ವಿಶ್ವ ಮಟ್ಟದಲ್ಲಿ ನ.1 ಸ್ಥಾನ ಕರ್ನಾಟಕದ ಗುರಿ: ಸಚಿವ ಅಶ್ವತ್ಥನಾರಾಯಣ
Team Udayavani, Nov 25, 2022, 1:30 PM IST
ಬೆಂಗಳೂರು: ಕರ್ನಾಟಕವು ಸದ್ಯಕ್ಕೆ ಐಟಿ, ಬಿಟಿ, ಸೆಮಿ ಕಂಡಕ್ಟರ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ನಂ.1 ಸ್ಥಾನವನ್ನು ಅಲಂಕರಿಸುವುದು ನಮ್ಮ ಗುರಿಯಾಗಿದ್ದು, ಕೋವಿಡ್ ನಂತರದ ಕಾಲಘಟ್ಟವು ಇದಕ್ಕೆ ಸೂಕ್ತ ವಾತಾವರಣವನ್ನು ಸೃಷ್ಟಿಸಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ದಕ್ಷಿಣ ಕೊರಿಯಾದ ಏಷ್ಯನ್ ಸೊಸೈಟಿ ಫಾರ್ ಇನ್ನೋವೇಶನ್ ಅಂಡ್ ಪಾಲಿಸಿ (ಎಎಸ್ಎಪಿ) ಮತ್ತು ಎಂ ಎಸ್ ರಾಮಯ್ಯ ಯೂನಿವರ್ಸಿಟಿ ಫಾರ್ ಅಡ್ವಾನ್ಸ್ಡ್ ಸ್ಟಡೀಸ್ ಜೊತೆಗೂಡಿ ಭಾರತೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ 12ನೇ ವರ್ಷದ ಸಮಾವೇಶವನ್ನು ಉದ್ಘಾಟಿಸಿ ಅವರು ಶುಕ್ರವಾರ ಮಾತನಾಡಿದರು.
ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಕಲಿಕೆ ಮತ್ತು ಉದ್ಯಮಗಳಿಗೆ ಬೇಕಾದ ಆಧುನಿಕ ಕೌಶಲಗಳನ್ನು ನಮ್ಮ ಯುವಜನರಿಗೆ ಕಲಿಸಬೇಕು ಎಂಬ ಮಹತ್ವಾಕಾಂಕ್ಷೆಯಿಂದ ಕಳೆದ ಮೂರು ವರ್ಷಗಳಲ್ಲಿ 15 ಸಾರ್ವಜನಿಕ ವಿ.ವಿ.ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಎನ್ಇಪಿ ಜಾರಿಯಲ್ಲಿ ರಾಜ್ಯವು ಮುಂಚೂಣಿಯಲ್ಲಿ ಇದ್ದು, ಇದರಲ್ಲಿ ವೈಜ್ಞಾನಿಕ ವಿಧಾನವನ್ನು ಅಳವಡಿಸಿ ಕೊಳ್ಳಲಾಗಿದೆ. ಉನ್ನತ ಶಿಕ್ಷಣ ವಲಯದಲ್ಲಿ ಸಂಪೂರ್ಣ ಡಿಜಿಟಲೀಕರಣ ಮತ್ತು ಆಧುನಿಕ ತಂತ್ರಾಂಶಗಳ ಅಳವಡಿಕೆಯ ವ್ಯವಸ್ಥೆ ಜಾರಿಗೆ ಬಂದಿದೆ ಎಂದು ಅವರು ನುಡಿದರು.
ಇದನ್ನೂ ಓದಿ:ವರ್ಷಪೂರ್ತಿ ‘ಅದಿತಿ’ ಮಿಂಚು: ಅರ್ಧ ಡಜನ್ಗೂ ಹೆಚ್ಚು ಸಿನಿಮಾಗಳಲ್ಲಿ ಮದುಮಗಳು
ಉದ್ಯಮಗಳ ಬೆಳವಣಿಗೆಗೆ ಸಹಭಾಗಿತ್ವ ಮತ್ತು ಪಾಲುದಾರಿಕೆ ಅತ್ಯಗತ್ಯವಾಗಿವೆ. ಇದಕ್ಕಾಗಿ ಸರಕಾರವು ಹಲವು ನೀತಿಗಳನ್ನು ಜಾರಿಗೆ ತಂದಿದೆ ಎಂದು ಅವರು ಪ್ರತಿಪಾದಿಸಿದರು.
ಕರ್ನಾಟಕವು ಇಡುತ್ತಿರುವ ಹೆಜ್ಜೆಗಳು ಇಂದು ರಾಷ್ಟ್ರೀಯ ಮಾದರಿಗಳಾಗುತ್ತಿವೆ. ಹಲವು ರಾಜ್ಯಗಳು ಇನ್ನೂ ಚಿಂತನೆಯನ್ನು ಮಾಡದೆ ಇರುವಾಗ ನಾವು ಸ್ಪಷ್ಟ ನೀತಿಗಳೊಂದಿಗೆ ಹೊರಬರುತ್ತಿದ್ದೇವೆ. ಇದರಿಂದ ರಾಜ್ಯವು ನಾವೀನ್ಯತೆ ಮತ್ತು ಸಮರ್ಥ ನೀತಿಗಳ ತೊಟ್ಟಿಲಾಗಿದೆ ಎಂದು ಸಚಿವರು ವಿವರಿಸಿದರು.
ಕಾರ್ಯಕ್ರಮದಲ್ಲಿ ಕೊರಿಯಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಅಧ್ಯಕ್ಷ ಡಾ.ಜೇಸೂ ಕಿಮ್, ಭಾರತೀಯ ವಿಜ್ಞಾನ ಸಂಸ್ಥೆಯ ಡಾ.ಪ್ರಹ್ಲಾದ್ ರಾಮರಾವ್, ಡಾ.ಬಾಲಸುಬ್ರಹ್ಮಣ್ಯಂ, ಎಎಸ್ಐಪಿ ಅಧ್ಯಕ್ಷ ಯಂಗ್ ಜೂ ಕೂ, ಅತುಲ್ ಬಾತ್ರಾ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ