ಪೈಪ್ಲೈನ್ಗೆ ತಡೆ ಹಾಕುವೆವು; ರಷ್ಯಾಗೆ ಅಮೆರಿಕ ಅಧ್ಯಕ್ಷ ಬೈಡೆನ್ ಎಚ್ಚರಿಕೆ
ಮಾಸ್ಕೋದಲ್ಲಿ ಫ್ರಾನ್ಸ್ ಅಧ್ಯಕ್ಷರ ಜತೆಗೆ ಪುಟಿನ್ ಮಾತುಕತೆ
Team Udayavani, Feb 9, 2022, 6:50 AM IST
ವಾಷಿಂಗ್ಟನ್/ಕೀವ್: ಉಕ್ರೇನ್ ವಿರುದ್ಧ ಮತ್ತಷ್ಟು ದಾಳಿ ನಡೆಸಿದ್ದೇ ಆದಲ್ಲಿ ರಷ್ಯಾದಿಂದ ಜರ್ಮನಿಗೆ ಸಂಪರ್ಕ ಕಲ್ಪಿಸುವ ನಾರ್ಡ್ ಸ್ಟ್ರೀಮ್ 2 ಅನಿಲ ಪೈಪ್ಲೈನ್ಗೆ ತಡೆ ಹಾಕಬೇಕಾಗುತ್ತದೆ. ಹೀಗೆಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಎಚ್ಚರಿಕೆ ನೀಡಿದ್ದಾರೆ.
ಜರ್ಮನಿಯ ಹೊಸ ಛಾನ್ಸಲರ್ ಒಲಾಫ್ ಶೋಲ್ಜ್ರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಬೈಡೆನ್ ಈ ಎಚ್ಚರಿಕೆ ನೀಡಿದ್ದಾರೆ. ಇಬ್ಬರು ಮುಖಂಡರೂ ಉಕ್ರೇನ್ ಬಿಕ್ಕಟ್ಟು ಶೀಘ್ರದಲ್ಲಿಯೇ ಮುಕ್ತಾಯವಾಗಬೇಕು ಎಂದು ಹೇಳಿದ್ದಾರೆ.
ಆದರೆ, ಈ ನಿಟ್ಟಿನಲ್ಲಿ ಸ್ಪಷ್ಟ ನಿರ್ಣಯ ಕೈಗೊಳ್ಳಲು ಅಮೆರಿಕ- ಜರ್ಮನಿಗೆ ಸಾಧ್ಯವಾಗಲಿಲ್ಲ. ಏಕೆಂದರೆ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಬೈಡೆನ್, ಯೋಜನೆಯ ಹೆಸರನ್ನು ಉಲ್ಲೇಖಿಸಿದರೂ, ಒಲಾಫ್ ಶೋಲ್ಜ್ ಅದನ್ನು ಹೇಳಲು ನಿರಾಕರಿಸಿದ ಘಟನೆಯೂ ನಡೆದಿದೆ.
ಇದನ್ನೂ ಓದಿ:ಸೋಂಕಿನ ಸಂಖ್ಯೆ ಶೇ. 5.1ಕ್ಕೆ ಇಳಿಕೆ : ರಾಜ್ಯಾದ್ಯಂತ 4,452 ಮಂದಿಗೆ ಪಾಸಿಟಿವ್
ಇದೇ ವೇಳೆ, ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರನ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಲಿ ಬಿಕ್ಕಟ್ಟಿನ ಬಗ್ಗೆ ಸುದೀರ್ಘ ಮಾತುಕತೆ ನಡೆಸಿದರು. ಒಟ್ಟು ಐದು ಗಂಟೆಗಳ ಕಾಲ ಉಭ ಯ ನಾಯಕರು ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಅಮೆರಿಕ ಮತ್ತು ನ್ಯಾಟೋ ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೆ ನಮ್ಮ ಆಕ್ಷೇಪವಿದೆ. ಹೀಗಾಗಿ, ಉದ್ವಿಗ್ನತೆಗೆ ನಾವೇ ಕಾರಣ ಎಂದು ಹೇಳುವುದು ಸರಿಯಲ್ಲ ಎಂದು ಪುಟಿನ್ ಹೇಳಿದ್ದಾರೆ.
ನ್ಯಾಟೋ ರಕ್ಷಣಾತ್ಮಕವಾಗಿ ಮೈತ್ರಿಕೂಟ ಮಾಡಿಕೊಂಡಿದೆ ಎಂಬ ಅಂಶವನ್ನು ಪುಟಿನ್ ತಿರಸ್ಕರಿಸಿದ್ದಾರೆ. ಇರಾಕ್, ಲಿಬಿಯಾ ಮತ್ತು ಅಫ್ಘಾನಿಸ್ತಾನದಲ್ಲಿ ರಕ್ಷಣೆಗಾಗಿ ಅವು ಮಾಡಿದ ಕ್ರಮಗಳು ಏನೆಂದು ಎಲ್ಲ ರಿಗೂ ಗೊತ್ತು ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ