Infosys Founder’s ಸ್ವತಃ ನಾರಾಯಣಮೂರ್ತಿ ವಾರಕ್ಕೆ 90 ಗಂಟೆ ದುಡಿಯುತ್ತಾರೆ
ಪತಿಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಸುಧಾಮೂರ್ತಿ
Team Udayavani, Oct 30, 2023, 8:11 PM IST
ನವದೆಹಲಿ: ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು, “ಭಾರತದ ಒಟ್ಟಾರೆ ಉತ್ಪಾದಕತೆಯನ್ನು ಹೆಚ್ಚಿಸಲು ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಿರಬೇಕು’ ಎಂದು ಹೇಳಿದ್ದರು.
ಈ ಕುರಿತು ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಆರಂಭವಾದ ಬೆನ್ನಲ್ಲೇ ಅವರ ಹೇಳಿಕೆಯನ್ನು ಅವರ ಪತ್ನಿ, ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಸಮರ್ಥಿಸಿಕೊಂಡಿದ್ದಾರೆ.
“ಸ್ವತಃ ನಾರಾಯಣಮೂರ್ತಿ ಅವರೇ ವಾರಕ್ಕೆ 80ರಿಂದ 90 ಗಂಟೆಗಳು ದುಡಿಯುತ್ತಾರೆ. ಇದನ್ನೇ ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ಕಠಿಣ ಪರಿಶ್ರಮದ ಬಗ್ಗೆ ಅವರಿಗೆ ಬಹಳ ನಂಬಿಕೆಯಿದೆ. ಅವರು ಏನು ನಂಬಿದ್ದಾರೋ ಅದನ್ನೇ ಪ್ರತಿಪಾದಿಸಿದ್ದಾರೆ’ ಎಂದು ಸುಧಾಮೂರ್ತಿ ಹೇಳಿದ್ದಾರೆ.
ಇದೇ ವೇಳೆ, “ನಾರಾಯಣಮೂರ್ತಿ ಅವರ 70 ಗಂಟೆಗಳ ಕೆಲಸದ ಹೇಳಿಕೆಯನ್ನು ಗಮನಿಸಿದೆ. ಕೇವಲ ಕಂಪನಿಯ ಕೆಲಸದ ಸಮಯದ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ನಾನು ನಂಬುತ್ತೇನೆ. ಇದು ನಿಮ್ಮ ಸ್ವಂತಕ್ಕೆ ಹಾಗೂ ದೇಶಕ್ಕೆ ಮೀಸಲಿರಿಸಬೇಕಾದ ಸಮಯ. 70 ಗಂಟೆಗಳಲ್ಲಿ-ಕಂಪನಿಗಾಗಿ 40 ಗಂಟೆಗಳು ಹಾಗೂ ಸ್ವಂತ ಏಳಿಗೆಗಾಗಿ 30 ಗಂಟೆಗಳು’ ಎಂದು ಟೆಕ್ ಮಹೀಂದ್ರಾ ಸಿಇಒ ಸಿ.ಪಿ.ಗುರ್ನಾನಿ ಅಭಿಪ್ರಾಯಪಟ್ಟಿದ್ದಾರೆ.
“ಒಂದು ವಿಷಯದ ಮೇಲೆ ನೀವು 10,000 ಗಂಟೆಗಳನ್ನು ಹೂಡಿದರೆ, ನೀವು ಅದರ ಮೇಲೆ ಪ್ರಾಬಲ್ಯ ಹೊಂದುತ್ತೀರಿ. ಕಠಿಣ ಶ್ರಮ ವಹಿಸಿದರೆ, ನಿಮ್ಮ ಕ್ಷೇತ್ರದಲ್ಲಿ ತಜ್ಞರಾಗುತ್ತೀರಿ. 70 ಗಂಟೆಗಳ ಕೆಲಸವು ನಿಮ್ಮಲ್ಲಿ ಬದಲಾವಣೆ ತರುವ ಜತೆಗೆ ದೇಶದ ಏಳ್ಗೆಗೂ ಸಹಕಾರಿಯಾಗಲಿದೆ’ ಎಂದು ಗುರ್ನಾನಿ ಪ್ರತಿಪಾದಿಸಿದ್ದಾರೆ.
ಇನ್ನೊಂದೆಡೆ, “ಕಚೇರಿಗಳು ಮತ್ತು ಮನೆಗಳ ನಡುವೆ, ಅನೇಕ ಭಾರತೀಯ ಮಹಿಳೆಯರು ಭಾರತವನ್ನು (ತಮ್ಮ ಕೆಲಸದ ಮೂಲಕ) ಮತ್ತು ಮುಂದಿನ ಪೀಳಿಗೆಯ ಭಾರತೀಯರನ್ನು (ತಮ್ಮ ಮಕ್ಕಳು) ನಿರ್ಮಿಸಲು ವಾರಕ್ಕೆ 70 ಗಂಟೆಗಳಿಗಿಂತಲೂ ಹೆಚ್ಚು ಅವಧಿ ಕೆಲಸ ಮಾಡುತ್ತಿದ್ದಾರೆ. ಇದನ್ನು ಖುಷಿಯಿಂದ ಮಾಡುತ್ತಿದ್ದಾರೆ. ಅಲ್ಲದೇ ಯಾವುದೇ ಬೇಡಿಕೆಯಿಲ್ಲದೆ ಹೆಚ್ಚುವರಿ ಅವಧಿಗೆ ದುಡಿಯುತ್ತಿದ್ದಾರೆ. ಆದರೆ ತಮಾಷೆಯೆಂದರೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇದುವರೆಗೂ ಯಾರೂ ಚರ್ಚೆ ಮಾಡಿಲ್ಲ’ ಎಂದು ಎಡೆಲ್ವಿಸ್ ಮ್ಯೂಚುಯಲ್ ಫಂಡ್ ಸಿಇಒ, ಎಂಡಿ ರಾಧಿಕಾ ಗುಪ್ತ ಟ್ವೀಟ್(ಎಕ್ಸ್) ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ