ತೆಲಂಗಾಣ: 9 ಮಂದಿ ವಲಸಿಗರ ಸಾವು
Team Udayavani, May 22, 2020, 7:51 PM IST
ಹೈದರಾಬಾದ್: ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಒಂಬತ್ತು ಜನ ವಲಸಿಗರು ಮೃತಪಟ್ಟಿರುವ ಘಟನೆ ವಾರಂಗಲ್ ಜಿಲ್ಲೆಯ ಗೊರೆಕುಂಟಾ ಗ್ರಾಮದಲ್ಲಿ ನಡೆದಿದೆ.
ಕೊರೆಕುಂಟಾ ಗ್ರಾಮದ ಕೋಲ್ಡ್ ಸ್ಟೋರೇಜ್ ಘಟಕದ ಪಕ್ಕದಲ್ಲಿರುವ ತೆರೆದ ಬಾವಿಯಲ್ಲಿ ಕುಟುಂಬದ ಆರು ಮಂದಿ ಸೇರಿ ಒಂಬತ್ತು ಜನರು ಸಾವನ್ನಪ್ಪಿದ್ದು, ಗುರುವಾರ ಸಂಜೆ ನಾಲ್ಕು ಶವಗಳು ಪತ್ತೆಯಾಗಿದ್ದರೆ, ಶುಕ್ರವಾರ ಬೆಳಗ್ಗೆ ಐದು ಶವಗಳು ಪತ್ತೆಯಾಗಿವೆ. ಮೃತಪಟ್ಟವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಪಶ್ಚಿಮ ಬಂಗಾಳ ಮೂಲದ ಮಕ್ಸೂದ್ ಆಲಂ ಮತ್ತು ಅವರ ಪತ್ನಿ ನಿಶಾ ಅವರು ಕಳೆದ 20 ವರ್ಷಗಳ ಹಿಂದೆ ಕಾರ್ಮಿಕರಾಗಿ ಕೆಲಸ ಮಾಡಲು ವಾರಂಗಲ್ಗೆ ಬಂದಿದ್ದರು. ತಮ್ಮ ಬದುಕಿಗಾಗಿ ಅವರು ಸೆಣಬಿನ ಚೀಲಗಳನ್ನು ಹೊಲಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತೆರೆದ ಬಾವಿಯಲ್ಲಿ ಆಲಂ ಅವರ ಪತ್ನಿ, ಮಗಳು, ಮೂರು ವರ್ಷದ ಮೊಮ್ಮಗ, ಪುತ್ರರಾದ ಸೊಹೈಲ್, ಶಬಾದ್, ಮತ್ತು ತ್ರಿಪುರದ ಶಕೀಲ್ ಅಹ್ಮದ್ ಹಾಗೂ ಬಿಹಾರ ಮೂಲದ ಶ್ರೀರಾಮ್, ಶ್ಯಾಮ್ ಅವರ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಇವರೆಲ್ಲರೂ ಆತ್ಮಹತ್ಯೆಗೆ ಶರಣಾಗಿರಬಹುದೇ ಎಂಬುದನ್ನು ತಳ್ಳಿಹಾಕಿರುವ ಎಸಿಪಿ ಶ್ಯಾಮ್ ಸುಂದರ್, ಇದು ಆತ್ಮಹತ್ಯೆ ಆಗಿದ್ದರೆ, ಆರು ಜನ ಮಾತ್ರ ಆತ್ಮಹತ್ಯೆ ಮಾಡಿಕೊಳ್ಳಬಹುದಿತ್ತು. ಆದರೆ, ಅವರೊಂದಿಗೆ ಇತರರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಹಲವು ಕೋನಗಳಿಂದ ತನಿಖೆ ನಡೆಸುತ್ತಿದ್ದೇವೆ ಎಂದಿದ್ದಾರೆ.
ಆರು ಸದಸ್ಯರ ಕುಟುಂಬವು ಕರಿಮಾಬಾದ್ನ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿತ್ತು. ಲಾಕ್ಡೌನ್ ಬಳಿಕ ಅವರು ಸೆಣಬಿನ ಗಿರಣಿ ಮಾಲೀಕರಿಗೆ ಗೋದಾಮಿನಲ್ಲಿರುವ ಕೋಣೆಯಲ್ಲಿ ಉಳಿಯಲು ಅವಕಾಶ ನೀಡುವಂತೆ ವಿನಂತಿಸಿದ್ದರು. ನೆಲಮಹಡಿಯಲ್ಲಿನ ಕೋಣೆಯಲ್ಲಿ ಆ ಕುಟುಂಬ ಇದ್ದರೆ, ಬಿಹಾರದ ಇಬ್ಬರು ಯುವಕರು ಮೊದಲ ಮಹಡಿಯಲ್ಲಿದ್ದರು. ಗಿರಣಿ ಮಾಲೀಕ ಎಸ್.ಭಾಸ್ಕರ್ ಅವರು ಗುರುವಾರ ಮಧ್ಯಾಹ್ನ ಆವರಣಕ್ಕೆ ಭೇಟಿ ನೀಡಿದಾಗ ಕುಟುಂಬದ ಸದಸ್ಯರು ಮತ್ತು ಇತರೆ ಮೂವರು ನಾಪತ್ತೆಯಾಗಿರುವುದು ಕಂಡುಬಂದಿದೆ. ಆ ಬಳಿಕ ಈ ಸಾವುಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…