ನಿಗಮಗಳ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ? ಸಂಭಾವ್ಯರ ಪಟ್ಟಿ ಸಿದ್ಧಪಡಿಸಲು ನಳಿನ್‌ ಸೂಚನೆ


Team Udayavani, Jun 27, 2021, 7:20 AM IST

ನಿಗಮಗಳ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ? ಸಂಭಾವ್ಯರ ಪಟ್ಟಿ ಸಿದ್ಧಪಡಿಸಲು ನಳಿನ್‌ ಸೂಚನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಜೀವಂತವಾಗಿರುವಾಗಲೇ ಹಾಲಿ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಜೂ. 18ರಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಕೋರ್‌ ಕಮಿಟಿ ಸಭೆಯಲ್ಲಿ ಹಾಲಿ ನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆಸಲಾಗಿತ್ತು. ಈಗಿರುವ ಅಧ್ಯಕ್ಷರನ್ನು ಬದಲಾಯಿಸಿ, ಪಕ್ಷಕ್ಕಾಗಿ ದುಡಿದಿರುವ ಇನ್ನಷ್ಟು ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂದು ಅರುಣ್‌ ಸಿಂಗ್‌ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು.

ಶನಿವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆದಿದ್ದು, ಅದು ಮುಕ್ತಾಯವಾದ ಅನಂತರ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ನಿಗಮ ಮಂಡಳಿಗಳಿಗೆ ಸಂಭಾವ್ಯರ ಪಟ್ಟಿಯನ್ನು ಪಕ್ಷದ ವತಿಯಿಂದ ಸಿದ್ಧಪಡಿಸುವಂತೆ ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿ ದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನೆ ಬಗ್ಗೆ ಮಾತ್ರ ಚರ್ಚೆ ನಡೆಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ನಿಗಮ ಮಂಡಳಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಕಾರ್ಯಕಾರಿಣಿಯಲ್ಲಿ ಪ್ರಸ್ತಾವಿಸದೆ ಬಳಿಕ ಪಟ್ಟಿ ಸಿದ್ಧಪಡಿಸುವಂತೆ ಪ್ರತ್ಯೇಕವಾಗಿ ಸೂಚನೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈಗ ಅಧ್ಯಕ್ಷರಾಗಿರುವವರಲ್ಲಿ ಬಹುತೇಕರು ಸಿಎಂ ಯಡಿಯೂರಪ್ಪ ಅವರ ಹಿಂಬಾಲಕರು ಎಂಬ ಆಕ್ಷೇಪ ಪಕ್ಷದ ವಲಯದಲ್ಲಿ ಇದೆ. ಇದೇ ಕಾರಣಕ್ಕೆ ಪಕ್ಷದ ನಿಜವಾದ ಕಾರ್ಯಕರ್ತರು, ಪಕ್ಷಕ್ಕಾಗಿ ನಿರಂತರ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರಿಗೆ ಅವಕಾಶ ದೊರೆಯಬೇಕೆಂದು ಕೋರ್‌ ಕಮಿಟಿ ಸಭೆಯಲ್ಲಿ ಬಹುತೇಕ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು.

ಈಗ ಪಕ್ಷದ ರಾಜ್ಯಾಧ್ಯಕ್ಷರು ಪಟ್ಟಿ ಸಿದ್ಧಪಡಿಸುವಂತೆ ಸೂಚಿಸಿರುವುದು ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಒಂದು ತಿಂಗಳಲ್ಲಿ ಹಾಲಿನಿಗಮ ಮಂಡಳಿ ಅಧ್ಯಕ್ಷರನ್ನು ಬದಲಾ ಯಿಸಿ ಹೊಸಬರಿಗೆ ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ ಎನ್ನಲಾಗುತ್ತಿದೆ.

ಆದರೆ ಈಗ ಅಧಿಕಾರದಲ್ಲಿರುವ ಕೆಲವು ಅಧ್ಯಕ್ಷರು ಇನ್ನೂ ಎರಡು ವರ್ಷ ಪೂರ್ಣಗೊಳಿಸಿಲ್ಲ. ಕೆಲವರು ಒಂದು ವರ್ಷವನ್ನೂ ಪೂರೈಸಿಲ್ಲ. ಹೀಗಾಗಿ ಎಲ್ಲ ಅಧ್ಯಕ್ಷರನ್ನು ಬದಲಾಯಿಸಲು ಮುಂದಾದರೆ ಪಕ್ಷ ಮತ್ತು ಸರಕಾರದ ನಡುವೆ ಮತ್ತೆ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ.

ಈಗಲೇ ಕೈ ಸಿಎಂ ವಿಚಾರ ಬೇಡ
ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ವಿಚಾರ ಪ್ರಸ್ತಾವಕ್ಕೆ ಅವಕಾಶ ಕೊಡದೆ ಪಕ್ಷ ಸಂಘಟನೆ ಮಾಡಲು ಒತ್ತು ನೀಡಿ ಎಂದು ಮಾಜಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಮತ್ತು ಮಾಜಿ ಸಚಿವೆ ಮೋಟಮ್ಮ ಪಕ್ಷದ ನಾಯಕರ ಸಮ್ಮುಖದಲ್ಲಿ ಹೇಳಿದ್ದಾರೆ. ಕೆಪಿಸಿಸಿ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ವೆಬಿನಾರ್‌ನಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ಪಕ್ಷ ಉಳಿದರೆ ನಾವು. ಪಕ್ಷದ ಭವಿಷ್ಯ ಮುಖ್ಯ. ಹೀಗಾಗಿ ಯಾರೂ ಯಾವುದೇ ಗೊಂದಲಗಳಿಗೆ ಅವಕಾಶ ಕೊಡ ಬೇಡಿ ಎಂದು ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.