ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್ಇಪಿ ಅನುಷ್ಠಾನ
Team Udayavani, Sep 18, 2021, 7:25 AM IST
ಬೆಂಗಳೂರು : ಶಾಲಾ ಹಂತದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ಅಗತ್ಯ ಯೋಜನೆ ರೂಪಿಸಲು ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ನೇತೃತ್ವದಲ್ಲಿ 21 ಸದಸ್ಯರ ಕಾರ್ಯಪಡೆಯನ್ನು ರಾಜ್ಯ ಸರಕಾರ ರಚನೆ ಮಾಡಿದೆ.
ಪ್ರಸಕ್ತ ಸಾಲಿನಿಂದಲೇ ಉನ್ನತ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ ಸಿದ್ಧತೆ ನಡೆದಿದೆ. ಆದರೆ ಶಾಲಾ ಹಂತದಲ್ಲಿ ಎನ್ಇಪಿ ಅನುಷ್ಠಾನಕ್ಕೆ ಸರಕಾರ ಈವರೆಗೆ ಯಾವುದೇ ಯೋಜನೆ ರೂಪಿಸಿರಲಿಲ್ಲ. ಇತ್ತೀಚೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಈ ಬಗ್ಗೆ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿ, ಕಾರ್ಯಪಡೆ ರಚಿಸುವ ತೀರ್ಮಾನ ಮಾಡಿದ್ದರು.
ಕಾರ್ಯಪಡೆ ಸದಸ್ಯರು
ಶಿಕ್ಷಣ ಇಲಾಖೆ ಆಯುಕ್ತರು, ಶಿಕ್ಷಣ ತಜ್ಞರಾದ ಡಾ| ಪ್ರವೀಣ್ ಕುಮಾರ್ ಸಯ್ಯಪ್ಪರಾವ್, ಡಾ| ಪದ್ಮಾವತಿ, ಅಜೀಂ ಪ್ರೇಮ್ಜಿ ಪ್ರತಿಷ್ಠಾನದ ಋಷಿಕೇಶ್, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನ ನಿರ್ದೇಶಕರು, ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬೆಳ್ಳಶೆಟ್ಟಿ, ಬೆಂಗಳೂರು ವಿ.ವಿ.ಯ ನಿವೃತ್ತ ಕುಲಪತಿ ಡಾ| ಶಕುಂತಲಾ ಪತ್ರೆ, ವಿವಿಧ ಕಾಲೇಜುಗಳ ಪ್ರಾಂಶು ಪಾಲರು, ನಿವೃತ್ತ ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿ 21 ಮಂದಿಯನ್ನು ಕಾರ್ಯಪಡೆಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ. ನಿರ್ದಿಷ್ಟ ಕಾಲಮಿತಿಯೊಳಗೆ ವರದಿ ಸಲ್ಲಿಸಲು ಸರಕಾರ ಸೂಚಿಸಿದೆ.
ಕಾರ್ಯಪಡೆಗೆ ಏನು ಕೆಲಸ?
– ಅಗತ್ಯಕ್ಕೆ ಅನುಗುಣವಾಗಿ ಸಭೆ ನಡೆಸಿ, ಕರಡು ನೀತಿ ರಚನೆ.
– ಎನ್ಇಪಿ ಅನುಷ್ಠಾನದಿಂದ 2030ರ ವರೆಗೆ ಆಗುವ ಪರಿಣಾಮಗಳ ವಿಶ್ಲೇಷಣೆ.
– ಸರಕಾರಕ್ಕೆ ಅಗತ್ಯ ಮಾರ್ಗದರ್ಶನ ಮತ್ತು ಪರಿಹಾರ ರೂಪಿಸುವುದು.
– ಪೂರ್ವ ಪ್ರಾಥಮಿಕ ಮತ್ತು 1ರಿಂದ 12ನೇ ತರಗತಿ ವರೆಗಿನ ಪಠ್ಯಕ್ರಮ ಚೌಕಟ್ಟು ತಯಾರಿಸಲು ಮಾರ್ಗದರ್ಶನ.
– ಅನುಷ್ಠಾನಕ್ಕೆ ಅಗತ್ಯ ಕಾರ್ಯಗಳನ್ನು ಹಂಚಿಕೆ ಮಾಡಿ ಮೇಲುಸ್ತುವಾರಿ ವಹಿಸುವುದು.
– ಎಲ್ಲ ಭಾಗೀದಾರರೊಂದಿಗೆ ಚರ್ಚಿಸಿ ಕರಡು ಅನುಷ್ಠಾನಕ್ಕೆ ಸೂಕ್ತ ನಿಯಮ ರೂಪಿಸುವುದು.
– ಈ ನೀತಿ ಅನುಷ್ಠಾನಕ್ಕೆ ದೀರ್ಘಾವಧಿ ಯೋಜನೆಗಳನ್ನು ಸಿದ್ಧಪಡಿಸಲು ಸಹಕಾರ ನೀಡುವುದು.
– ಎನ್ಇಪಿ 2020 ಶಿಫಾರಸಿನ ಅನ್ವಯ ಸಮನ್ವಯ ಮತ್ತು ಸಮಾನ ಶಿಕ್ಷಣದ ಕಾರ್ಯತಂತ್ರ ರೂಪಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ