ಶಾಲೆಗೆ ಕಳುಹಿಸಲು ಪೋಷಕರೇ ಸಿದ್ಧರಿಲ್ಲ !

ಇನ್ನೂ 1ತಿಂಗಳು ಕಾದು ನೋಡುವ ಯತ್ನ

Team Udayavani, May 14, 2020, 6:00 AM IST

ಶಾಲೆಗೆ ಕಳುಹಿಸಲು ಪೋಷಕರೇ ಸಿದ್ಧರಿಲ್ಲ !

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ: ಈಗ ಶಾಲಾ- ಕಾಲೇಜುಗಳು ಆರಂಭವಾದರೆ ಮಕ್ಕಳನ್ನು ಕಳುಹಿಸಲು ಪೋಷಕರೇ ಸಿದ್ಧರಿಲ್ಲ. -ಹೀಗೆನ್ನುತ್ತಿದೆ ಒಂದು ಸಮೀಕ್ಷೆ.

ಕೋವಿಡ್- 19ದಿಂದ ದೀರ್ಘ‌ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯ ವಾರದಿಂದಲೇ ಶಾಲೆ- ಕಾಲೇಜುಗಳು ಸ್ಥಗಿತ ವಾಗಿವೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಲಕ್ಷಣ ಇಲ್ಲ. ಒಂದು ವೇಳೆ ಶಾಲೆ, ಕಾಲೇಜು, ಮಾಲ್‌, ಚಿತ್ರಮಂದಿರ, ಪಾರ್ಕ್‌ಗಳನ್ನು ಕೂಡಲೇ ಪುನರಾರಂಭಿಸಿದರೆ, ಪೋಷಕರ ಸ್ಪಂದನೆ ಹೇಗಿರುತ್ತದೆ? ಶೀಘ್ರವೇ ವ್ಯವಸ್ಥೆಗೆ ಹೊಂದಿಕೊಳ್ಳುತ್ತಾರಾ? ಕೋವಿಡ್- 19 ಭೀತಿ ಎಷ್ಟು ಕಾಡುತ್ತಿದೆ? ಎಂಬ ಬಗ್ಗೆ ಪೋಷಕರ ವೇದಿಕೆಯೊಂದು ಸಮೀಕ್ಷೆ ನಡೆಸಿದೆ. ಬಹುತೇಕ ಪೋಷಕರು ಶೀಘ್ರವೇ ವ್ಯವಸ್ಥೆಗೆ ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಶಾಲೆ ತೆರೆದರೆ
ಈಗಲೇ ಶಾಲೆಗಳನ್ನು ಆರಂಭಿಸಿದರೆ ಶೇ. 92ರಷ್ಟು ಪೋಷಕರಿಗೆ ಮಕ್ಕಳನ್ನು ಕಳುಹಿಸುವುದು ಇಷ್ಟವಿಲ್ಲ. ಶೇ. 56ರಷ್ಟು ಪೋಷಕರು ಕನಿಷ್ಠ ಒಂದು ತಿಂಗಳು ಕಾದು ನೋಡಲು ಬಯಸಿದ್ದಾರೆ. ಶೇ. 8ರಷ್ಟು ಮಂದಿ ಮಾತ್ರ ಕಳುಹಿಸಲು ಸಮ್ಮತಿಸಿದ್ದಾರೆ.

ಪಾರ್ಟಿ, ಮಾಲ್‌, ಸಿನೆಮಾ
ಶೇ. 52ರಷ್ಟು ಪೋಷಕರಿಗೆ ಮಕ್ಕಳನ್ನು ಬರ್ತ್‌ಡೇ ಪಾರ್ಟಿಗೆ ಕಳುಹಿಸಲು ಮನಸ್ಸಿಲ್ಲ. ಶಾಪಿಂಗ್‌ ಮಾಲ್‌, ಚಿತ್ರ ಮಂದಿರಕ್ಕೂ ಕಳಿಸುವುದಿಲ್ಲ ಎಂದಿದ್ದಾರೆ.

ಆಟೋಟ
ಬಹುತೇಕ ಪೋಷಕರಿಗೆ ತಮ್ಮ ಮಕ್ಕಳನ್ನು ಸ್ನೇಹಿತರ ಜತೆ ಆಟವಾಡಲು ಕಳುಹಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಶೇ. 50ರಷ್ಟು ಮಂದಿ ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲು ಬಯಸಿದ್ದಾರೆ. ಶೇ. 35ರಷ್ಟು ಪೋಷಕರು ಮಾತ್ರ ಮಕ್ಕಳನ್ನು ಸ್ನೇಹಿತರೊಂದಿಗೆ ಆಟವಾಡಲು ಪಾರ್ಕ್‌ಗೆ ಕಳುಹಿಸಲು ಬಯಸಿದ್ದಾರೆ. ಆದರೆ ಸಾಮಾಜಿಕ ಅಂತರ ಇರಬೇಕು ಎಂಬ ಷರತ್ತು ಇದೆ. ವೈಯಕ್ತಿಕ ಕ್ರೀಡೆಗಳು ಇನ್ನೂ ಆರು ತಿಂಗಳು ಬೇಡ ಎಂಬುದು ಶೇ. 45 ಪೋಷಕರ ಅಭಿಮತವಾಗಿದೆ. ಶೇ. 25ರಷ್ಟು ಮಂದಿ ಇದಕ್ಕೆ ಒಲವು ತೋರಿದ್ದಾರೆ. ಕುಟುಂಬದೊಂದಿಗೆ ಪ್ರವಾಸ ತೆರಳುವುದು ಅಸುರಕ್ಷಿತ ಎಂದು ಶೇ. 57ರಷ್ಟು ಪೋಷಕರು ತಿಳಿಸಿದ್ದಾರೆ.

ಶೇ. 1ರಷ್ಟು ಮಂದಿ ಮಾತ್ರ ಹಾಲಿಡೇ ಎಂಜಾಯ್‌ ಮಾಡುವ ಬಯಕೆ ವ್ಯಕ್ತಪಡಿಸಿದ್ದಾರೆ. ಪೋಷಕರ ವೇದಿಕೆಯು ಬೆಂಗಳೂರು, ಮುಂಬಯಿ, ದಿಲ್ಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್‌ ಸೇರಿದಂತೆ ದೇಶಾದ್ಯಂತ 12 ಸಾವಿರ ಪೋಷಕರಿಂದ ಪ್ರತಿಕ್ರಿಯೆ ಪಡೆದು ವರದಿ ತಯಾರಿಸಿದೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.