ರಾಜ್ಯದಲ್ಲಿ ಕೋವಿಡ್ ಮುಕ್ತ ಏಕೈಕ ಜಿಲ್ಲೆ ಚಾಮರಾಜನಗರ!ಇನ್ನೆಷ್ಟು ದಿನ ಇರಲಿದೆ ಈ ಪಟ್ಟ?

ಭೌತಿಕ ಅಂತರ ಶೂನ್ಯ

Team Udayavani, May 25, 2020, 7:00 PM IST

ರಾಜ್ಯದಲ್ಲಿ ಕೋವಿಡ್ ಮುಕ್ತ ಏಕೈಕ ಜಿಲ್ಲೆ ಚಾಮರಾಜನಗರ!ಇನ್ನೆಷ್ಟು ದಿನ ಇರಲಿದೆ ಈ ಪಟ್ಟ?

ಚಾಮರಾಜನಗರ: ಇಡೀ ರಾಜ್ಯದಲ್ಲಿ ಇದುವರೆಗೆ ಒಂದು ಕೋವಿಡ್ ಪಾಸಿಟಿವ್ ಪ್ರಕರಣವಿಲ್ಲದ ಏಕೈಕ ಜಿಲ್ಲೆಯಾಗಿ ಚಾಮರಾಜನಗರ ಉಳಿದುಕೊಂಡಿದೆ. ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ದಾಖಲಾದ ಕಾರಣ, ಚಾಮರಾಜನಗರವೊಂದೇ ಕರ್ನಾಟಕದಲ್ಲಿ ಕೋವಿಡ್ ಮುಕ್ತ ಜಿಲ್ಲೆಯಾಗಿದೆ. ಆದರೆ ಈ ಪಟ್ಟ ಇನ್ನೆಷ್ಟು ದಿನ ಎಂಬ ಆತಂಕವೂ ಎದುರಾಗಿದೆ.

ರಾಜ್ಯದಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡ ಇಷ್ಟು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದಿಲ್ಲ. ದೇಶದ ಮೊದಲ ಕೋವಿಡ್ ಪ್ರಕರಣ ಕಂಡುಬಂದದ್ದು ಜಿಲ್ಲೆಯ ಗಡಿಯಲ್ಲಿರುವ ಕೇರಳದಲ್ಲಿ. ಜುಬಿಲಿಯಂಟ್ ಕಾರ್ಖಾನೆಯ ನೌಕರರಲ್ಲಿ ಸಾಮೂಹಿಕವಾಗಿ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಜಿಲ್ಲೆಗೆ ಹೊಂದಿಕೊಂಡಂತೇ ಇರುವ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ. ಮಹಾರಾಷ್ಟ್ರದಿಂದ ಸೋಂಕಿತರು ಬಂದು ಪ್ರಕರಣ ಹೆಚ್ಚಿರುವ ಮಂಡ್ಯ ಜಿಲ್ಲೆ ಸಹ ಚಾ.ನಗರ ಜಿಲ್ಲೆಗೆ ಹೊಂದಿಕೊಂಡಿದೆ. ಇನ್ನೊಂದೆಡೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆ ನೆರೆಯಲ್ಲಿದೆ!

ಸುತ್ತಮುತ್ತ ಕೋವಿಡ್ ಸೈನ್ಯವೇ ಇದ್ದರೂ, ಚಾಮರಾಜನಗರ ಜಿಲ್ಲೆಯ ಭದ್ರಕೋಟೆಯೊಳಗೆ ಇನ್ನೂ ನುಸುಳಲು ಸಾಧ್ಯವಾಗಿಲ್ಲ. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ ತೆಗೆದುಕೊಂಡ ಕ್ರಮಗಳು, ಜಿಲ್ಲೆಯಲ್ಲಿ ಕಾರ್ಖಾನೆಗಳಿಲ್ಲದಿರುವುದು, ವಲಸಿಗರ ಸಂಖ್ಯೆ ಕಡಿಮೆ ಇರುವುದು, ಇದೆಲ್ಲಕ್ಕಿಂತಲೂ ಅದೃಷ್ಟದ ಬಲ ಇದಕ್ಕೆ ಕಾರಣ ಎನ್ನಬಹುದು.

ಇನ್ನೆಷ್ಟು ದಿನ ಹಸಿರು ವಲಯ?: ಈಗ ಹೊರ ರಾಜ್ಯದ ಹೊರ ಜಿಲ್ಲೆಯ ಜನರು ಜಿಲ್ಲೆಗೆ ಬರುತ್ತಿರುವುದರಿಂದ ಹಸಿರು ವಲಯವಾಗೇ ಉಳಿಯಲು ಇನ್ನೆಷ್ಟು ದಿನ ಸಾಧ್ಯ ಎಂಬ ಪ್ರಶ್ನೆ ಮೂಡಿದೆ. ಲಾಕ್‌ಡೌನ್ ಇತ್ತು, ಹೊರ ಜಿಲ್ಲೆಗಳಿಂದ ಬರುವವರ ಪ್ರವೇಶಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಅಂಥ ಕ್ರಮಗಳಿಲ್ಲ. ಬಸ್‌ಗಳು ಸಂಚರಿಸುತ್ತಿವೆ. ಜನ ಸಂಚಾರವಿದೆ. ಮದುವೆಗಳು ನಡೆಯುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಶೂನ್ಯ ಪಾಸಿಟಿವ್ ಅನ್ನು ಕಾಯ್ದುಕೊಳ್ಳುವುದು ಕಷ್ಟ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.

ಭೌತಿಕ ಅಂತರವಿಲ್ಲ: ಜಿಲ್ಲಾಡಳಿತ ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಭೌತಿಕ ಅಂತರ ಕಾಪಾಡುವುದನ್ನು ಪಾಲಿಸಬೇಕೆಂಬ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ ಎವರ್‌ಗ್ರೀನ್ ಆಗಿ ಉಳಿಯಲು ಸಾಧ್ಯವಾಗುತ್ತದೆ. ಜಿಲ್ಲಾ ಕೇಂದ್ರದ ಅಂಗಡಿ ಮುಂಗಟ್ಟುಗಳಲ್ಲಿ ಜನರು ಭೌತಿಕ ಅಂತರ ಕಾಪಾಡುತ್ತಿಲ್ಲ. ಕೋವಿಡ್ ಇದೆ ಎಂಬುದನ್ನೇ ಮರೆತಂತೆ ಅಂಗಡಿಗಳಲ್ಲಿ ಒತ್ತೊತ್ತಾಗಿ ನಿಂತಿರುತ್ತಾರೆ. ಅಂಗಡಿ ಮಾಲೀಕರು ಸಹ ಬಾಕ್ಸ್ ಗಳನ್ನು ಬರೆದು ಭೌತಿಕ ಅಂತರ ಕಾಪಾಡಲು ಹೇಳುತ್ತಿಲ್ಲ.

ಸಾರ್ವಜನಿಕ ಸ್ಥಳಗಳಲ್ಲಿ ಅನೇಕರು ಮಾಸ್ಕ್ ಧರಿಸುವುದಿಲ್ಲ. ಧರಿಸಿದರೂ ಅದನ್ನು ಬಾಯಿಯಿಂದ ತೆಗೆದು ಕೆಳಗೆ ಬಿಟ್ಟಿರುತ್ತಾರೆ. ಮದುವೆ ಮತ್ತಿತರ ಸಮಾರಂಭಗಳಲ್ಲಿ 50 ಜನರಿರಬೇಕು ಎಂಬ ನಿಯಮ ಕಾಗದಲ್ಲಷ್ಟೇ ಇದೆ. ಅಲ್ಲಿ ಭೌತಿಕ ಅಂತರ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ ಇಲ್ಲವೇ ಇಲ್ಲ.

ಇದೆಲ್ಲಕ್ಕಿಂತ ಮುಖ್ಯವಾಗಿ ಜಿಲ್ಲೆಗೆ ವಿವಿಧ ಇಲಾಖೆಗಳ ಸಚಿವರು ಭೇಟಿ ನೀಡಿದಾಗ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಭೌತಿಕ ಅಂತರ‌ ಕಾಯ್ದುಕೊಳ್ಳುವುದಿಲ್ಲ. ಗುಂಪು ಗುಂಪಾಗಿ ಸೇರುತ್ತಾರೆ. ಸಭೆಗಳಲ್ಲೂ ಪಕ್ಕಪಕ್ಕದಲ್ಲೇ ಕುಳಿತುಕೊಳ್ಳುತ್ತಾರೆ.

ಹೀಗಾಗಿ, ರಾಜ್ಯದ ಏಕೈಕ ಕೊರೊನಾ ಮುಕ್ತ ಜಿಲ್ಲೆ ಎಂಬ ಪಟ್ಟವನ್ನು ಶೀಘ್ರವೇ ಕಳೆದುಕೊಂಡರೂ ಆಶ್ಚರ್ಯವಿಲ್ಲ.

-ಕೆ.ಎಸ್. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.