INS ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಅಗ್ನಿದುರಂತ; ನೌಕಾಪಡೆ ಅಧಿಕಾರಿ ಸಾವು
Team Udayavani, Apr 26, 2019, 4:26 PM IST
ಕಾರವಾರ: ದೇಶದ ಅತೀ ದೊಡ್ಡ ಸಮರ ನೌಕೆ ಐಎನ್ ಎಸ್ ವಿಕ್ರಮಾದಿತ್ಯ ಕಾರವಾರದ ನೌಕಾನೆಲೆಗೆ ಶುಕ್ರವಾರ ಬೆಳಗ್ಗೆ ಆಗಮಿಸಿದ್ದ ವೇಳೆ ಒಂದು ಭಾಗದಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಬೆಂಕಿ ನಂದಿಸಲು ಯತ್ನಿಸಿದ್ದ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌಹಾಣ್ ಸಾವಿಗೀಡಾಗಿದ್ದಾರೆ ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.
ವಿಕ್ರಮಾದಿತ್ಯ ಯುದ್ಧ ನೌಕೆಯ ಕಂಪಾರ್ಟ್ ಮೆಂಟ್ ನೊಳಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸುತ್ತಿದ್ದ ವೇಳೆ ಹೊಗೆ ತುಂಬಿಕೊಂಡ ಪರಿಣಾಮ ಕಮಾಂಡರ್ ಚೌಹಾಣ್ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಕಾರವಾರದ ವಾಯುನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿರುವುದಾಗಿ ಪ್ರಕಟಣೆಯಲ್ಲಿ ಹೇಳಿದೆ.
ಐಎನ್ ಎಸ್ ಯುದ್ಧ ನೌಕೆಯ ಇತರ ಸಿಬ್ಬಂದಿಗಳು ಕಾರ್ಯಾಚರಿಸುವ ಮೂಲಕ ಬೆಂಕಿಯನ್ನು ನಂದಿಸಿದ್ದು, ಇದರಿಂದಾಗಿ ಹೆಚ್ಚಿನ ನಷ್ಟವಾಗದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದು ತಿಳಿಸಿದೆ. ಅಗ್ನಿ ಅವಘಡದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ನೌಕಾಪಡೆ ಪ್ರಕಟಣೆ ವಿವರಿಸಿದೆ.
ಐಎನ್ ಎಸ್ ವಿಕ್ರಮಾದಿತ್ಯ ದೇಶದ ಅತೀ ದೊಡ್ಡ ಯುದ್ಧ ನೌಕೆಯಾಗಿದೆ. ಇದು 284 ಮೀಟರ್ ಉದ್ದವಿದ್ದು, 60 ಮೀಟರ್ ಎತ್ತರವಿದೆ. ಈ ಎತ್ತರ ಸುಮಾರು 20 ಮಹಡಿ ಕಟ್ಟಡಕ್ಕೆ ಸಮಾನಾಂತರವಾಗಿದೆ. ನೌಕೆಯ ಒಟ್ಟು ತೂಕ 40 ಸಾವಿರ ಟನ್ ಗಳಷ್ಟು. ಇದು ಭಾರತದ ನೌಕಾಪಡೆಯ ಅತೀ ದೊಡ್ಡ ಹಾಗೂ ಅತೀ ಭಾರದ ಯುದ್ಧ ನೌಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು