24 ತಾಸುಗಳಲ್ಲಿ ಒಂಬತ್ತು ಖಾತೆ ಅದಲು ಬದಲು


Team Udayavani, Feb 12, 2020, 6:45 AM IST

kemmu-37

ಕೃಷಿ ಪಡೆದ ಬಿ.ಸಿ. ಪಾಟೀಲ್‌, ಗೋಪಾಲಯ್ಯಗೆ ಆಹಾರ
ಆನಂದ್‌ ಸಿಂಗ್‌ ಅವರಿಗೆ ಅರಣ್ಯ, ಜೀವಿಶಾಸ್ತ್ರ -ಪರಿಸರ ಖಾತೆ

ಬೆಂಗಳೂರು: ಖಾತೆ ಹಂಚಿಕೆಯಾದ 24 ತಾಸುಗಳಲ್ಲೇ ಒಂಬತ್ತು ಸಚಿವರ ಖಾತೆಗಳು ಅದಲು
ಬದಲಾಗಿವೆ! ಖಾತೆ ಹಂಚಿಕೆಯ ಅನಂತರ ಬಹಿರಂಗವಾಗಿ ಬೇಸರ ವ್ಯಕ್ತಪಡಿಸದ ಸಚಿವರು ರಾತೋ ರಾತ್ರಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪ್ರಭಾವಿ ಖಾತೆಗಳಿಗೆ ಪಟ್ಟುಹಿಡಿದುದೇ ದಿಢೀರ್‌ ಬದಲಾವಣೆಗೆ ಕಾರಣ.

ಕೃಷಿ ಖಾತೆ ಪಡೆಯುವಲ್ಲಿ ಬಿ.ಸಿ. ಪಾಟೀಲ್‌ ಯಶಸ್ವಿಯಾಗಿದ್ದರೆ, ಕೆ. ಗೋಪಾಲಯ್ಯ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆನಂದ್‌ ಸಿಂಗ್‌ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಖಾತೆ ಪಡೆದಿದ್ದಾರೆ.

ಕೆಲವು ಸಚಿವರಿಗೆ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಬೈರತಿ ಬಸವರಾಜು ಅವರಿಗೆ ನಗರಾಭಿವೃದ್ಧಿ ಖಾತೆ ಜತೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಮೂಲ ಸೌಕರ್ಯ ಅಭಿವೃದ್ಧಿ ಹಣಕಾಸು ನಿಗಮದ ಹೊಣೆಗಾರಿಕೆ ನೀಡಲಾಗಿದೆ. ಶಿವರಾಮ ಹೆಬ್ಟಾರ್‌ ಅವರಿಗೆ ಕಾರ್ಮಿಕ ಖಾತೆ ಜತೆಗೆ ಸಕ್ಕರೆ ಖಾತೆ ವಹಿಸಲಾಗಿದೆ. ಶ್ರೀಮಂತ ಪಾಟೀಲ್‌ ಅವರಿಗೆ ಜವುಳಿ ಖಾತೆ ಸೇರಿದಂತೆ ಕೈಮಗ್ಗ, ಅಲ್ಪಸಂಖ್ಯಾಕರ ಕಲ್ಯಾಣ ಖಾತೆ ವಹಿಸಲಾಗಿದೆ. ನೂತನ ಸಚಿವ ಎಸ್‌.ಟಿ. ಸೋಮಶೇಖರ್‌ ಸಹಕಾರ ಖಾತೆ ಜತೆಗೆ ಎಪಿಎಂಸಿ ಖಾತೆಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ರಾತೋರಾತ್ರಿ ಒತ್ತಡ- ಬದಲಾವಣೆ
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಖಾತೆ ಹಂಚಿಕೆ ಮಾಡಿದ ಬಗ್ಗೆ ಡಾ| ಕೆ. ಸುಧಾಕರ್‌ ಮಾತ್ರ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಉಳಿದಂತೆ ಯಾರೂ ಬೇಸರವನ್ನು ಬಹಿರಂಗವಾಗಿ ತೋರ್ಪಡಿಸಿರಲಿಲ್ಲ. ಆದರೆ ಸೋಮವಾರ ರಾತ್ರಿ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಪ್ರಭಾವಿ ಖಾತೆಗೆ ಒತ್ತಡ ಹೇರಿದ್ದಾರೆ.

ಬಿ.ಸಿ. ಪಾಟೀಲ್‌, ಆನಂದ್‌ ಸಿಂಗ್‌ ಮತ್ತು ಕೆ. ಗೋಪಾಲಯ್ಯ ಸೋಮವಾರ ರಾತ್ರಿ ಯಡಿಯೂರಪ್ಪ ಅವರ ಡಾಲರ್ ಕಾಲನಿ ನಿವಾಸಕ್ಕೆ ದೌಡಾಯಿಸಿ ಈಗಿರುವ ಖಾತೆಗಿಂತ ಉತ್ತಮ ಖಾತೆ ನೀಡಬೇಕು ಎಂದು ಪಟ್ಟುಹಿಡಿದರು. ಹೀಗಾಗಿ ಯಡಿಯೂರಪ್ಪ ಸಚಿವರ ಮನವಿಗೆ ಮಣಿಯಬೇಕಾಯಿತು. ಸಚಿವ ಶಿವರಾಮ ಹೆಬ್ಟಾರ್‌ ಮಂಗಳವಾರ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚುವರಿ ಜವಾಬ್ದಾರಿಗೆ ಮನವಿ ಮಾಡಿದ್ದರು ಎನ್ನಲಾಗಿದೆ.

ಪ್ರಥಮ ದರ್ಜೆ ಸಚಿವ
ತಮಗೆ ವಹಿಸಿರುವ ಖಾತೆ ಬಗ್ಗೆ ಬಿ.ಸಿ. ಪಾಟೀಲ್‌ ಟ್ವಿಟರ್‌ನಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸಮರ್ಪಣ ದಿನ ಫೆ. 11, ಅಪ್ರತಿಮ ದೇಶಭಕ್ತ, ವಿದ್ವಾಂಸ, ಸಂಘಟನ ಕಾರ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಪುಣ್ಯತಿಥಿಯಂದು, ನನ್ನ ಗೌರವ ನಮನಗಳು ಎಂದು ಸಚಿವ ಬಿ.ಸಿ. ಪಾಟೀಲ್‌ ಮಂಗಳವಾರ ಬೆಳಗ್ಗೆ 10.45ಕ್ಕೆ ಟ್ವೀಟ್‌ ಮಾಡಿದ್ದರು.

ಈ ಸಂಬಂಧ ಪೋಸ್ಟ್‌ ಹಾಕಿರುವ ಬಿ.ಸಿ.ಪಾಟೀಲ್‌, ತಮ್ಮ ಹೆಸರಿನ ಕೆಳಗೆ ಪ್ರಥಮ ದರ್ಜೆ ಸಚಿವರು ಎಂಬುದಾಗಿ ನಮೂದಿಸಿದ್ದರು. ತಮಗೆ ಹಂಚಿಕೆಯಾಗಿದ್ದ ಅರಣ್ಯ ಖಾತೆ ಹೆಸರು ಉಲ್ಲೇಖೀಸದೆ ಪ್ರಥಮ ದರ್ಜೆ ಸಚಿವ ಎಂಬುದಾಗಿ ಪೋಸ್ಟ್‌ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಖಾತೆ ಪುನರ್‌ ಹಂಚಿಕೆ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ್‌, ಕೃಷಿ ಖಾತೆ ಸಿಕ್ಕಿದ್ದರಿಂದ ರೈತರ ಜತೆಗೆ ಇರುತ್ತೇನೆ. ಈ ಖಾತೆ ಸಿಗದೆ ಇರುತ್ತಿದ್ದರೆ ಪ್ರಾಣಿಗಳ ಜತೆ ಇರುತ್ತಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಯಡಿಯೂರಪ್ಪ ಕೆಲವು ಸಚಿವರ ಖಾತೆ ಬದಲಾವಣೆ ಮಾಡಿದ್ದರೆ ಇನ್ನು ಕೆಲವು ಸಚಿವರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ್ದಾರೆ. ಆ ಮೂಲಕ ಖಾತೆ ಹಂಚಿಕೆ ಬಗ್ಗೆ ಅಪಸ್ವರ ಮುಂದುವರಿಯದಂತೆ ತಡೆಯುವ ನಿಟ್ಟಿನಲ್ಲಿ ಆರಂಭದಲ್ಲೇ ಕ್ರಮ ಕೈಗೊಂಡಿದ್ದಾರೆ. ಯಡಿಯೂರಪ್ಪ ಅವರ ಶಿಫಾರಸಿನಂತೆ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ.

ಬೇಸರ ವ್ಯಕ್ತಪಡಿಸಿದ್ದವರು ಮೌನ
ಸಚಿವ ಡಾ| ಕೆ. ಸುಧಾಕರ್‌ ಸೋಮವಾರ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು. ಅನಂತರ ಅವರು ಅಪಸ್ವರ ತೆಗೆದಂತಿಲ್ಲ. ಆದರೆ ಖಾತೆ ಹಂಚಿಕೆ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸದವರೇ ರಾತೋರಾತ್ರಿ ಸಿಎಂ ಮೇಲೆ ಒತ್ತಡ ಹೇರಿ ಪ್ರಭಾವಿ ಖಾತೆ ಪಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಮೂಲ ಬಿಜೆಪಿಗರಲ್ಲಿ ಬೇಸರ
ಮುಖ್ಯಮಂತ್ರಿಗಳು ತಮ್ಮ ಪರಮಾಧಿಕಾರ ಬಳಸಿ ಮಾಡಿರುವ ಖಾತೆ ಹಂಚಿಕೆ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿರುವುದು ಮೂಲ ಬಿಜೆಪಿಗರಲ್ಲಿ ಬೇಸರಕ್ಕೆ ಕಾರಣವಾಗಿದೆ. ಸಚಿವ ಸ್ಥಾನಕ್ಕೆ ಒತ್ತಡ ಹೇರಿ ಬಳಿಕ ಖಾತೆ ಹಂಚಿಕೆಯಾದ 24 ತಾಸುಗಳೊಳಗೆ ಬದಲಾವಣೆ ಮಾಡಿಸಿಕೊಳ್ಳುವುದು ಉತ್ತಮ ಸಂಪ್ರದಾಯವಲ್ಲ. ಇದರಿಂದ ಒತ್ತಡ ತಂತ್ರಗಳಿಗೆ ಮಣೆ ಹಾಕಿದಂತಾಗಲಿದ್ದು, ಆಡಳಿತದ ಮೇಲೆ ಪರಿಣಾಮ ಬೀರುವ ಅಪಾಯವಿದೆ ಎಂಬ ಆತಂಕ ಪಕ್ಷದ ವಲಯದಿಂದ ಕೇಳಿಬಂದಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.