ನೌಕಾದಳ ಮುಖ್ಯಸ್ಥ ಅಡ್ಮಿರಲ್ ಕರಮ್ ಬೀರ್ ಸಿಂಗ್ ಕಾರವಾರ ನೌಕಾನೆಲೆಗೆ ಭೇಟಿ
Team Udayavani, Oct 22, 2020, 6:54 PM IST
ಕಾರವಾರ : ನೌಕಾದಳ ಮುಖ್ಯಸ್ಥ ಆಡ್ಮಿರಲ್ ಕರಮ್ ಬೀರ್ ಸಿಂಗ್ ಕಾರವಾರ ನೌಕಾನೆಲೆಗೆ ಭೇಟಿ ನೀಡಿದರು. ಅವರನ್ನು ಕರ್ನಾಟಕದ ನೌಕಾದಳದ ಕಮಾಂಡರ್ ಹಾಗೂ ಇತರ ಅಧಿಕಾರಿಗಳು ನೇವಿ ಸಂಪ್ರದಾಯದಂತೆ ಸ್ವಾಗತಿಸಿದರು.
ಐಎನ್ಎಸ್ ಕದಂಬ ನೌಕಾನೆಲೆಯ ವಿಶೇಷಗಳು ಹಾಗೂ ಶಿಪ್ ಲಿಫ್ಟ್ ಯಾರ್ಡ್ ಗಳಿಗೆ ಭೇಟಿ ನೀಡಿದ ನೌಕಾದಳ ಮುಖ್ಯಸ್ಥ ಆಡ್ಮಿರಲ್ ಕರಮ್ ಬೀರ್ ಸಿಂಗ್ ನೆಲೆಯ ಮಾಹಿತಿ ತಿಳಿದರು. ಎರಡನೇ ಹಂತದ ಕಾಮಗಾರಿಗಳು ಹಾಗೂ ಭವಿಷ್ಯದಲ್ಲಿ ನೌಕಾದಳದ ಕಾರ್ಯ ಚಟುವಟಿಕೆಯನ್ನು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು. ಶಿಪ್ ಲಿಫ್ಟ್ ಯಾರ್ಡ್ ನ ಮಹತ್ವ ತಿಳಿದು, ಅದನ್ನು ವೀಕ್ಷಿಸಿದ ಆಡ್ಮಿರಲ್ ಕರಮ್ ಬೀರ್ ಸಿಂಗ್ , ಕೋವಿಡ್ ಸಮಯದಲ್ಲಿ ನೌಕಾದಳದ ಶಿಪ್ಗಳು ಹಾಗು ಸಬ್ಮರೀನ್ಗಳು ತಾಂತ್ರಿಕ ನೆರವು ಹಾಗೂ ರಿಪೇರಿಯಾದ ಬಗ್ಗೆ ತಿಳಿದು ಕೊಂಡರು.
ನೌಕಾನೆಲೆಯ ಅಗತ್ಯಗಳನ್ನು ಹಾಗೂ ಮುಂದೆ ಶತ್ರು ರಾಷ್ಟ್ರ ಗಳಿಂದ ರಕ್ಷಣೆ ಪಡೆಯಲು ನೆಲೆಯಲ್ಲಿ ಆಗಬೇಕಾದ ಕೆಲಸಗಳ ಮಾಹಿತಿ ಪಡೆದರು. ಅದರ ನೀಲ ನಕಾಶೆಯನ್ನು, ಭಾರತೀಯ ನೌಕಾನೆಲೆ ಬಲಪಡಿಸಲು ಇರುವ ಕಾರ್ಯತಂತ್ರಗಳನ್ನು ಸೂಕ್ಷ್ಮವಾಗಿ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.
ನಂತರ ಐಎನ್ಎಸ್ ಪತಂಜಲಿ ಬಗ್ಗೆ ಮಾಹಿತಿ ಪಡೆದರು. ಉತ್ತರ ಕನ್ನಡದಲ್ಲಿ ಕೋವಿಡ್ ಪೀಡಿತ ಸಾರ್ವಜನಿಕರಿಗೆ ಮೊಟ್ಟ ಮೊದಲ ಬಾರಿಗೆ ದೇಶದ ರಕ್ಷಣಾ ಪಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಗ್ಗೆ, ಕೋವಿಡ್ ಪೀಡಿತರು ಗುಣಮುಖರಾದ ಬಗ್ಗೆ ಸಹ ಮಾಹಿತಿ ಪಡೆದು, ಆ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ನಂತರ ನೇವಿ ಸಿಬ್ಬಂದಿ ಕೋವಿಡ್ ನಿಂದ ಜಾಗೃತವಾಗಿರಬೇಕು ಎಂದು ಎಚ್ಚರಿಸಿದರಲ್ಲದೇ, ದಸರಾ ಹಬ್ಬದ ಸಂಭ್ರಮವನ್ನು ಸವಿಯುವಂತೆ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು