ಸಹಕಾರಿ ಸಂಘಗಳ ಕಾರ್ಯದರ್ಶಿಗಳ ನಿಯಂತ್ರಣಕ್ಕೆ ಹೊಸ ಕಾಯ್ದೆ : ಸಚಿವ ಸೋಮಶೇಖರ್


Team Udayavani, Apr 12, 2021, 3:33 PM IST

ಜಜಜಜಜಜಜಜಜಜಜಜಜಜಜಜ

ಕಲಬುರಗಿ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ( ವಿಎಸ್ಎಸ್ಎನ್) ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳ ಮೇಲೆ ನಿಯಂತ್ರಣ ಹೊಂದಲು ಹೊಸ ಕಾಯ್ದೆ ಜಾರಿ ತರಲಾಗುತ್ತಿದೆ ಎಂದು ಸಹಕಾರಿ ಸಚಿವ ಎಸ್. ಟಿ ಸೋಮಶೇಖರ್ ಹೇಳಿದರು.

ಇಲ್ಲಿನ ಕಲಬುರಗಿ- ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ ( ಡಿಸಿಸಿ) ಬ್ಯಾಂಕ್ ಹಾಗೂ ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು  ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಾಥಮಿಕ ಕೃಷಿ ಪತ್ತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಾಯದರ್ಶಿ ಹಾಗೂ ಸಿಬ್ಬಂದಿ ಯಾವುದಾದರೂ ಅವ್ಯವಹಾರ ಮತ್ತು ಕರ್ತವ್ಯ ಲೋಪ ಎಸಗಿದಲ್ಲಿ ಕ್ರಮ ಕೈಗೊಳ್ಳಲು ಜತೆಗೆ ಒಂದು ಸಂಘದಿಂದ ಮತ್ತೊಂದು ಸಂಘಕ್ಕೆ ವರ್ಗಾಯಿಸುವ ಅಂಶಗಳು ಸೇರಿ ಇತರ ಕ್ರಮಗಳನ್ನು ಕೈಗೊಳ್ಳಲು ಈಗ ಡಿಸಿಸಿ ಬ್ಯಾಂಕ್ ಗಳಿಗೆ ಅಧಿಕಾರವಿಲ್ಲ. ಹೀಗಾಗಿ ಆಡಳಿತ ಚುರುಕುಗೊಳಿಸಲು ಹಾಗೂ ಆರ್ಥಿಕ ನಿರ್ವಹಣೆ ಯಲ್ಲಿ ನಿಗಾ ವಹಿಸಲು ಬಹು ಮುಖ್ಯವಾಗಿ ಡಿಸಿಸಿ ಬ್ಯಾಂಕುಗಳ ಆಡಳಿತ ಮಂಡಳಿ ಒತ್ತಾಯ ಹಾಗೂ ಅಭಿಪ್ರಾಯ ಮೇರೆಗೆ ಹೊಸ ಕಾಯ್ದೆ ಜಾರಿ ತರಲಾಗುತ್ತಿದೆ. ಹೊಸ ಕಾಯ್ದೆಯು ಮುಂದಿನ ತಿಂಗಳು ನಡೆಯುವ ಅಧಿವೇಶನದಲ್ಲಿ ಅಂಗೀಕಾರಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ಸಚಿವರು ವಿವರಣೆ ನೀಡಿದರು.

ಅದೇ ರೀತಿ ಫ್ಯಾಕ್ಸ್ ಸಿಬ್ಬಂದಿ ಗಳ ವರ್ಗಾವಣೆಗೂ ಈ ಕಾಯ್ದೆ ಅನ್ವಯವಾಗಲಿದ್ದು, ಒಟ್ಟಾರೆ ಸಹಕಾರಿ ಕ್ಷೇತ್ರ ಬಲವರ್ದನೆಗೆ 18 ಬದಲಾವಣೆ ಅಂಶಗಳೊಂದಿಗೆ ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ   1959ನ್ನು ತಿದ್ದುಪಡಿ ಮುಖಾಂತರ ಹೊಸ ಸಹಕಾರಿ ಕಾಯ್ದೆ ಜಾರಿ ತರಲಾಗುತ್ತಿದೆ. ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಸಹಕಾರಿ ಸಚಿವರು ಸ್ಪಷ್ಟಪಡಿಸಿದರು.

ಆತ್ಮ ನಿರ್ಭರ ಭಾರತ ಯೋಜನೆ ಅಡಿ ಸಹಕಾರಿ ಸಂಘಗಳಿಗೆ ಹೆಚ್ಚುವರಿ ಸಾಲ ದೊರಕಲಿದೆ ಎಂದ ಸಚಿವರು, ಎಲ್ಲ ಸಹಕಾರಿ ಸಂಸ್ಥೆಗಳನ್ನು ಒಂದೇ ಸೂರಿನಡಿ ತರಬೇಕೆಂಬುದು ಚಾಲನೆಯಲ್ಲಿದೆ ಎಂದರು. ರಾಜ್ಯದ 21 ಡಿಸಿಸಿ ಬ್ಯಾಂಕ್ ಗಳಲ್ಲಿ ಕೊನೆ ಸ್ಥಾನದಲ್ಲಿರುವ ಡಿಸಿಸಿ ಬ್ಯಾಂಕ್ ನ್ನು ಮೇಲೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ 10 ಕೋ ರೂ ಷೇರು ನೀಡಲಾಗಿದೆ. ಅದೇ ರೀತಿ ಅಪೆಕ್ಸ್ ದಿಂದ 200 ಕೋ ರೂ ಸಾಲ ನೀಡಲಾಗಿದೆಯಲ್ಲದೇ ನಬಾರ್ಡ್ ದಿಂದಲೂ ಆರ್ಥಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಸಚಿವರು ವಿವರಣೆ ನೀಡಿದರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಹಾಲು ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಪಾಟೀಲ್, ವ್ಯವಸ್ಥಾಪಕ  ನಿರ್ದೇಶಕರಾದ ಚಿದಾನಂದ ನಿಂಬಾಳ, ಪ್ರಕಾಶಕುಮಾರ ಹಾಗೂ ಆಡಳಿತ ಮಂಡಳಿ ನಿರ್ದೆಶಕರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.