ಮಡಾಮಕ್ಕಿ : ನೆಟ್‌ವರ್ಕ್‌ಗಾಗಿ ಎತ್ತರದ ಗುಡ್ಡದಲ್ಲಿ ಟೆಂಟ್‌

ಆನ್‌ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಮ್‌ ಸಂಕಷ್ಟ

Team Udayavani, Jun 19, 2021, 7:30 AM IST

ಮಡಾಮಕ್ಕಿ : ನೆಟ್‌ವರ್ಕ್‌ಗಾಗಿ ಎತ್ತರದ ಗುಡ್ಡದಲ್ಲಿ ಟೆಂಟ್‌

ಕುಂದಾಪುರ : ಇಡೀ ಊರಿಗೆ ನೆಟ್‌ವರ್ಕ್‌ ಇಲ್ಲ. ಎಡಿಬಿಡದೇ ಸುರಿಯುತ್ತಿರುವ ಮಳೆ. ಆನ್‌ಲೈನ್‌ ತರಗತಿ, ವರ್ಕ್‌ಫ್ರಂ ಹೋಂ ಕಿರಿಕಿರಿ. ಇದಕ್ಕಾಗಿ ಈ ಊರಿನ ಜನ ಕಂಡುಕೊಂಡ ಪರಿಹಾರ ಎತ್ತರದ ಗುಡ್ಡದಲ್ಲಿ ಟೆಂಟ್‌ ನಿರ್ಮಾಣ.

ಇಲ್ಲಿನ ಮಡಾಮಕ್ಕಿ ಗ್ರಾಮದ ಹಂಜ, ಕಾರಿಮಲೆ, ಎಡ್ಮಲೆ ಭಾಗದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿದೆ. ಆದರೆ ಎತ್ತರದ ಗುಡ್ಡವೊಂದಿರುವ ಹಂಜದಲ್ಲಿ ಎಲ್ಲ ಕಂಪೆನಿಗಳ 4ಜಿ ನೆಟ್‌ವರ್ಕ್‌ ಸಿಗುತ್ತಿದೆ. ಇದಕ್ಕಾಗಿ ಮಕ್ಕಳ ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಊರಿನಿಂದ 5-6 ಕಿ.ಮೀ. ದೂರದ ಎತ್ತರದಲ್ಲಿರುವ ಗುಡ್ಡದಲ್ಲಿ ಟೆಂಟ್‌ ನಿರ್ಮಿಸಲಾಗಿದೆ.

54 ಮನೆಗಳು
ಹಂಜದ 25 ಮನೆ, ಎಡ್ಮಲೆಯ 21 ಮನೆ ಹಾಗೂ ಕಾರಿಮಲೆಯ 8 ಸೇರಿದಂತೆ ಈ ಭಾಗದಲ್ಲಿ 54 ಮನೆಗಳಿದ್ದು, 400ರಿಂದ 500 ಮಂದಿ ನೆಲೆಸಿದ್ದಾರೆ. ಇಲ್ಲಿ ಯಾರಿಗೂ ನೆಟ್‌ವರ್ಕ್‌ ಸೌಲಭ್ಯವಿಲ್ಲ. ಈ ಊರಲ್ಲಿ ಸ್ನಾತಕೋತ್ತರ ಪದವಿ, ಪದವಿ, ಪಿಯುಸಿ, ಐಟಿಐ, ಪ್ರೌಢಶಾಲೆ, ಪ್ರಾಥಮಿಕ ಸೇರಿದಂತೆ ಒಟ್ಟು 33 ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಆನ್‌ಲೈನ್‌ ತರಗತಿ ನಡೆಯುತ್ತಿದ್ದು, ಅದಕ್ಕಾಗಿ ದಿನವೂ ಈ ಗುಡ್ಡವೇರಿ, ಟೆಂಟ್‌ನಲ್ಲಿ ಕುಳಿತು ಆನ್‌ಲೈನ್‌ ಪಾಠ ಕೇಳುವಂತಾಗಿದೆ.

ಮಳೆಯಿಂದ ಸಂಕಷ್ಟ
ಬೇಸಗೆಯಲ್ಲಾದರೆ ಟೆಂಟ್‌ನ ಆವಶ್ಯಕತೆ ಅಷ್ಟೊಂದು ಇರಲಿಲ್ಲ. ಆದರೆ ಈಗ ಭಾರೀ ಗಾಳಿ-ಮಳೆಗೆ ಟೆಂಟ್‌ನೊಳಗೆ ಕುಳಿತು ಪಾಠ ಕೇಳುವುದು ಅಥವಾ ಕೆಲಸ ಮಾಡುವುದು ಭಾರೀ ಕಷ್ಟಕರವಾಗಿದೆ. ಮಳೆಗೆ ಗುಡ್ಡವೇರಿ ಹೋಗುವುದು ಸಹ ಸವಾಲಿನ ಕೆಲಸವಾಗಿದೆ.

ನೆಟ್‌ವರ್ಕ್‌ ಕಲ್ಪಿಸಲು ಆಗ್ರಹ
ನಕ್ಸಲ್‌ ಪೀಡಿತ ಮಡಾಮಕ್ಕಿ ಗ್ರಾಮದ ಈ ಹಂಜ, ಎಡ್ಮಲೆ, ಕಾರಿಮಲೆ ಊರಿನ ಜನರು ಕಳೆದ ಹಲವು ವರ್ಷಗಳಿಂದ ನೆಟ್‌ವರ್ಕ್‌ ಸಮಸ್ಯೆ ಪರಿಹಾರಕ್ಕಾಗಿ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಮೊರೆಯಿಡುತ್ತಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ನೆಟ್‌ವರ್ಕ್‌ ವ್ಯವಸ್ಥೆ ಕಲ್ಪಿಸಲಿ ಎನ್ನುವುದು ಇಲ್ಲಿನ ಗ್ರಾಮಸ್ಥರ ಆಗ್ರಹವಾಗಿದೆ.

ನೆಟ್‌ವರ್ಕ್‌ಗೆ ವ್ಯವಸ್ಥೆ ಮಾಡುವಂತೆ ಪಂಚಾಯತ್‌ನಿಂದ ಸಂಬಂಧಪಟ್ಟವರಿಗೆ ಅಹವಾಲು ಸಲ್ಲಿಸಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈಗಂತೂ ಆನ್‌ಲೈನ್‌ ತರಗತಿ, ವರ್ಕ್‌ ಫ್ರಂ ಹೋಮ್‌ ಪದ್ದತಿ ಹೆಚ್ಚಾಗಿರುವುದರಿಂದ ನೆಟ್‌ವರ್ಕ್‌ ಆವಶ್ಯಕತೆ ಬಹಳಷ್ಟಿದೆ. ಇನ್ನಾದರೂ ಪ್ರಯತ್ನಿಸಲಿ.
– ದಯಾನಂದ ಪೂಜಾರಿ, ಉಪಾಧ್ಯಕ್ಷರು, ಮಡಾಮಕ್ಕಿ ಗ್ರಾ.ಪಂ.

ಮನೆಯಲ್ಲಿ ನೆಟ್‌ವರ್ಕ್‌ ಇಲ್ಲ. ಹಾಗಾಗಿ ಗುಡ್ಡಕ್ಕೆ ಹೋಗಿ ಆನ್‌ಲೈನ್‌ ಪಾಠ ಕೇಳುವಂತಾಗಿದೆ. ಈಗಂತೂ ಜೋರಾಗಿ ಮಳೆ ಬರುತ್ತಿದ್ದು, ಪಾಠ ಕೇಳುವುದೇ ಕಷ್ಟವಾಗಿದೆ. ನಮ್ಮ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ನೆಟÌರ್ಕ್‌ ವ್ಯವಸ್ಥೆ ಕಲ್ಪಿಸಿಕೊಡಲಿ.
– ಸುಮಂತ್‌ ಶೆಟ್ಟಿ ಹಂಜ, ಎಂಕಾಂ ವಿದ್ಯಾರ್ಥಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.