ಸಿಎಂ ಬಂದ ಮೇಲೆ ಅತೃಪ್ತರ ಜತೆ ಸಂಧಾನ
ಜು.9ರಿಂದ ಶಾಸಕರ ಜತೆ ಜಿಲ್ಲಾವಾರು ಚರ್ಚೆ
Team Udayavani, Jul 4, 2019, 6:00 AM IST
ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬಳಿಕ ಎಚ್ಚೆತ್ತಿರುವ ರಾಜ್ಯದ ಮೈತ್ರಿ ಪಕ್ಷಗಳು ಅತೃಪ್ತ ಶಾಸಕರ ಜತೆ ಸಂಧಾನ ಸಭೆಗೆ ಮುಂದಾಗಿವೆ. ಅಮೆರಿಕ ಪ್ರವಾಸದಲ್ಲಿರುವ ಸಿಎಂ ಕುಮಾರಸ್ವಾಮಿ ಅವರು, ವಾಪಸ್ ಬರುತ್ತಿದ್ದಂತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸರ್ಕಾರದ ಟ್ರಬಲ್ ಶೂಟರ್ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜು. 9ರಿಂದ ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಜಿಲ್ಲಾವಾರು ಶಾಸಕರ ಸಭೆ ನಡೆಸಲಿದ್ದಾರೆ. ವಿಧಾನಸಭೆ ಅಧಿವೇಶನಕ್ಕೂ ಮುನ್ನವೇ, ಶಾಸಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದ್ದಾರೆ.
ಯಾವುದೇ ಶಾಸಕರು ರಾಜೀನಾಮೆ ನೀಡುವುದಿಲ್ಲ. ಕೆಲವರು ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎಲ್ಲರ ಸಮಸ್ಯೆಗಳಿಗೆ ಪರಿಹಾರ ಸೂಚಿಸಲಿದ್ದಾರೆ. ಯಾವುದೇ ಅತೃಪ್ತರ ತಂಡ ಇಲ್ಲ. ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಕುರಿತು ಕೇಳಿದ ಪ್ರಶ್ನೆಗೆ ಯಾರು ಜಾಸ್ತಿ ಪ್ರೀತಿ ಮಾಡುತ್ತಾರೋ ಅವರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಅತೃಪ್ತರಲ್ಲಿ ಗೊಂದಲ: ಎಲ್ಲವೂ ಅಂದುಕೊಂಡಂತಾಗಿದ್ದರೆ ಬುಧವಾರ ಕನಿಷ್ಠ 4 ಅತೃಪ್ತ ಶಾಸಕರು ರಾಜೀನಾಮೆ ನೀಡಬೇಕಾಗಿತ್ತು. ಆದರೆ, ರಮೇಶ್ ಜಾರಕಿಹೊಳಿ ಅವರು ಅಜ್ಞಾತ ಸ್ಥಳದಲ್ಲಿ ಅತೃಪ್ತರೊಂದಿಗೆ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ರಾಜೀನಾಮೆ ಬಗ್ಗೆ ಅತೃಪ್ತರಲ್ಲೇ ಗೊಂದಲಗಳು ಏರ್ಪಟ್ಟಿವೆ ಎಂದು ಹೇಳಲಾಗಿದ್ದು, ಹೀಗಾಗಿ ಬುಧವಾರ ಯಾರೂ ರಾಜೀನಾಮೆಗೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಸೋಮವಾರವಷ್ಟೇ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿದ್ದ ರಮೇಶ್ ಜಾರಕಿಹೊಳಿ ಅವರೂ, ಖುದ್ದಾಗಿ ಸ್ಪೀಕರ್ ಭೇಟಿ ಮಾಡಿ ಪದತ್ಯಾಗ ಪತ್ರ ಸಲ್ಲಿಸಿಲ್ಲ.
ಬಿಜೆಪಿ ಜತೆ ವಿಶ್ವನಾಥ್ ಭಾಯಿ ಭಾಯಿ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವ ಹುಣಸೂರು ಶಾಸಕ ಎಚ್.ವಿಶ್ವನಾಥ್ ಅವರು, ದೆಹಲಿಯಲ್ಲಿ ಬಿಜೆಪಿ ನಾಯಕರ ಜತೆ ಕಾಣಿಸಿಕೊಂಡಿದ್ದಾರೆ. ಬುಧವಾರ ಶ್ರೀನಿವಾಸ ಪ್ರಸಾದ್, ಬಸವರಾಜ್ ಮತ್ತು ಬಿ.ವೈ.ರಾಘವೇಂದ್ರ ಅವರ ಜತೆ ಉಪಾಹಾರವನ್ನೂ ಸೇವಿಸಿದ್ದಾರೆ. ವಿಶ್ವನಾಥ್ ಸದ್ಯದಲ್ಲೇ ಬಿಜೆಪಿಯತ್ತ ಹೋಗಲಿದ್ದಾರೆ ಎಂಬ ವದಂತಿಗಳೂ ಹರಿದಾಡಿದವು. ಆದರೆ, ಇದನ್ನು ವಿಶ್ವನಾಥ್ ಅವರೇ ತಳ್ಳಿಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ