- Friday 13 Dec 2019
ದಲಿತ ಮುಖ್ಯಮಂತ್ರಿ ವಿಚಾರ ಅಲ್ಲಗಳೆದ ಸಿದ್ದರಾಮಯ್ಯ; ಕುಮಾರಸ್ವಾಮಿಗೆ ತಿರುಗೇಟು
Team Udayavani, Dec 3, 2019, 10:46 AM IST
ಮೈಸೂರು: ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9ರ ನಂತರ ಸಿಹಿ ಹಂಚುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಹ ಯಾವುದೇ ವಿದ್ಯಮಾನ ಇಲ್ಲ ಎಂದಿದ್ದಾರೆ.
ಮೈಸೂರಿನ ಮಂಡಕಳ್ಳಿ ವಿಮಾನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಅಂತ ಅರ್ಥ. ಕುಮಾರಸ್ವಾಮಿ ಏನು ಭಾಷಣ ಮಾಡಿದ್ದಾರೋ ಗೊತ್ತಿಲ್ಲ. ನಿಮಗೆ ಬೇಕಾದಂತೆ ಅರ್ಥ ಮಾಡಿಕೊಳ್ಳಬೇಡಿ ಎಂದು ಕಿಡಿಕಾರಿದರು.
ಮುಂಬೈ ದುಡ್ಡು, ಕಾಂಗ್ರೆಸ್ಗೆ ವೋಟು
ಬಿಜೆಪಿಯವರು ಸಿಕ್ಕಾಪಟ್ಟೆ ದುಡ್ಡು ಕೊಟ್ಟಿದ್ದಾರೆ. ಇವರೆಲ್ಲ ಮತದಾರರಿಗೆ ಬೇಕಾಬಿಟ್ಟಿಯಾಗಿ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಬೇಕಾದಷ್ಟು ಹಣ ಖರ್ಚು ಮಾಡುತ್ತಿದ್ದಾರೆ. ಆದರೆ ಜನ ದುಡ್ಡಿಗೆ ಕರಗುವುದಿಲ್ಲ. ಆದ್ದರಿಂದಲೇ ನಾನು ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ದುಡ್ಡು, ಕಾಂಗ್ರೆಸ್ಗೆ ವೋಟು ಅಂತ ಹೇಳಿದ್ದೇನೆ ಎಂದರು.
ಪ್ರಚಾರದ ಕೊನೆಯ ದಿನಕ್ಕೆ ತಲುಪಿದ್ದೇವೆ. ಎಷ್ಟು ಕ್ಷೇತ್ರ ಗೆಲ್ಲುತ್ತೇವೆ ಎನ್ನುವುದು ಪ್ರಶ್ನೆಯೇ ಅಲ್ಲ. ಎಲ್ಲ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ 104 ಸ್ಥಾನ ಗೆದ್ದರೂ ಸರ್ಕಾರ ರಚಿಸಲಾಗದೆ 14 ತಿಂಗಳು ಪ್ರತಿಪಕ್ಷದಲ್ಲಿದ್ದು, ಬದಲಾದ ರಾಜಕೀಯ ಸನ್ನಿವೇಶದಲ್ಲಿ...
-
ಬೆಂಗಳೂರು: ಕೂಸು ಹುಟ್ಟುವ ಮುನ್ನ ಕುಲಾವಿ ಎಂಬಂತೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರದ ಪತನದ ಕನಸು ಕಂಡಿದ್ದ ಕಾಂಗ್ರೆಸ್ ನಾಯಕರಿಗೆ ಮತದಾರ "ಶಾಕ್' ನೀಡಿದ್ದು,...
-
ಬೆಂಗಳೂರು: ಆಪರೇಷನ್ ಕಮಲ ಕಾರ್ಯಾಚರಣೆಯಡಿ ಮೂರು ಸ್ಥಾನ ಕಳೆದು ಕೊಂಡು ಐದು ಸ್ಥಾನ ಗೆಲ್ಲುತ್ತೇವೆಂದು ಉಪ ಸಮರದ ಅಖಾಡಗಿಳಿದಿದ್ದ ಜೆಡಿಎಸ್ ಶೂನ್ಯ ಸಂಪಾದನೆ...
-
ಹುಬ್ಬಳ್ಳಿ: ಬಿಜೆಪಿಗೆ ಬಲ ನೀಡುವ ತಾಣವೆಂದೇ ಗುರುತಿಸಿಕೊಂಡಿರುವ ಉತ್ತರ ಕರ್ನಾಟಕದಲ್ಲಿ, ಉಪ ಚುನಾವಣೆ ಫಲಿತಾಂಶದಿಂದ ಕಮಲ ಮತ್ತಷ್ಟು ಅರಳಿದೆ. ಪ್ರಸ್ತುತ...
-
ಬರ್ಹಿ/ಬೊಕಾರೋ: ಕರ್ನಾಟಕದ ವಿಧಾನಸಭೆಗೆ 2018ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಜನರ ತೀರ್ಪನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ತಿರುಚಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ...
ಹೊಸ ಸೇರ್ಪಡೆ
-
ವಾಂಕೂವರ್: ವಿದ್ಯುಚ್ಛಕ್ತಿ ಬಳಸಿ ಹಾರಾಟ ನಡೆಸುವ ವಿಶ್ವದ ಮೊದಲ ವಾಣಿಜ್ಯಿಕ ವಿಮಾನದ ಹಾರಾಟ ಯಶಸ್ವಿಯಾಗಿ ನಡೆದಿದೆ. ಕೆನಡಾದ ವಾಂಕೂವರ್ನಲ್ಲಿ ಹದಿನೈದು ನಿಮಿಷಗಳ...
-
ಹೊಸದಿಲ್ಲಿ: ಇಬ್ಬರು ಭಾರತೀಯ ಮಹಿಳೆಯರು ಏಷ್ಯಾದ ಮಾದಕ ಮಹಿಳೆಯರ ಪಟ್ಟಿಯಲ್ಲಿ ಅತ್ಯುನ್ನತ ಸ್ಥಾನ ಸಂಪಾದಿಸಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು...
-
ಲಾಹೋರ್: ಜಮಾತ್ ಉದ್ ದಾವಾ (ಜೆಯುಡಿ) ಉಗ್ರ ಹಫೀಜ್ ಸಯೀದ್ ಮತ್ತು ಇತರರು ತಮ್ಮ ಮೇಲಿರುವ 23 ಎಫ್ಐಆರ್ಗಳನ್ನು ವಜಾ ಮಾಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು...
-
ಹೊಸದಿಲ್ಲಿ: ಅಮೆರಿಕ ಮತ್ತು ಭಾರತದ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವಿನ ಎರಡನೇ ಆವೃತ್ತಿಯ 2+2 ಮಾತುಕತೆ ಡಿ.18ರಂದು ವಾಷಿಂಗ್ಟನ್ನಲ್ಲಿ ನಡೆಯಲಿದೆ. ವಿದೇಶಾಂಗ...
-
ಲಂಡನ್: ಬ್ರಿಟನ್ನ ಚುನಾವಣೆ ನಡುವೆಯೇ ಪ್ರಧಾನಿ ಬೋರಿಸ್ ಜಾನ್ಸನ್ ಫ್ರಿಡ್ಜ್ನಲ್ಲಿ ಅಡಗಿ ಕುಳಿತ ಸುದ್ದಿಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ...