सहारनपुर:रमजान से पहले मुस्लिम युवक साजिद ने हिंदू सनातन धर्म में घर की वापसी,साजिद से बना सतवीर राणा
मुस्लिम युवक साजिद हरि मंदिर में पूजा कर बना सतबीर राणा, हिंदू युक्ति से शादी करने के बाद मुस्लिम युवक साजिद के परिजन साजिद को करते थे परेशान, मानसिक तनाव और रोज-रोज की… pic.twitter.com/VPa7GITR4q
— NEWSNOWLIVE (@newsnowlivee) March 12, 2024
ಸಹರಾನ್ ಪುರದ ನಕುಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮೊಹಮ್ಮದ್ ಸಾಜಿದ್ (36ವರ್ಷ) ಸುಮಾರು ನಾಲ್ಕು ವರ್ಷದ ಹಿಂದೆ ಹಿಂದೂ ಮಹಿಳೆ ಅನಿತಾ ಎಂಬಾಕೆಯನ್ನು ವಿವಾಹವಾಗಿದ್ದ. ಮದುವೆಯ ನಂತರ ಮುಸ್ಲಿಮ್ ಸಮುದಾಯ ಹಾಗೂ ತನ್ನ ಕುಟುಂಬ ಸದಸ್ಯರು ತಾನು ಹಿಂದೂವಾಗುತ್ತೇನೆ ಎಂದು ಆರೋಪಿಸಿ, ಕಿರುಕುಳ ಕೊಡಲು ಆರಂಭಿಸಿರುವುದಾಗಿ ಸಾಜಿದ್ ಆರೋಪಿಸಿದ್ದಾನೆ.
ಹಿಂದೂ ಮಹಿಳೆಯನ್ನು ವಿವಾಹವಾಗಿದ್ದಕ್ಕೆ ಮನೆಯನ್ನು ಬಿಡುವಂತೆ ಮಾಡಿದ್ದು, ನಂತರ ಬಾಡಿಗೆ ಮನೆಯಲ್ಲಿ ವಾಸ ಮಾಡಲು ಆರಂಭಿಸಿರುವುದಾಗಿ ಸಾಜಿದ್ ತಿಳಿಸಿದ್ದು, ಕಿರುಕುಳದಿಂದ ಬೇಸತ್ತು ಹಿಂದೂ ಧಾರ್ಮಿಕ ಸಂಘಟನೆಗಳ ಜತೆ ತನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದ. ಅದರಂತೆ ಸಹರಾನ್ ಪುರದ ಅವಾಸ್ ವಿಕಾಸ್ ಹರಿ ಮಂದಿರದಲ್ಲಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಸಾಜಿದ್ ಅಲಿಯಾಸ್ ರಾಣಾ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ