CWC-19: ರೋಚಕ ಸೆಮಿ ಕಾಳಗ : ಕಿವೀಸ್ ಕಿಲ ಕಿಲ

ಭಾರತಕ್ಕೆ ಕೈಕೊಟ್ಟ ಬ್ಯಾಟಿಂಗ್ ; ನಡೆಯದ ಧೋನಿ, ಜಡೇಜಾ ಕಮಾಲ್

Team Udayavani, Jul 10, 2019, 7:32 PM IST

111

ಮ್ಯಾಂಚೆಸ್ಟರ್: ಈ ಬಾರಿಯ ವಿಶ್ವಕಪ್ ಕೂಟದ ಅತ್ಯಂತ ರೋಮಾಂಚಕ ಫೈಟ್ ಗೆ ಸಾಕ್ಷಿಯಾದ ಪ್ರಥಮ ಸೆಮಿಫೈನಲ್ ಸೆಣೆಸಾಟದಲ್ಲಿ ಬಲಿಷ್ಟ ಭಾರತವನ್ನು 18 ರನ್ನುಗಳಿಂದ ಮಣಿಸಿದ ನ್ಯೂಝಿಲ್ಯಾಂಡ್ ಸತತ ಎರಡನೇ ಬಾರಿಗೆ ವಿಶ್ವಕಪ್ ಫೈನಲ್ ಗೆ ಲಗ್ಗೆಯಿಟ್ಟಿದೆ.

ಭಾರತ 49.3 ಓವರುಗಳಲ್ಲಿ 221 ರನ್ನುಗಳಿಗೆ ಆಲೌಟ್ ಆಗಿ ತನ್ನ ಮೂರನೇ ವಿಶ್ವಕಪ್ ಗೆಲುವಿನ ಕನಸಿಗೆ ಎಳ್ಳು ನೀರು ಬಿಟ್ಟುಕೊಂಡಿತು. ಮಾತ್ರವಲ್ಲದೇ 8 ವರ್ಷಗಳ ಬಳಿಕ ವಿಶ್ವಕಪ್ ಗೆದ್ದು ಆಂಗ್ಲರ ನಾಡಿನಲ್ಲಿ 1983ರ ಇತಿಹಾಸವನ್ನು ಪುನರಾವರ್ತಿಸುವ ಕೊಹ್ಲಿ ಬಳಗದ ಕನಸು ನನಸಾಗಲಿಲ್ಲ.

ಮಳೆಯ ಕಾಟಕ್ಕೆ ತುತ್ತಾದ ಈ ಸೆಮಿಫೈನಲ್ ಪಂದ್ಯ ಮೀಸಲು ದಿನಕ್ಕೆ ವಿಸ್ತರಣೆಗೊಂಡಿತ್ತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ನ್ಯೂಝಿಲ್ಯಾಂಡ್ ನಿಗದಿತ 50 ಓವರುಗಳಲ್ಲಿ 8 ವಿಕೆಟ್ ಗಳನ್ನು ಕಳೆದುಕೊಂಡು 239 ರನ್ನುಗಳ ಸಾಧಾರಣ ಮೊತ್ತವನ್ನು ಕಲೆ ಹಾಕಿತ್ತು.

ಕಿವೀಸ್ ಪರ ನಾಯಕ ಕೇನ್ ವಿಲಿಯಮ್ಸ್ 67 ರನ್ನುಗಳನ್ನು ಬಾರಿಸಿದರೆ ರಾಸ್ ಟೈಲರ್ ಇನ್ನಿಂಗ್ಸ್ ನ ಸರ್ವಾಧಿಕ 74 ರನ್ನುಗಳನ್ನು ಬಾರಿಸಿದರು. ಉಳಿದ ಬ್ಯಾಟ್ಸ್ ಮನ್ ಗಳ ಪ್ರದರ್ಶನ ನಿರಾಶಾದಾಯಕವಾಗಿತ್ತು.

ಎದುರಾಳಿ ನೀಡಿದ ಸವಾಲನ್ನು ಬೆನ್ನತ್ತಿದ ಭಾರತದ ಆರಂಭ ತೀರಾ ಶೋಚನೀಯವಾಗಿತ್ತು. ತಂಡದ ಮೊತ್ತ 4 ರನ್ ಆಗುವಷ್ಟರಲ್ಲಿ ರೋಹಿತ್ ಶರ್ಮಾ (1) ಔಟಾದರೆ ಇನ್ನೊಂದು ರನ್ ಸೇರುವಷ್ಟರಲ್ಲಿ ನಾಯಕ ಕೊಹ್ಲಿ (1) ವಿಕೆಟ್ ಉದುರಿತ್ತು ಇದರ ಬೆನ್ನಿಗೇ ರಾಹುಲ್ (1) ವಿಕೆಟ್ ಉರುಳಿತ್ತು ಆಗ ತಂಡದ ಮೊತ್ತ 5-3. ಭರವಸೆ ಮೂಡಿಸಿದ್ದ ದಿನೇಶ್ ಕಾರ್ತಿಕ್ (6) ಯಾವುದೇ ಪರಾಕ್ರಮ ತೋರಲಿಲ್ಲ. ಆದರೆ ನಂತರ ಜೊತೆಯಾದ ರಿಷಭ್ ಪಂತ್ (32) ಹಾಗೂ ಹಾರ್ಧಿಕ್ ಪಾಂಡ್ಯ (32) ನಿಧಾನವಾಗಿ ಇನ್ನಿಂಗ್ಸ್ ಕಟ್ಟುವ ಕೆಲಸ ಮಾಡಿದರು.

ಈ ಜೋಡಿ ಬೇರ್ಪಟ್ಟ ಬಳಿಕ ಧೋನಿ (50) ಹಾಗೂ ಜಡೇಜಾ (77) ಭಾರತದ ಗೆಲುವಿನ ಆಸೆಯನ್ನು ಚಿಗುರಿಸಿದರು. ಇದರಲ್ಲಿ ಧೋನಿ ನಿಧಾನಗತಿಯ ಬ್ಯಾಟಿಂಗ್ ಮೊರೆಹೋದರೆ ಜಡೇಜಾ ಕಿವೀಸ್ ಬೌಲರ್ ಗಳನ್ನು ದಂಡಿಸತೊಡಗಿದರು. ಜಡೇಜಾ 59 ಎಸೆತಗಳಲ್ಲಿ 77 ರನ್ನುಗಳನ್ನು ಬಾರಿಸಿದರು ಇದರಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸೇರಿತ್ತು.

ಆದರೆ ಉತ್ತಮ ಜೊತೆಯಾಟ ಕಟ್ಟಿದ್ದ ಜಡೇಜಾ ಹಾಗೂ ದೋನಿ ನಾಲ್ಕೇ ಎಸೆತಗಳ ಅಂತರದಲ್ಲಿ ಔಟಾಗುವುದರೊಂದಿಗೆ ಭಾರತದ ಹೋರಾಟ ಅಂತ್ಯಗೊಳ್ಳುವುದು ಖಚಿತವಾಗಿತ್ತು. ಗೆಲುವಿಗೆ ಬೇಕಾಗಿದ್ದ 19 ರನ್ನುಗಳನ್ನು ಬಾರಿಸಲು ಬಾಲಂಗೋಚಿಗಳು ವಿಫಲರಾದರು.

ನ್ಯೂಝಿಲ್ಯಾಂಡ್ ತಂಡದ ಬೌಲಿಂಗ್ ಮತ್ತು ಕ್ಷೇತ್ರರಕ್ಷಣೆ ಉತ್ಕೃಷ್ಟ ಮಟ್ಟದಲ್ಲಿದ್ದುದೂ ಸಹ ಟೀಂ ಇಂಡಿಯಾ ಸೋಲಿಗೆ ಕಾರಣವಾಯ್ತೆನ್ನಬಹುದು.

3.70 ಎಕಾನಮಿಯಲ್ಲಿ ಬೌಲಿಂಗ್ ನಡೆಸಿದ ಮ್ಯಾಟ್ ಹೆನ್ರಿ 10 ಓವರುಗಳಲ್ಲಿ 3 ವಿಕೆಟ್ ಪಡೆದು ಮಿಂಚಿದರು. ಇದರಲ್ಲಿ ಶರ್ಮಾ ಮತ್ತು ರಾಹುಲ್ ವಿಕಟ್ ಗಳೂ ಸೇರಿದೆ. ವೇಗಿ ಟ್ರೆಂಟ್ ಬೌಲ್ಟ್ 2 ವಿಕೆಟ್ ಪಡೆದರು. ಸ್ಪಿನ್ನರ್ ಸ್ಯಾಟ್ನರ್ 2 ವಿಕೆಟ್ ಪಡೆದರೆ ಫರ್ಗ್ಯುಸನ್ ಹಾಗೂ ನೀಶಮ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್