ನಾಗೂರು : ಹಾರ್ಡ್ವೇರ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ
Team Udayavani, Mar 13, 2023, 5:00 AM IST
ಕುಂದಾಪುರ: ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಕಾಣಿಸಿಕೊಂಡು, ಅಂಗಡಿಯಲ್ಲಿದ್ದ ಸಾಮಾಗ್ರಿಗಳೆಲ್ಲ ಬೆಂಕಿಗೆ ಆಹುತಿಯಾದ ಪರಿಣಾಮ ಲಕ್ಷಾಂತರ ರೂ. ನಷ್ಟ ಉಂಟಾದ ಘಟನೆ ರವಿವಾರ ಮಧ್ಯಾಹ್ನ ಬೈಂದೂರು – ಕುಂದಾಪುರ ರಾಷ್ಟಿÅàಯ ಹೆದ್ದಾರಿ 66 ರ ಸಮೀಪದ ನಾಗೂರಲ್ಲಿ ಸಂಭವಿಸಿದೆ.
ನಾಗೂರಿನ ಮಸೀದಿ ಬಳಿಯಿರುವ ಕಾಂಪ್ಲೆಕ್ಸ್ನಲ್ಲಿದ್ದ ರವಿರಾಜ್ ಹೆಗ್ಡೆ ಎಂಬುವರ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ರವಿವಾರವಾಗಿದ್ದರಿಂದ ಮಧ್ಯಾಹ್ನದವರೆಗೆ ಅಂಗಡಿ ತೆರೆದಿದ್ದು, ಬಳಿಕ ಬಂದ್ ಮಾಡಿ ಮನೆಗೆ ತೆರಳಿದ್ದರು. ಸುಮಾರು 2 ರಿಂದ 3 ಗಂಟೆಯ ಮಧ್ಯದ ಅವಧಿಯಲ್ಲಿ ಅಂಗಡಿಯೊಳಗೆ ಬೆಂಕಿ ಕಾಣಿಸಿಕೊಂಡಿದೆ.
ನೋಡ ನೋಡುತ್ತಿದ್ದಂತೆ ಅಂಗಡಿಯೊಳಗಿದ್ದ ಪೈಪ್ಗ್ಳು ಸಹಿತ ಅನೇಕ ಸಾಮಾಗ್ರಿಗಳು ಹೊತ್ತಿ ಉರಿದಿದೆ. ಕೂಡಲೇ ಸ್ಥಳೀಯರೆಲ್ಲ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಬೈಂದೂರು ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು.
ಸುಮಾರು 30 ಲಕ್ಷ ರೂ. ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ