ಕಾಶ್ಮೀರ ಬಿಟ್ಟು ಉಗ್ರತ್ವ ನಿಯಂತ್ರಣಕ್ಕೆ ತರಲಿ ಹೊಸ ಪ್ರಧಾನಿ


Team Udayavani, Apr 13, 2022, 6:00 AM IST

ಕಾಶ್ಮೀರ ಬಿಟ್ಟು ಉಗ್ರತ್ವ ನಿಯಂತ್ರಣಕ್ಕೆ ತರಲಿ ಹೊಸ ಪ್ರಧಾನಿ

ನೆರೆಯ ರಾಷ್ಟ್ರ ಪಾಕಿಸ್ಥಾನದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದಿವೆ. ಪಾಕಿಸ್ಥಾನ ಮುಸ್ಲಿಂ ಲೀಗ್‌- ನವಾಜ್‌ನ ಮುಖಂಡ ಶಹಬಾಜ್‌ ಷರೀಫ್ ನೇತೃತ್ವದಲ್ಲಿ ವಿಪಕ್ಷಗಳ ಒಕ್ಕೂಟ ಸರಕಾರ‌ ಅಧಿಕಾರಕ್ಕೆ ಬಂದಿದೆ. ಅಲ್ಲಿ ಯಾವುದೇ ರೀತಿಯ ಸರಕಾರ‌ ಬಂದರೂ ಇದರಿಂದ ಭಾರತಕ್ಕೆ ಧನಾತ್ಮಕ ಪರಿಣಾಮವನ್ನಾಗಲಿ, ಉಗ್ರ ಕೃತ್ಯಗಳಿಗೆ ನಿಯಂತ್ರಣ ಹೇರುವ ಯಾವುದೇ ಪ್ರಯತ್ನವನ್ನಾಗಲೀ ಪಾಕಿಸ್ಥಾನ ಮಾಡಲಾರದು. ಹಾಗೆಯೇ ಪಾಕಿಸ್ಥಾನದಲ್ಲಿ ಸರಕಾರ‌ದ ನೇತೃತ್ವದ ವಹಿಸುವವರಿಗೆ ಕಾಶ್ಮೀರ ವಿವಾದದ ಬಗ್ಗೆ ಮಾತನಾಡದೆ ಕುರ್ಚಿ ಏರಲು ಆಗುವುದೇ ಇಲ್ಲ. ಅದಕ್ಕೆ ಹೊಸ ಪ್ರಧಾನಿಯೂ ಹೊರತಲ್ಲ. ಶಹಬಾಜ್‌ ಷರೀಫ್ ಅವರು ಮಾತನಾಡುತ್ತಾ “ಭಾರತದ ಜತೆಗೆ ಪಾಕಿಸ್ಥಾನ ಶಾಂತಿಯನ್ನು ಬಯಸುತ್ತದೆ. ಆದರೆ ಮೊದಲಿಗೆ ಕಾಶ್ಮೀರ ವಿಚಾರ ಇತ್ಯರ್ಥವಾಗಬೇಕು’ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಭಾರತ ಸರಕಾರದ ನಿಲುವು ಏನು ಎನ್ನುವುದು ಈಗಾಗಲೇ 75 ವರ್ಷಗಳಿಂದ ಜಗತ್ತಿಗೆ ಸಾರಿ ಸಾರಿ ಹೇಳಲಾಗಿದೆ.

ಪಾಕಿಸ್ಥಾನದ ಹೊಸ ಸರಕಾರ‌ ಮೊದಲಾಗಿ ತನ್ನ ದೇಶದಲ್ಲಿಯೇ ನಾರುತ್ತಿರುವ ಕೊಳೆಯನ್ನು ತೊಳೆಯಲು ಮುಂದಾಗಲಿ. “ಕಾಶ್ಮೀರ’ ಎಂಬ ಪದ ಮುಂದಿಟ್ಟುಕೊಂಡು ಸ್ಥಾನ ಭದ್ರಗೊಳಿಸುವ ಯಾವ ಕೆಲಸವನ್ನೂ ಹೊಸ ಪ್ರಧಾನಿ ಮಾಡುವುದು ಬೇಡ. ಆ ದೇಶದ ಸರಕಾರ‌ದ  ಚುಕ್ಕಾಣಿ ಹಿಡಿದವರು ಕಾಶ್ಮೀರ ವಿಚಾರ ಮುಂದಿಟ್ಟು ಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾತನಾಡಿದವರು, ಅದರ ನೆಪದಲ್ಲಿ ದೇಶದ ಮೇಲೆ ದಂಡೆತ್ತಿ ಬಂದವರು ಏನಾಗಿದ್ದಾರೆ ಎಂಬ ಬಗ್ಗೆ ಶಹಬಾಜ್‌  ಇತಿಹಾಸದ ದಿನಗಳ ಬಗ್ಗೆ ಓದಿ ತಿಳಿದುಕೊಳ್ಳಲಿ.

ಹೊಸ ಪ್ರಧಾನಿ, ಭಾರತದ ಜತೆಗೆ ನಿಷ್ಕಲ್ಮಷ ಹೃದಯದಿಂದ ಉತ್ತಮ ಹಾಗೂ ಸೌಹಾರ್ದಯುತ ಬಾಂಧವ್ಯ ಬಯಸುವುದೇ ಆಗಿದ್ದಲ್ಲಿ, ತಮ್ಮ ದೇಶದ ಸೇನಾ ಮುಖ್ಯಸ್ಥರಿಗೆ, ಭಾರತವೂ ಸೇರಿದಂತೆ ಇತರ ದೇಶಗಳಲ್ಲಿ ಕಿಡಿಗೇಡಿತನ ಮಾಡಲು ತರಬೇತಿ ಮತ್ತು ಕುಮ್ಮಕ್ಕು ನೀಡುವ ಗುಪ್ತಚರ ಸಂಸ್ಥೆ ಐಎಸ್‌ಐ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಲಿ. ಈಗಾಗಲೇ ಕಾಶ್ಮೀರ ಭಾರತಕ್ಕೆ ಸೇರಿಯಾಗಿದೆ. ಈ ವಿಷಯ ಬಿಟ್ಟು ಇನ್ನಾದರೂ ಅಭಿವೃದ್ಧಿ ಕುರಿತ ವಿಚಾರಗಳನ್ನು ಇರಿಸಿಕೊಂಡು ಮುಂದೆ ಹೋಗೋಣ ಎಂಬ ಗಟ್ಟಿ ನಿರ್ಧಾರವನ್ನು ಶಹಬಾಜ್‌ ತೆಗೆದುಕೊಳ್ಳಲಿ.

ಹೊಸ ಸರಕಾರ‌ದ ಮುಖ್ಯಸ್ಥರು ಪ್ರಧಾನವಾಗಿ ಮಾಡಬೇಕಾದ ಮತ್ತೂಂದು ಕೆಲಸವೆಂದರೆ ಪಾಕಿಸ್ಥಾನ ಆಕ್ರಮಿತ ಪ್ರದೇಶವನ್ನು ಬಾಯಿಮುಚ್ಚಿ ನಮ್ಮ ದೇಶಕ್ಕೆ ಒಪ್ಪಿಸಬೇಕು. ಜತೆಗೆ ಅಲ್ಲಿ ಇರುವ ಉಗ್ರ ಶಿಬಿರವನ್ನು ಧ್ವಂಸಗೊಳಿಸುವ ನಿಟ್ಟಿನಲ್ಲಿ ಶಹಬಾಜ್‌ ಷರೀಫ್ ನೇತೃತ್ವದ ಸರಕಾರ‌ವೇ ಆದೇಶ ಕೊಟ್ಟರೆ ಅತ್ಯುತ್ತಮ ಕೆಲಸವೇ ಆದೀತು.

ಷರೀಫ್ ಅವರು ತಮ್ಮ ದೇಶದಲ್ಲಿ ಬೃಹದಾಕಾರವಾಗಿ ಶೇಖರಿಸಿ ನಿಂತಿರುವ ಉಗ್ರತ್ವದ ಕೊಳೆ ತೊಳೆಯಲಿ. ಪಾಕಿಸ್ಥಾನದಾದ್ಯಂತ ಮನೆ ಮಾಡಿರುವ ಉಗ್ರರ ಬೇರುಗಳನ್ನು ಹೊಸಕಿ ಹಾಕಲಿ. ಹಾಗೆಯೇ ಜಾಗತಿಕ ಮಟ್ಟದಲ್ಲಿಯೂ ಉಗ್ರರ ಆಶ್ರಯದಾತ ಎಂಬ ಪಟ್ಟವನ್ನು ಕಳೆದುಕೊಳ್ಳಲಿ. ಜತೆಗೆ ತಮ್ಮ ಮನೆ ಬಾಗಿಲು ಭದ್ರಪಡಿಸುವ ಕೆಲಸ ಬಿಟ್ಟು, ಇನ್ನೊಬ್ಬರ ಮನೆ ಬಾಗಿಲು ಗಟ್ಟಿಯಾಗಿಲ್ಲ ಎಂಬ ಬೋಧನೆ ನಿಲ್ಲಿಸಿದರೆ ಅವರಿಗೇ ಒಳ್ಳೆಯದು. ಪಾಕಿಸ್ಥಾನದ ಮಟ್ಟಿಗೆ ಅಂಥ ನಿರೀಕ್ಷೆ ಮಾಡುವುದು ಸಾಧುವಲ್ಲ. ಏಕೆಂದರೆ, ಪಾಕಿಸ್ತಾನ ಹೇಳುವುದೊಂದು, ಮಾಡುವುದು ಮತ್ತೂಂದು ಎಂಬುದು ಭಾರತಕ್ಕೆ ಹಿಂದಿನಿಂದಲೂ ಅರಿವಾಗಿದೆ.

 

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.