CWC-19: ರೋಚಕ ಸೆಮಿ ಕಾಳಗ : ಕಿವೀಸ್ ಕಿಲ ಕಿಲ

ಭಾರತಕ್ಕೆ ಕೈಕೊಟ್ಟ ಬ್ಯಾಟಿಂಗ್ ; ನಡೆಯದ ಧೋನಿ, ಜಡೇಜಾ ಕಮಾಲ್

Team Udayavani, Jul 10, 2019, 7:32 PM IST

111

ಮ್ಯಾಂಚೆಸ್ಟರ್: ಈ ಬಾರಿಯ ವಿಶ್ವಕಪ್ ಕೂಟದ ಅತ್ಯಂತ ರೋಮಾಂಚಕ ಫೈಟ್ ಗೆ ಸಾಕ್ಷಿಯಾದ ಪ್ರಥಮ ಸೆಮಿಫೈನಲ್ ಸೆಣೆಸಾಟದಲ್ಲಿ ಬಲಿಷ್ಟ ಭಾರತವನ್ನು 18 ರನ್ನುಗಳಿಂದ ಮಣಿಸಿದ ನ್ಯೂಝಿಲ್ಯಾಂಡ್ ಸತತ ಎರಡನೇ ಬಾರಿಗೆ ವಿಶ್ವಕಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಭಾರತ 49.3 ಓವರುಗಳಲ್ಲಿ 221 ರನ್ನುಗಳಿಗೆ ಆಲೌಟ್ ಆಗಿ ತನ್ನ ಮೂರನೇ ವಿಶ್ವಕಪ್ ಗೆಲುವಿನ ಕನಸಿಗೆ ಎಳ್ಳು ನೀರು ಬಿಟ್ಟುಕೊಂಡಿತು. ಮಾತ್ರವಲ್ಲದೇ 8 ವರ್ಷಗಳ ಬಳಿಕ ವಿಶ್ವಕಪ್ ಗೆದ್ದು ಆಂಗ್ಲರ ನಾಡಿನಲ್ಲಿ 1983ರ ಇತಿಹಾಸವನ್ನು ಪುನರಾವರ್ತಿಸುವ ಕೊಹ್ಲಿ ಬಳಗದ ಕನಸು ನನಸಾಗಲಿಲ್ಲ.

ಮಳೆಯ ಕಾಟಕ್ಕೆ ತುತ್ತಾದ ಈ ಸೆಮಿಫೈನಲ್ ಪಂದ್ಯ ಮೀಸಲು ದಿನಕ್ಕೆ ವಿಸ್ತರಣೆಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲ್ಯಾಂಡ್ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ಗಳನ್ನು ಕಳೆದುಕೊಂಡು 239 ರನ್ನುಗಳ ಸಾಧಾರಣ ಮೊತ್ತವನ್ನು ಕಲೆ ಹಾಕಿತ್ತು.

ಕಿವೀಸ್ ಪರ ನಾಯಕ ಕೇನ್ ವಿಲಿಯಮ್ಸ್ 67 ರನ್ನುಗಳನ್ನು ಬಾರಿಸಿದರೆ ರಾಸ್ ಟೈಲರ್ ಇನ್ನಿಂಗ್ಸ್ ನ ಸರ್ವಾಧಿಕ 74 ರನ್ನುಗಳನ್ನು ಬಾರಿಸಿದರು. ಉಳಿದ ಬ್ಯಾಟ್ಸ್ ಮನ್ ಗಳ ಪ್ರದರ್ಶನ ನಿರಾಶಾದಾಯಕವಾಗಿತ್ತು.

ಎದುರಾಳಿ ನೀಡಿದ ಸವಾಲನ್ನು ಬೆನ್ನತ್ತಿದ ಭಾರತದ ಆರಂಭ ತೀರಾ ಶೋಚನೀಯವಾಗಿತ್ತು. ತಂಡದ ಮೊತ್ತ 4 ರನ್ ಆಗುವಷ್ಟರಲ್ಲಿ ರೋಹಿತ್ ಶರ್ಮಾ (1) ಔಟಾದರೆ ಇನ್ನೊಂದು ರನ್ ಸೇರುವಷ್ಟರಲ್ಲಿ ನಾಯಕ ಕೊಹ್ಲಿ (1) ವಿಕೆಟ್ ಉದುರಿತ್ತು ಇದರ ಬೆನ್ನಿಗೇ ರಾಹುಲ್ (1) ವಿಕೆಟ್ ಉರುಳಿತ್ತು ಆಗ ತಂಡದ ಮೊತ್ತ 5-3. ಭರವಸೆ ಮೂಡಿಸಿದ್ದ ದಿನೇಶ್ ಕಾರ್ತಿಕ್ (6) ಯಾವುದೇ ಪರಾಕ್ರಮ ತೋರಲಿಲ್ಲ. ಆದರೆ ನಂತರ ಜೊತೆಯಾದ ರಿಷಭ್ ಪಂತ್ (32) ಹಾಗೂ ಹಾರ್ಧಿಕ್ ಪಾಂಡ್ಯ (32) ನಿಧಾನವಾಗಿ ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡಿದರು.

ಈ ಜೋಡಿ ಬೇರ್ಪಟ್ಟ ಬಳಿಕ ಧೋನಿ (50) ಹಾಗೂ ಜಡೇಜಾ (77) ಭಾರತದ ಗೆಲುವಿನ ಆಸೆಯನ್ನು ಚಿಗುರಿಸಿದರು. ಇದರಲ್ಲಿ ಧೋನಿ ನಿಧಾನಗತಿಯ ಬ್ಯಾಟಿಂಗ್ ಮೊರೆಹೋದರೆ ಜಡೇಜಾ ಕಿವೀಸ್ ಬೌಲರ್ ಗಳನ್ನು ದಂಡಿಸತೊಡಗಿದರು. ಜಡೇಜಾ 59 ಎಸೆತಗಳಲ್ಲಿ 77 ರನ್ನುಗಳನ್ನು ಬಾರಿಸಿದರು ಇದರಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು.

ಆದರೆ ಉತ್ತಮ ಜೊತೆಯಾಟ ಕಟ್ಟಿದ್ದ ಜಡೇಜಾ ಹಾಗೂ ದೋನಿ ನಾಲ್ಕೇ ಎಸೆತಗಳ ಅಂತರದಲ್ಲಿ ಔಟಾಗುವುದರೊಂದಿಗೆ ಭಾರತದ ಹೋರಾಟ ಅಂತ್ಯಗೊಳ್ಳುವುದು ಖಚಿತವಾಗಿತ್ತು. ಗೆಲುವಿಗೆ ಬೇಕಾಗಿದ್ದ 19 ರನ್ನುಗಳನ್ನು ಬಾರಿಸಲು ಬಾಲಂಗೋಚಿಗಳು ವಿಫಲರಾದರು.

ನ್ಯೂಝಿಲ್ಯಾಂಡ್ ತಂಡದ ಬೌಲಿಂಗ್ ಮತ್ತು ಕ್ಷೇತ್ರರಕ್ಷಣೆ ಉತ್ಕೃಷ್ಟ ಮಟ್ಟದಲ್ಲಿದ್ದುದೂ ಸಹ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತೆನ್ನಬಹುದು.

3.70 ಎಕಾನಮಿಯಲ್ಲಿ ಬೌಲಿಂಗ್ ನಡೆಸಿದ ಮ್ಯಾಟ್ ಹೆನ್ರಿ 10 ಓವರುಗಳಲ್ಲಿ 3 ವಿಕೆಟ್ ಪಡೆದು ಮಿಂಚಿದರು. ಇದರಲ್ಲಿ ಶರ್ಮಾ ಮತ್ತು ರಾಹುಲ್ ವಿಕಟ್ ಗಳೂ ಸೇರಿದೆ. ವೇಗಿ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರು. ಸ್ಪಿನ್ನರ್ ಸ್ಯಾಟ್ನರ್ 2 ವಿಕೆಟ್ ಪಡೆದರೆ ಫರ್ಗ್ಯುಸನ್ ಹಾಗೂ ನೀಶಮ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.