100 ದಿನದೊಳಗೆ 2,00,000 ಚಂದಾದಾರರನ್ನು ಕಳೆದುಕೊಂಡ ನೆಟ್ ಫ್ಲಿಕ್ಸ್…ಕಾರಣವೇನು?

ಕಳೆದ ವರ್ಷ ಕಂಪನಿ 1.7 ಬಿಲಿಯನ್ ಡಾಲರ್ ಆದಾಯ ಗಳಿಸಿರುವುದಾಗಿ ತಿಳಿಸಿದೆ.

Team Udayavani, Apr 20, 2022, 12:50 PM IST

thumb 7

ಸ್ಯಾನ್ ಫ್ರಾನ್ಸಿಸ್ಕೋ: ಕಳೆದ ಒಂದು ದಶಕದಲ್ಲಿ ಇದೇ ಮೊದಲ ಬಾರಿಗೆ ನೆಟ್ ಫ್ಲಿಕ್ಸ್ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಸುಮಾರು 100 ದಿನದೊಳಗೆ ಬರೋಬ್ಬರಿ 2,00,000 ಚಂದದಾರರನ್ನು (ಸಬ್ಸ್ ಕ್ರೈಬರ್ಸ್) ಕಳೆದುಕೊಂಡಿರುವುದಾಗಿ ಹೇಳಿದೆ.

ಇದನ್ನೂ ಓದಿ:ಕೋಮು ಸಂಘರ್ಷ: ಮಂಗಳೂರಿನಲ್ಲಿ’ಮಾರಿ ಗುಡಿ’ ನಕಲಿ ಖಾತೆ: ಓರ್ವನ ಬಂಧನ

ಪ್ರಮುಖ ಸ್ಟ್ರೀಮಿಂಗ್ ಟೆಲಿವಿಷನ್ ಸೇವೆಯ ನೆಟ್ ಫ್ಲಿಕ್ಸ್ ಸಂಸ್ಥೆ ಹತ್ತು ವರ್ಷಗಳಲ್ಲಿ ಮೊದಲ ಬಾರಿಗೆ ಭಾರೀ ಸಂಖ್ಯೆಯಲ್ಲಿ ಸಬ್ಸ್ ಕ್ರೈಬರ್ ಅನ್ನು ಕಳೆದುಕೊಂಡಿದೆ. ರಷ್ಯಾ ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಅಲ್ಲಿ ಸೇವೆಯನ್ನು ಸ್ಥಗಿತಗೊಳಿಸಿರುವ ಪರಿಣಾಮ ಮೊದಲ ತ್ರೈಮಾಸಿಕದಲ್ಲಿ ಚಂದಾದಾರರ ಸಂಖ್ಯೆಯಲ್ಲಿ ಇಳಿಕೆಯಾಗಲು ಕಾರಣವಾಗಿದೆ ಎಂದು ನೆಟ್ ಫ್ಲಿಕ್ಸ್ ಆರೋಪಿಸಿದೆ.

ನೆಟ್ ಫ್ಲಿಕ್ಸ್ ಮೊದಲ ತ್ರೈಮಾಸಿಕದಲ್ಲಿ 221.6 ಮಿಲಿಯನ್ ಚಂದಾದಾರರನ್ನು ಹೊಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ 2 ಲಕ್ಷ ಸಬ್ಸ್ ಕ್ರೈಬರ್ ಸಂಖ್ಯೆ ಇಳಿಕೆಯಾಗಿದೆ. ಈ ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು 1.6 ಬಿಲಿಯನ್ ಡಾಲರ್ ಆದಾಯ ಗಳಿಸಿದೆ. ಆದರೆ ಕಳೆದ ವರ್ಷ ಕಂಪನಿ 1.7 ಬಿಲಿಯನ್ ಡಾಲರ್ ಆದಾಯ ಗಳಿಸಿರುವುದಾಗಿ ತಿಳಿಸಿದೆ.

ನೆಟ್ ಫ್ಲಿಕ್ಸ್ ತನ್ನ ಮೊದಲ ತ್ರೈಮಾಸಿಕದ ವರದಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಕಂಪನಿಯ ಷೇರುಗಳ ಮೌಲ್ಯ ಶೇ.25ರಷ್ಟು ಕುಸಿತ ಕಂಡಿದೆ. ನಮ್ಮ ಎಣಿಕೆಯ ಪ್ರಕಾರದಷ್ಟು ಆದಾಯ ಗಳಿಕೆಯಲ್ಲಿ ಏರಿಕೆ ಕಂಡಿಲ್ಲ ಎಂದು ನೆಟ್ ಫ್ಲಿಕ್ಸ್ ಹೇಳಿದೆ.

2020ರಲ್ಲಿ ಕೋವಿಡ್ ಸೋಂಕು ಪತ್ತೆಯಾದ ಸಂದರ್ಭದಲ್ಲಿ ನಮ್ಮ ಆದಾಯ ಮತ್ತು ಚಂದಾದಾರರ ಸಂಖ್ಯೆಯಲ್ಲಿ ಹೆಚ್ಚಳವಾಗಿತ್ತು. ಆದರೆ 2021ರಲ್ಲಿ ನಮ್ಮ ಆದಾಯ ನಿರೀಕ್ಷಿತ ಮಟ್ಟ ಇಳಿಕೆಯಾಗಲು ಆರಂಭವಾಗಿತ್ತು ಎಂದು ಕಂಪನಿ ತಿಳಿಸಿದೆ.

ಅಂದಾಜಿನ ಪ್ರಕಾರ ಸುಮಾರು 222 ಮಿಲಿಯನ್ ಕುಟುಂಬಗಳು ನೆಟ್ ಫ್ಲಿಕ್ಸ್ ಸೇವೆಗೆ ಶುಲ್ಕ ಪಾವತಿಸುತ್ತಿದ್ದು, ಇದರಲ್ಲಿ 100 ಮಿಲಿಯನ್ ಕ್ಕಿಂತಲೂ ಅಧಿಕ ಮಂದಿ ಕುಟುಂಬ ಸದಸ್ಯರಿಗೆ ನೆಟ್ ಫ್ಲಿಕ್ಸ್ ಖಾತೆಯ ಪಾಸ್ ವರ್ಡ್ ಹಂಚಿಕೊಂಡಿದ್ದು, ಇವರು ಯಾವುದೇ ಶುಲ್ಕ ಪಾವತಿಸುತ್ತಿಲ್ಲ. ಇದರಿಂದಾಗಿ ನಮ್ಮ ಚಂದಾದಾರರ ಸಂಖ್ಯೆ ಹೆಚ್ಚಳ ಮಾಡಲು ಸಮಸ್ಯೆಯಾಗುತ್ತಿದೆ ಎಂದು ನೆಟ್ ಫ್ಲಿಕ್ಸ್ ಹೇಳಿದೆ.

ಅಷ್ಟೇ ಅಲ್ಲ ಅಮೆಜಾನ್ ಫ್ರೈಮ್, ಸೋನಿ, ವೂಟ್, ಎಚ್ ಬಿಒ ಮ್ಯಾಕ್ಸ್, ಡಿಸ್ನಿ+ ನಂತಹ ಕಂಪನಿಗಳು ತೀವ್ರ ಸ್ಪರ್ಧೆ ನೀಡುತ್ತಿರುವುದು ನೆಟ್ ಫ್ಲಿಕ್ಸ್ ಚಂದಾದಾರರು ಕುಸಿತವಾಗಲು ಮತ್ತೊಂದು ಕಾರಣವಾಗಿದೆ ಎಂದು ವರದಿ ತಿಳಿಸಿದೆ. ಇದೀಗ ನಮ್ಮ ಚಂದಾದಾರರು ಮತ್ತು ಆದಾಯ ಹೆಚ್ಚಳಕ್ಕೆ ಎಲ್ಲಾ ರೀತಿಯಿಂದಲೂ ಪ್ರಯತ್ನಿಸಲಾಗುತ್ತಿದೆ ಎಂದು ನೆಟ್ ಫ್ಲಿಕ್ಸ್ ವಿವರಿಸಿದೆ.

ಚಂದಾದಾರರ ಆರೋಪವೇನು?

ನಾವು ಎಷ್ಟು ದಿನ ನೀವು ಕೊಟ್ಟ ಕಂಟೆಂಟ್ ಅನ್ನೇ ವೀಕ್ಷಿಸುವುದು. ಅಮೆಜಾನ್ ಫ್ರೈಮ್, ಸೋನಿ, ಡಿಸ್ನಿ+ನಲ್ಲಿ ನಮಗೆ ಬೇಕಾದ ವೆಬ್ ಸೀರೀಸ್, ಸಿನಿಮಾಗಳು ಲಭ್ಯವಾಗುತ್ತದೆ. ಅಷ್ಟೇ ಅಲ್ಲ ಖಾತೆ ಪಾಸ್ ವರ್ಡ್ ಹಂಚಿಕೆಗೆ ಹೆಚ್ಚುವರಿ ಶುಲ್ಕ ನಮಗೆ ಹೊರೆಯಾಗುತ್ತಿದೆ ಎಂಬುದು ಚಂದಾದಾರರ ಆರೋಪವಾಗಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.