ಉಡುಪಿ : ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ನಮ್ಮ ಕ್ಲಿನಿಕ್‌


Team Udayavani, Aug 28, 2022, 11:17 AM IST

ಉಡುಪಿ : ನಗರ ಪ್ರದೇಶದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ನಮ್ಮ ಕ್ಲಿನಿಕ್‌

ಉಡುಪಿ : ನಗರ ಪ್ರದೇಶದ ಸಾರ್ವಜನಿಕರಿಗೆ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಹೊರತುಪಡಿಸಿ, ನಗರ ಮತ್ತು ಪಟ್ಟಣ ಪ್ರದೇಶದ ವಾರ್ಡ್‌ನಲ್ಲಿ ಉತ್ತಮ, ತ್ವರಿತವಾಗಿ ಆರೋಗ್ಯ ಸೇವೆಗಳನ್ನು ದೊರಕಿಸುವ ಉದ್ದೇಶದಿಂದ ರಾಜ್ಯ ಸರಕಾರವು ರಾಜ್ಯಾದ್ಯಂತ ನಮ್ಮ ಕ್ಲಿನಿಕ್‌ಗಳನ್ನು ತೆರೆಯಲು ಉದ್ದೇಶಿಸಿದೆ. ಉಡುಪಿ ಜಿಲ್ಲೆಯಲ್ಲಿ 6 ನಮ್ಮ ಕ್ಲಿನಿಕ್‌ ಆರಂಭಕ್ಕೆ ಎಲ್ಲ ಸಿದ್ಧತೆ ನಡೆಯುತ್ತಿದೆ.

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 3, ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ 1 ಮತ್ತು ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ 2 ನಮ್ಮ ಕ್ಲಿನಿಕ್‌ ತೆರೆಯಲು ಸರಕಾರ ಅನುಮತಿ ನೀಡಿದೆ. ಸಿಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಉತ್ತಮ ಗುಣಮಟ್ಟದ ಆರೋಗ್ಯ ಸೇವೆ, ನಿರಂತರ ಆರೋಗ್ಯ ಪಾಲನೆಯ ಜತೆಗೆ ಎಲ್ಲ ಹಂತದ ಸೇವೆಗಳನ್ನು ನೀಡುವ ಆಸ್ಪತ್ರೆಗಳಿಗೆ ರೆಫರಲ್‌ ಸೇವೆಗಳ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ನಮ್ಮ ಕ್ಲಿನಿಕ್‌ ಹೊಂದಿದೆ. ನಗರ ಪ್ರದೇಶದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರಿಕರಿಸುವ ಜತೆಗೆ ಸಾಂಕ್ರಾಮಿಕ ರೋಗಗಳ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಲಿದೆ.

ನಮ್ಮ ಕ್ಲಿನಿಕ್‌ ವಿಶೇಷತೆ
ನಮ್ಮ ಕ್ಲಿನಿಕ್‌ನಲ್ಲಿ ತಲಾ ಒಬ್ಬರು ವೈದ್ಯರು, ನರ್ಸ್‌, ಲ್ಯಾಬ್‌ ಟೆಕ್ನೀಶಿಯನ್‌ ಹಾಗೂ ಡಿ ಗ್ರೂಪ್‌ ಸಿಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಉಚಿತ ಆರೋಗ್ಯ ತಪಾಸಣೆ ಮತ್ತು ಔಷಧ ನೀಡಲಾಗುವುದು. ರಕ್ತ, ಮೂತ್ರ ಪರೀಕ್ಷೆ ಸೇರಿದಂತೆ ಲ್ಯಾಬ್‌ನಲ್ಲಿ 14 ರೀತಿಯ ಸೇವೆ ದೊರೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4.30 ರವರೆಗೆ ಈ ಕ್ಲಿನಿಕ್‌ ಕಾರ್ಯ ನಿರ್ವಹಿಸಲಿದೆ. ಅಗತ್ಯ ಇದ್ದವರಿಗೆ ಇ-ಸಂಜೀವಿನಿ ಮತ್ತು ಟೆಲಿ ಕೌನ್ಸೆಲಿಂಗ್‌ ವ್ಯವಸ್ಥೆಯೂ ಲಭ್ಯವಿದೆ.

ಸಂದರ್ಶನ ಪೂರ್ಣ
ನಮ್ಮ ಕ್ಲಿನಿಕ್‌ ಆರಂಭದಿಂದ ನಗರ ಪ್ರದೇಶದ ಜನತೆ, ತ್ವರಿತವಾಗಿ ಉಚಿತ ಆರೋಗ್ಯ ತಪಾ ಸಣೆ, ಚಿಕಿತ್ಸೆ ಪಡೆದು ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಲು ಸಾಧ್ಯವಾಗಲಿದೆ. ಉಡುಪಿ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್‌ ಸಿಬಂದಿ ನೇಮಕಕ್ಕೆ ಈಗಾಗಲೇ ಸಂದರ್ಶನ ನಡೆಸಲಾಗಿದೆ. ಶೀಘ್ರವೇ ನಮ್ಮ ಕ್ಲಿನಿಕ್‌ಗಳು ಕಾರ್ಯಾರಂಭವಾಗಿ ವೈದ್ಯರು, ಸಿಬಂದಿ ನಗರದ ಜನರ ಆರೋಗ್ಯ ಸೇವೆಗೆ ಲಭ್ಯವಾಗಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿ ಕಾರಿ ಡಾ| ನಾಗಭೂಷಣ ಉಡುಪಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.