ನಿರ್ಮಲಾರತ್ತ ಮಧ್ಯಮ ವರ್ಗದ ನಿರೀಕ್ಷೆಯ ನೋಟ


Team Udayavani, Feb 1, 2023, 6:00 AM IST

ನಿರ್ಮಲಾರತ್ತ ಮಧ್ಯಮ ವರ್ಗದ ನಿರೀಕ್ಷೆಯ ನೋಟ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2023-24ನೇ ಸಾಲಿನ ಕೇಂದ್ರ ಮುಂಗಡಪತ್ರವನ್ನು ಇಂದು (ಬುಧವಾರ) ಮಂಡಿಸಲಿದ್ದಾರೆ. ಈ ಬಜೆಟ್‌ನ ಬಗೆಗೆ ದೇಶದ ಜನತೆ ಅದರಲ್ಲೂ ಮಧ್ಯಮ ವರ್ಗದ ಜನರು ಭಾರೀ ನಿರೀಕ್ಷೆಯನ್ನಿರಿಸಿಕೊಂಡಿದ್ದಾರೆ. ಈ ಬಾರಿಯ ಆಯವ್ಯಯ ಸಚಿವರ ಪಾಲಿಗೆ ಒಂದರ್ಥದಲ್ಲಿ ಹಗ್ಗದ ಮೇಲಣ ನಡಿಗೆಯೇ ಸರಿ. ಜಾಗತಿಕ ಆರ್ಥಿಕ ಪರಿಸ್ಥಿತಿ ಯನ್ನು ಅವಲೋಕಿಸಿದಾಗ ದೇಶದ ಆರ್ಥಿಕತೆ ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ ಯಷ್ಟೇ ಅಲ್ಲದೆ ಮುಂಚೂಣಿಯಲ್ಲಿದೆ. ಆದರೆ ಜಾಗತಿಕ ಮಟ್ಟದಲ್ಲಿ ನಡೆಯುತ್ತಿ ರುವ ಕ್ಷಿಪ್ರ ಬೆಳವಣಿಗೆಗಳ ಪರೋಕ್ಷ ಪರಿಣಾಮ ಭಾರತದ ಮೇಲೆ ಬೀಳುತ್ತಿರುವು ದರಿಂದಾಗಿ ಎಚ್ಚರಿಕೆಯ ಹೆಜ್ಜೆಯನ್ನಿಡುವುದು ಅನಿವಾರ್ಯವಾಗಿದೆ. ಈ ನಡುವೆ ಪ್ರಸಕ್ತ ವರ್ಷ ದೇಶದ 9 ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದ್ದರೆ ಮುಂದಿನ ವರ್ಷ ಲೋಕಸಭೆ ಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನಪ್ರಿಯತೆಯಿಂದ ದೂರಸರಿಯದೆ ಸಮತೋಲನದ ಬಜೆಟ್‌ ಮಂಡನೆಯ ಗುರುತರ ಸವಾಲು ಸಚಿವೆ ನಿರ್ಮಲಾರ ಹೆಗಲ ಮೇಲೇರಿದೆ.

ಕೊರೊನಾ ಬಳಿಕ ದೇಶದ ಮಧ್ಯಮ ವರ್ಗದ ಜನರ ಮೇಲೆ ಭಾರೀ ಹೊರೆ ಬಿದ್ದಿದೆ. ಆರೋಗ್ಯ ಸಮಸ್ಯೆ, ಆದಾಯ ಕೊರತೆ, ಉದ್ಯೋಗ ನಷ್ಟ, ಬೆಲೆ ಏರಿಕೆ ಇವೆಲ್ಲದರ ನೇರ ಪರಿಣಾಮ ಮಧ್ಯಮ ವರ್ಗದವರ ಮೇಲೆ ಬಿದ್ದಿದೆ. ಇನ್ನು ಭಾರ ತೀಯ ರಿಸರ್ವ್‌ ಬ್ಯಾಂಕ್‌ ಆರ್ಥಿಕ ಸಂಕಷ್ಟದಿಂದ ಪಾರಾಗಲು ಅನುಸರಿಸಿದ ಕಟ್ಟುನಿಟ್ಟಿನ ಕ್ರಮಗಳ ಪರೋಕ್ಷ ಪರಿಣಾಮವನ್ನೂ ಮಧ್ಯಮ ವರ್ಗದ ಜನರು ಎದುರಿಸುವಂತಾಗಿದೆ. ಜಾಗತಿಕ ಮಟ್ಟದಲ್ಲಿನ ಆರ್ಥಿಕ ಸ್ಥಿತಿಗತಿಗೆ ಹೋಲಿಸಿದರೆ ದೇಶದ ಆರ್ಥಿಕ ಬೆಳವಣಿಗೆ ಸಕಾರಾತ್ಮಕವಾಗಿರುವುದು, ದೇಶ ಪ್ರತಿಯೊಂದೂ ಕ್ಷೇತ್ರದಲ್ಲಿಯೂ ಸ್ವಾವಲಂಬನೆಯ ಹಾದಿ ಹಿಡಿದಿರುವುದು, ಮೂಲ ಸೌಕರ್ಯ ಗಳ ಅಭಿವೃದ್ಧಿ, ತೆರಿಗೆ ಸಂಗ್ರಹ… ಹೀಗೆ ಪ್ರತೀಯೊಂದರಲ್ಲೂ ಆಶಾದಾಯಕ ಬೆಳ ವಣಿಗೆಯನ್ನು ಕಂಡಿರುವ ಹೊರತಾಗಿಯೂ ಬಡ-ಮಧ್ಯಮ ವರ್ಗದ ಜನತೆಯ ಪರಿಸ್ಥಿತಿ ಮಾತ್ರ ನಾಲಗೆಯ ಮೇಲಿನ ಬಿಸಿತುಪ್ಪದಂತಾಗಿರುವುದು ಸುಳ್ಳಲ್ಲ.

ಮೂಲಸೌಕರ್ಯಗಳ ವೃದ್ಧಿಯಲ್ಲಿ ನಿರಂತರತೆ ಕಾಯ್ದುಕೊಳ್ಳುವ ಜತೆಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿ, ಆಹಾರ ಕ್ಷೇತ್ರದಲ್ಲಿ ಸ್ವಾವಲಂಬನೆ, ಸಮಾಜದ ಪ್ರತೀಯೊಂದೂ ವರ್ಗದ ಆದಾಯ ಹೆಚ್ಚಳ, ಹಣದುಬ್ಬರ ನಿಯಂತ್ರಣ, ವಿತ್ತೀಯ ಕೊರತೆಯ ನಿಯಂತ್ರಣ, ನರೇಗಾದ ಕಾರ್ಯವ್ಯಾಪ್ತಿ ಹೆಚ್ಚಳ, ಕೈಗಾರಿಕೆಗಳು ಮತ್ತು ಕೃಷಿ ರಂಗಕ್ಕೆ ಮತ್ತಷ್ಟು ಉತ್ತೇಜನ ಇವೇ ಮೊದಲಾದ ಪ್ರೋತ್ಸಾಹಕ ಕ್ರಮಗಳು ಬಜೆಟ್‌ನಲ್ಲಿ ಘೋಷಣೆಯಾಗಲಿವೆ ಎಂಬ ವಿಶ್ವಾಸ ಈ ಕ್ಷೇತ್ರಗಳದ್ದಾಗಿದೆ.

ಇನ್ನು ಮಧ್ಯಮ ವರ್ಗದ ಜನರು ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, ವಿವಿಧ ಖರ್ಚು ಮತ್ತು ಹೂಡಿಕೆಗಳ ಮೇಲೆ ಆದಾಯ ತೆರಿಗೆಯ 80 ಸಿ ಅಡಿಯಲ್ಲಿರುವ ವಿನಾಯಿತಿ ಮೊತ್ತದ ಏರಿಕೆ, 80 ಡಿಡಿ ಸೆಕ್ಷನ್‌ನಡಿಯಲ್ಲಿ ನೀಡಲಾಗುವ ವಿನಾಯಿತಿಗೆ ವೈದ್ಯರ ಭೇಟಿ ಮತ್ತು ಪ್ರಯೋಗ ಪರೀಕ್ಷೆ ಶುಲ್ಕಗಳ ಸೇರ್ಪಡೆ, ಗೃಹ ಸಾಲದ ಬಡ್ಡಿ ವಿನಾಯಿತಿ ಮೊತ್ತದಲ್ಲಿ ಏರಿಕೆ ಮತ್ತು ಸ್ಟಾಂಡರ್ಡ್‌ ಡಿಡಕ್ಷನ್‌ ಮಿತಿಯಲ್ಲಿ ಹೆಚ್ಚಳವಾದೀತು ಎಂಬ ನಿರೀಕ್ಷೆಯಲ್ಲಿದ್ದಾರೆ.

ಆಂತರಿಕ ಮತ್ತು ಜಾಗತಿಕ ಸವಾಲುಗಳ ನಡುವೆ ಜನಪ್ರಿಯತೆಗೂ ಮಣೆ ಹಾಕುವುದರ ಜತೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಮಧ್ಯಮ ವರ್ಗದ ರಕ್ಷಣೆಗೆ ಸರಕಾರ ಮುಂದಾಗಲೇಬೇಕು. ಈ ಅಗ್ನಿ ಪರೀಕ್ಷೆಯನ್ನು ಕೇಂದ್ರ ಸರಕಾರ ಎಷ್ಟು ಸಮರ್ಥವಾಗಿ ಎದುರಿಸಲಿದೆ ಎಂಬುದೇ ಸದ್ಯದ ಕುತೂಹಲ.

ಟಾಪ್ ನ್ಯೂಸ್

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

ಪ್ರಧಾನಿ ಮೋದಿ ಮತ್ತು ಬಿಜೆಪಿಯ ನಿರಂಕುಶಾಧಿಪತ್ಯ ಸಾಬೀತು: ಬಿ.ಕೆ. ಹರಿಪ್ರಸಾದ್

pentagon movie trailer

ಐದು ಕಥೆಗಳ ಸುತ್ತ ಪೆಂಟಗನ್; ಭರವಸೆ ಮೂಡಿಸಿದ ಟ್ರೇಲರ್

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?

ಸನಾತನ ಸಂಸ್ಥೆ ನಿಷೇಧಿತ …ಸಂಘಟನೆ ಅಲ್ಲ: ಬಾಂಬೆ ಹೈಕೋರ್ಟ್, ಏನಿದು ಪ್ರಕರಣ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp cong

ಸಂಪಾದಕೀಯ : ರಾಜಕೀಯ ಪಕ್ಷಗಳ ಇಬ್ಬಂದಿತನ – ಪ್ರಬುದ್ಧತೆ ಅಲ್ಲ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಮಕ್ಕಳ ಪರೀಕ್ಷೆ ಜತೆಗೆ ಆಟವಾಡುವುದು ಬೇಡ

ಖಲಿಸ್ಥಾನಿಯರ ದಾಂಧಲೆ ಕಠಿನ ಕ್ರಮ ತೆಗೆದುಕೊಳ್ಳಿ

ಖಲಿಸ್ಥಾನಿಯರ ದಾಂಧಲೆ ಕಠಿನ ಕ್ರಮ ತೆಗೆದುಕೊಳ್ಳಿ

ಕಲಾಪ ಸುಗಮವಾಗಿ ನಡೆಯುವಂತಾಗಲಿ

ಕಲಾಪ ಸುಗಮವಾಗಿ ನಡೆಯುವಂತಾಗಲಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

tdy-8

ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ

Aram arvind swamy first look released

‘ಆರಾಮ್‌ ಅರವಿಂದ್‌ ಸ್ವಾಮಿ‘ ಫ‌ಸ್ಟ್‌ ಲುಕ್‌ ರಿಲೀಸ್‌

protest by State Farmers Union at Mangaluru

ಬೆಳೆ ಪರಿಹಾರ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ರಾಜ್ಯ ರೈತ ಸಂಘದಿಂದ ಧರಣಿ

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

Health Article: ಒಂದು ಬಾಟಲ್ ಬಿಯರ್ ಕುಡಿದ್ರೆ ಆರೋಗ್ಯಕ್ಕೆ ಹಾನಿಯಾಗುವುದಿಲ್ಲವೇ?

Health: ಒಂದು ಬಾಟಲ್ ಬಿಯರ್/ 1 ಪೆಗ್ ಕುಡಿಯೋದರಿಂದ ಆರೋಗ್ಯದ ಮೇಲೆ ಬೀರುವ ಪರಿಣಾಮ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.