10 ಕೋಟಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಗ್ರಾಮಗಳಿಗೆ ನಾಮಕರಣ :ಬಿಎಸ್ ವೈ


Team Udayavani, Aug 14, 2019, 8:43 PM IST

bsy

ಬೆಂಗಳೂರು; ನೆರೆ ಪೀಡಿತ ಗ್ರಾಮಗಳ ಪುನಶ್ಚೇತನಕ್ಕೆ 10 ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಳ್ಳುವ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ನಿಂತು ಉದಾತ್ತವಾಗಿ ದೇಣಿಗೆ ನೀಡುವಂತೆ ಇದೇ ವೇಳೆ ಮನವಿ ಮಾಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ಉದ್ದಿಮೆದಾರರನ್ನು ಆಹ್ವಾನಿಸಿ ನೆರೆ ಪೀಡಿತ ಪ್ರದೇಶಗಳಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದರು. ಸರಕಾರದ ಕರೆಗೆ ಮನ್ನಣೆ ನೀಡಿ 60ಕ್ಕೂ ಹೆಚ್ಚು ಕಂಪನಿ ಮುಖ್ಯಸ್ಥರು ಆಗಮಿಸಿ ನೆರವು ನೀಡುವ ಭರವಸೆ ನೀಡಿದರು.

ಸಭೆಯಲ್ಲಿ ಎಲ್ಲಾ ಉದ್ದಿಮೆದಾರರನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಈ ಬಾರಿ ಅತೀವ ಮಳೆ ಮತ್ತು ಪ್ರವಾಹದಿಂದ ಜನ ತತ್ತರಿಸಿದ್ದಾರೆ. 23 ಜಿಲ್ಲೆಯ 103 ತಾಲೂಕು ನೆರೆ ಪೀಡಿತ ಎಂದು ಘೋಷಿಸಲಾಗಿದೆ.

ಮಹಾರಾಷ್ಟ್ರ, ಕೇರಳ, ಕರ್ನಾಟಕದಲ್ಲಿ ಮಳೆಯಿಂದ ಭೂ ಕುಸಿತ ಸಂಬಂವಿಸಿದೆ. ಹಳ್ಳಿ, ಪಟ್ಟಣ ಜಲಾವೃತವಾಗಿದೆ. ಸೇತುವೆ ಮುಳುಗಿ, ರಸ್ತೆ ಹಾಳಾಗಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಈ ವರೆಗೂ 6.97 ಲಕ್ಷ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 1160 ಪರಿಹಾರ ಕೇಂದ್ರ ತೆರೆಯಲಾಗಿದೆ.

56 ಸಾವಿರ ಮನೆ ವಾಸಕ್ಕೆ ಯೋಗ್ಯವಿಲ್ಲ ಎಂದು ಘೋಷಿಸಿದ್ದೇವೆ. ಅಧಿಕಾರಿಗಳು, ನಾನು ಪ್ರವಾಹ ಮಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಿದ್ದೇವೆ. ರಕ್ಷಣೆ, ಪರಿಹಾರ ಕೆಲಸ ನಡೆಯುತ್ತಿದೆ. ಕಳೆದೆರಡು ದಿನದಿಂದ ಮಳೆ ಹತೋಟಿಗೆ ಬಂದಿದೆ. ಇನ್ನೂ ಸಂಪೂರ್ಣ ಚಿತ್ರಣ, ನಷ್ಟ ತಿಳಿಯಲು ಇನ್ನು ಕೆಲವು ದಿನ ಬೇಕಾಗಲಿದೆ.

23 ಜಿಲ್ಲೆಗಳ ಪೈಕಿ 200 ಗ್ರಾಮವನ್ನು ಸ್ಥಳಾಂತರಿಸುವ ಪರಿಸ್ಥಿತಿ ಇದೆ. ಇಂಥ ಸ್ಥಿತಿಯಲ್ಲಿ ಉದ್ಯಮಿದಾರರು ಸಹಾಯ ಹಸ್ತ ಚಾಚಬೇಕು. ಉದಾರ ಮನಸ್ಸಿನಿಂದ ದೇಣಿಗೆ ನೀಡಿ.

10 ಕೋಟಿಗೂ ಹೆಚ್ಚು ನೆರವು ನೀಡಿದ ಗ್ರಾಮಕ್ಕೆ ನಿಮ್ಮ ಸಂಸ್ಥೆ ಹೆಸರನ್ನೇ ಇಡಲು ತೀರ್ಮಾನಿಸಿದ್ದೇವೆ. ಆ ಗ್ರಾಮವನ್ನು ಹಣ ನೀಡುವ ಸಂಸ್ಥೆ ದತ್ತು ಪಡೆದುಕೊಂಡಂತೆ ಬಿಂಬಿಸಲಾಗುವುದು ಎಂದು ಹೇಳಿದರು.‌

ಬಟ್ಟೆ, ಆಹಾರ ಧಾನ್ಯ ಇತರೆ ಮೂಲಸೌಕರ್ಯ ಒದಗಿಸಿಕೊಡುವ ಬದಲು ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರೆ ಸಂತ್ರಸ್ತರಿಗೆ ಹೆಚ್ಚು ನೆರವಾಗಲಿದೆ ಎಂದು ಹೇಳಿದರು.

ಎಲ್ಲಾ ಕೈಗಾರಿಕೋದ್ಯಮಿಗಳೊಂದಿಗೆ ನಮ್ಮ ಸರಕಾರ ಇದೆ. ನೀವು ಏನು ಸಹಕಾರ ಬಯಸುತ್ತೀರ ಅದನ್ನು‌ ನಾವು ಕೊಡಲು ಸಿದ್ಧ.

ನಿಮ್ಮ ಸಂಸ್ಥೆ ಉದ್ಯಮ ನಡೆಸಲು ಬೇಕಾದ ಮೂಲಸೌಕರ್ಯಕ್ಕೆ ಯಾವುದೇ ರೀತಿಯ ಸಮಸ್ಯೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರಕಾರದಿಂದ ಯಾವುದೇ ಸಮಸ್ಯೆ ತೊಡಕು ಆಗುವುದಿಲ್ಲ. ಒಂದು ವೇಳೆ ಅನಗತ್ಯ ಸಮಸ್ಯೆ ಆಗುತ್ತಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಎಲ್ಲಾ ಸಂಸ್ಥೆಗಳ ಮುಖ್ಯಸ್ಥರಿಗೆ ಸಿಎಂ ಭರವಸೆ ನೀಡಿದರು.

ಇದೇವೇಳೆ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ , ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜಲ್‌ ಕೃಷ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.