ಪಡಿತರ, ಆನ್‌ಲೈನ್‌ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ


Team Udayavani, Mar 1, 2021, 5:30 AM IST

ಪಡಿತರ, ಆನ್‌ಲೈನ್‌ ತರಗತಿ, ಇತರ ಸಂಪರ್ಕಕ್ಕೆ ಪರದಾಡುತ್ತಿರುವ ಜನತೆ

ಬೆಳ್ಮಣ್: ಕಾಂತಾವರ‌ ಗ್ರಾಮ ಪಂಚಾಯತ್‌ ಬೇಲಾಡಿ ಗ್ರಾಮದಲ್ಲಿ ಮೊಬೈಲ್‌ನ ಯಾವುದೇ ನೆಟ್‌ವರ್ಕ್‌ ಲಭ್ಯ ಇಲ್ಲ.
ದೇಶದ ಜನರು ಡಿಜಿಟಲ್‌ ಇಂಡಿಯಾ ಎಂದು ಹೆಮ್ಮೆಯಿಂದ ಬೀಗುತ್ತಿದ್ದರೂ ಬೇಲಾಡಿಯಂತಹ ಹಳ್ಳಿಗಳಲ್ಲಿ ಈ ಮಾತು ಸುಳ್ಳಾಗಿದೆ. ಹಳ್ಳಿ ಹಳ್ಳಿಗಳು ಕೂಡ ಇವತ್ತು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಎಲ್ಲ ವ್ಯವಸ್ಥೆಗಳು ಇಂಟರ್‌ನೆಟ್‌ ಕಾಲದಲ್ಲಿದೆ. ಅದೂ 4ಜಿ, 5ಜಿ ಯುಗದಲ್ಲಿದ್ದೇವೆ. ಆದರೆ ಬೇಲಾಡಿಯ ಜನ ಮಾತ್ರ ಈ ಕಾಲದಲ್ಲೂ ಒಂದು ಫೋನ್‌ ಕರೆ ಮಾಡಬೇಕಾದರೂ ನಾಲ್ಕೈದು ಕಿ.ಮೀ. ಸಾಗಬೇಕು ಇಲ್ಲ ವಾದಲ್ಲಿ ಎತ್ತರದ ಗುಡ್ಡವೇರಬೇಕಾದ ಅನಿವಾರ್ಯತೆಯಲ್ಲಿದ್ದಾರೆ.

500ಕ್ಕೂ ಅಧಿಕ ಮನೆಗಳು
ಬೇಲಾಡಿ ಹಾಗೂ ಕಾಂತಾವರ ಗ್ರಾಮದಲ್ಲಿ ಸುಮಾರು 500ಕ್ಕೂ ಅಧಿಕ ಮನೆಗಳಿದ್ದು ಗ್ರಾಮದ ಉದ್ದಗಲಕ್ಕೂ ದುರ್ಬಲ ಸಂಪರ್ಕ ಸಿಗ್ನಲ್‌ನಿಂದ ಯಾವುದೇ ಖಾಸಗಿ ಮೊಬೈಲ್‌ ಸೇವಾ ಕಂಪೆನಿಗಳ ಸಂಪರ್ಕ ಅಥವಾ ಬಿಎಸ್‌ಎನ್‌ಎಲ್‌ ಸಂಪರ್ಕವೂ ಸಿಗದೆ ಇಲ್ಲಿನ ಜನ ಹೊರ ಜಗತ್ತಿನ ಸಂಪರ್ಕದಿಂದ ದೂರ ಉಳಿದು ಕೊಳ್ಳುವಂತಾಗಿದೆ. ಅಗತ್ಯ ಸಂದರ್ಭದಲ್ಲಿ ಎತ್ತರದ ಪ್ರದೇಶಕ್ಕೆ ತಮ್ಮ ಮೊಬೆ„ಲ್‌ ಕೊಂಡೊಯ್ಯಬೇಕಾಗಿದೆ. ಆದರೆ ಸಮರ್ಪಕ ನೆಟ್‌ವರ್ಕ್‌ ದೊರಕುತ್ತಿಲ್ಲ. ಗ್ರಾಮದಲ್ಲಿ ಹಲವಾರು ಸಂಘ- ಸಂಸ್ಥೆಗಳು, ಕನ್ನಡ ಸಂಘ ಹಾಗೂ ಸಾಹಿತ್ಯ ಹಾಗೂ ಸರಕಾರೇತರ ಸಂಘ ಸಂಸ್ಥೆಗಳು, ಸ್ವಸಹಾಯ ಗುಂಪುಗಳು ಕಾರ್ಯಾಚರಿಸುತ್ತಿವೆ. ಕನ್ನಡ ಮಾಧ್ಯಮ ಶಾಲೆಗಳು, ಹೈಸ್ಕೂಲ್‌ಗ‌ಳಿದ್ದು ಫೋನ್‌ ಕರೆಗೆ ನೆಟ್‌ ವರ್ಕ್‌ ಹಾಗೂ ಇಂಟರ್‌ನೆಟ್‌ ಇಲ್ಲದ ಕಾರಣ ಬಹುತೇಕ ಸಮಸ್ಯೆಯಾಗುತ್ತಿದೆ.

ಬೇಲಾಡಿಯ ಪರಿಸರದ ಮಕ್ಕಳು
ಹಾಗೂ ನಾಗರಿಕರಿಗೆ ಅತ್ಯವಶ್ಯಕವಾದ ದೂರವಾಣಿ ಸಂಪರ್ಕ, ಅಂತರ್ಜಾಲ ಸಂಪರ್ಕವಿಲ್ಲದೆ ವಿದ್ಯಾಭ್ಯಾಸಕ್ಕೂ ತೊಡಕುಂಟಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲವೂ ಅಂತರ್ಜಾಲದ ಮೂಲಕವೇ ವಿದ್ಯಾಭ್ಯಾಸಕ್ಕೆ ಪೂರಕ ಮಾಹಿತಿಯನ್ನು ಪಡೆಯಬೇಕಾಗಿದ್ದು ಕಾಂತಾವರ ಹಾಗೂ ಬೇಲಾಡಿ ಗ್ರಾಮದ ವಿದ್ಯಾರ್ಥಿಗಳು ಇಂಟರ್‌ನೆಟ್‌ ಇಲ್ಲದೆ ದೂರದೂರಿನ ಸೆ„ಬರ್‌ಗಳಿಗೆ ಅಲೆಯುವಂತಾಗಿದೆ.

ಗ್ರಾಮ ಸಭೆಯಲ್ಲೂ ಗದ್ದಲ
ಪ್ರತಿ ಗ್ರಾಮ ಸಭೆಯಲ್ಲೂ ಈ ಸಮಸ್ಯೆ ಕುರಿತು ಗ್ರಾಮಸ್ಥರು ಮನವಿ ಸಲ್ಲಿಸಿದ್ದರೂ ಯಾವುದೇ ಪರಿಹಾರ ಕಂಡಿಲ್ಲ. ತುರ್ತು ಅವಘಡ ಸಂದರ್ಭಗಳಲ್ಲಿ 6-7 ಕಿ.ಮೀ.ವರೆಗೆ ಸಂಚರಿಸಿ ಅನಂತರ ಕರೆ ಮಾಡಬೇಕಾದ ಪರಿಸ್ಥಿತಿ ಗ್ರಾಮಸ್ಥರದ್ದಾಗಿದೆ. ಬೇಲಾಡಿ
ಗ್ರಾಮದಲ್ಲಿ ಖಾಸಗಿ ಅಥವಾ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟವರ್‌ ಅಳವಡಿಸಿ ಗ್ರಾಮಸ್ಥರ ಬಹು ಕಾಲದ ಸಮಸ್ಯೆ ಪರಿಹರಿಸಲು ಕೋರಿದ್ದಾರೆ.

ಪಡಿತರ ವಿತರ‌ಣೆಗೂ ತೊಂದರೆ
ಬೇಲಾಡಿ, ಕಾಂತಾವರ ಗ್ರಾಮದಲ್ಲಿ ಯಾವುದೇ ನೆಟ್‌ವರ್ಕ್‌ ಸಂಪರ್ಕ ಇಲ್ಲದ ಪರಿಣಾಮ ದಿನೇ ದಿನೇ ಇಡೀ ಗ್ರಾಮದಲ್ಲಿ ಸಮಸ್ಯೆಗಳು ಹೆಚ್ಚಾಗು ತ್ತಿದೆ. ಇತ್ತಿಚಿನ ದಿನಗಳಲ್ಲಿ ಬಹುತೇಕ ಸರಕಾರಿ ಸೇವೆಗಳು ಇಂಟರ್‌ನೆಟ್‌ ಮೂಲಕವೇ ಆಗುತ್ತಿದ್ದು, ಗ್ರಾಮಸ್ಥರು ಸರಕಾರಿ ಯೋಜನೆ ಹಾಗೂ ಸೇವೆ ಪಡೆಯುವಲ್ಲಿ ನೆಟ್‌ವರ್ಕ್‌ ಸಮಸ್ಯೆ ಕಾಡುತ್ತಿದೆ. ನ್ಯಾಯಬೆಲೆ ಅಂಗಡಿ ಯಲ್ಲೂ ಪಡಿತರ ವಿತರಣೆಯಲ್ಲೂ ಸರ್ವರ್‌ ತೊಂದರೆಯುಂಟಾಗಿ ಗ್ರಾಮಸ್ಥರು ಪಡಿತರ ಕೇಂದ್ರಗಳಿಗೆ ಪದೇ ಪದೇ ಅಲೆದಾಡುವಂತಾಗಿದೆ.

ಸಮಸ್ಯೆ ಪರಿಹಾರಕ್ಕೆ ಪ್ರಯತ್ನ
ನೂತನ ಪಂಚಾಯತ್‌ ಇತ್ತೀಚೆಗಷ್ಟೇ ಆಡಳಿತಕ್ಕೆ ಬಂದಿದ್ದು ಮೊದಲ ಸಭೆಯಲ್ಲೇ ಈ ಬಗ್ಗೆ ಚರ್ಚಿಸಲಾಗುವುದು. ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು.
– ವನಿತಾ ನಾಯ್ಕ, ಕಾಂತಾವರ ಗ್ರಾ.ಪಂ.ಅಧ್ಯಕ್ಷೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.