ವಾಟ್ಸಾಪ್‌ ನಲ್ಲಿರುವ “ಟೆರರ್‌’ ಗ್ರೂಪ್‌ ಸದಸ್ಯರಿಗಾಗಿ ಎನ್‌ಎಐ ಶೋಧ


Team Udayavani, Oct 12, 2020, 7:15 AM IST

ವಾಟ್ಸಾಪ್‌ ನಲ್ಲಿರುವ “ಟೆರರ್‌’ ಗ್ರೂಪ್‌ ಸದಸ್ಯರಿಗಾಗಿ ಎನ್‌ಎಐ ಶೋಧ

ಬೆಂಗಳೂರು: ಐಸಿಸ್‌ ನಂಟು ಹೊಂದಿದ್ದ ಆರೋಪದಲ್ಲಿ ಮೂರು ದಿನಗಳ ಹಿಂದೆ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದ ಎನ್‌ಎಐ ಅಧಿಕಾರಿಗಳು ಬೆಂಗಳೂರು ಮತ್ತು ತಮಿಳುನಾಡಿನಲ್ಲಿರುವ ವಾಟ್ಸಾಪ್‌ ಗ್ರೂಪ್‌ಗ್ಳ ಇನ್ನಷ್ಟು ಸದಸ್ಯರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯ ಡಾ| ಅಬ್ದುರ್‌ ರೆಹಮಾನ್‌ ಅಲಿಯಾಸ್‌ ಡಾ| ಬ್ರೇವ್‌ ಹೇಳಿಕೆ ಆಧರಸಿ ಅ. 8ರಂದು ಫ್ರೆಜರ್‌ ಟೌನ್‌ನ ಇರ್ಫಾನ್‌ ನಾಸೀರ್‌ ಮತ್ತು ತಮಿಳುನಾಡು ರಾಮನಾಥಪುರದ ಅಹ್ಮದ್‌ ಅಬ್ದುಲ್‌ ಖಾದರ್‌ ಅವರನ್ನು ಬಂಧಿಸಲಾಗಿತ್ತು. ಅವರ ವಿಚಾರಣೆ ಸಂದರ್ಭದಲ್ಲಿ ಕೆಲವು ಸ್ಫೋಟಕ ಮಾಹಿತಿ ಸಿಕ್ಕಿದ್ದು, ಅವರ ” ಸರ್ಕಲ್‌’ ಹೆಸರಿನ ವಾಟ್ಸಾಪ್‌ ಗ್ರೂಪ್‌ನಲ್ಲಿದ್ದ ಇನ್ನಷ್ಟು ಮಂದಿಯ ಹೆಸರನ್ನು ಅಧಿಕಾರಿಗಳು ಪಟ್ಟಿ ಮಾಡಿದ್ದಾರೆ.

ಈ ಮಾಹಿತಿ ಪ್ರಕಾರ ಬೆಂಗಳೂರು ಮತ್ತು ತಮಿಳುನಾಡಿನಲ್ಲಿ 7ಕ್ಕೂ ಅಧಿಕ ಶಂಕಿತರು ಅಡಗಿಕೊಂಡಿದ್ದಾರೆ. ಇರ್ಫಾನ್‌ ಮತ್ತು ಖಾದರ್‌ ಬಂಧನವಾಗುತ್ತಿದ್ದಂತೆ ಅವರು ತಲೆಮರೆಸಿಕೊಂಡಿದ್ದಾರೆ. ಅವರ ಹೆಸರು ಮತ್ತು ವಿಳಾಸವನ್ನು ಪತ್ತೆ ಹಚ್ಚಲಾಗಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ :ಫ್ರೆಂಚ್ ಓಪನ್ : 20ನೇ ಗ್ರಾಂಡ್ ಸ್ಲಾಮ್ ಗೆದ್ದ ನಡಾಲ್! ವೃತ್ತಿ ಜೀವನದ 100ನೇ ಗೆಲುವು

ಈ ಇಬ್ಬರು ಶಂಕಿತರು ಬೆಂಗಳೂರು ಮತ್ತು ತಮಿಳುನಾಡಿನ ಸಮುದಾಯದ ಐವರು ಯುವಕರಿಗೆ ಆಮಿಷವೊಡ್ಡಿ 2013-14ರಲ್ಲಿ ಸಿರಿಯಾಕ್ಕೆ ಕಳುಹಿಸಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ವಾಪಸಾಗಿದ್ದಾರೆ. ಈಗ ಮೂವರು ಬೆಂಗಳೂರು ಮತ್ತು ತಮಿಳುನಾಡಿನಲ್ಲಿ ಸ್ಲಿಪರ್‌ ಸೆಲ್‌ಗ‌ಳಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಹುಡುಕಾಟ ನಡೆಯುತ್ತಿದೆ.

ಇನ್ನಷ್ಟು ಮಂದಿ ಸಿರಿಯಾಗೆ
ಇರ್ಫಾನ್‌ ಮತ್ತು ಖಾದರ್‌ ಸಮುದಾಯದ ಇನ್ನಷ್ಟು ಮಂದಿಗೆ ಕೆಲ ಆಮಿಷವೊಡ್ಡಿ ಮತ್ತು ಧರ್ಮ ಬೋಧನೆ ಹೆಸರಿನಲ್ಲಿ ಕೇರಳ ಮೂಲಕವೇ ಸಿರಿಯಾಗೆ ಕಳುಹಿಸಲು ಸಿದ್ಧತೆ ನಡೆಸಿದ್ದರು. ಆದರೆ, ದೇಶದಲ್ಲಿ ಲಾಕ್‌ಡೌನ್‌ ಜಾರಿಯಾದ್ದರಿಂದ ವಿಮಾನಗಳ ಹಾರಾಟ ಸ್ಥಗಿತಗೊಂಡಿತ್ತು. ಹೀಗಾಗಿ ಈ ಯೋಜನೆಯನ್ನು ಮುಂದೂಡಲಾಗಿತ್ತು. ಇತ್ತೀಚೆಗೆ ಈ ಕಾರ್ಯ ಮತ್ತೆ ಚುರುಕುಗೊಂಡಿದೆ. ಆದರೆ, ಈ ಇಬ್ಬರ ಸಂಪರ್ಕದಲ್ಲಿದ್ದವರ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಡಾ| ಬ್ರೇವ್‌ ಮತ್ತೆ ವಶಕ್ಕೆ
ಡಾ| ಅಬ್ದರ್‌ ರೆಹಮಾನ್‌ ಅಲಿಯಾಸ್‌ ಡಾ| ಬ್ರೇವ್‌ನನ್ನು ಮತ್ತೂಮ್ಮೆ ವಶಕ್ಕೆ ಪಡೆಯಲಾಗುವುದು ಎಂದು ಎನ್‌ಐಎ ಮೂಲಗಳು ತಿಳಿಸಿವೆ. ಡಾ| ಬ್ರೇವ್‌ಗೆ ವಾಟ್ಸಾಪ್‌ ಗ್ರೂಪ್‌ ಬಗ್ಗೆ ಸಾಕಷ್ಟು ಮಾಹಿತಿ ಇದೆ. ಅಲ್ಲದೆ, ಸಿರಿಯಾದಿಂದ ವಾಪಸಾಗಿರುವ ಮೂವರ ಬಗ್ಗೆಯೂ ಮಾಹಿತಿ ಇದೆ. ಹೀಗಾಗಿ ಆತನನ್ನು ಹೆಚ್ಚಿನ ವಿಚಾರಣೆಗೆ ಐದು ದಿನಗಳ ಕಾಲ ವಶಕ್ಕೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.