ಸದ್ಯಕ್ಕೆ ಚುನಾವಣೆಯಲ್ಲಿ ಆರ್ವಿಎಂ ಬಳಕೆ ಇಲ್ಲ
ಸಂಸತ್ಗೆ ಕೇಂದ್ರ ಸರ್ಕಾರ ಮಾಹಿತಿ
Team Udayavani, Feb 4, 2023, 6:55 AM IST
ನವದೆಹಲಿ: ವಲಸೆ ಮತದಾರರಿಗೆ ಅನುಕೂಲವಾಗಲೆಂದು ಪ್ರಸ್ತಾಪಿಸಿದ್ದ ರಿಮೋಟ್ ಎಲೆಕ್ಟ್ರಾನಿಕ್ ವೋಟಿಂಗ್ ಮಷೀನ್ಗಳನ್ನು ಮುಂಬರಲಿರುವ ಚುನಾವಣೆಗಳಲ್ಲಿ ಬಳಕೆ ಮಾಡುವುದಿಲ್ಲ. ಅನಿವಾಸಿ ಭಾರತೀಯ ಮತದಾರರ ಬಳಕೆಗಾಗಿ ಇದನ್ನು ಪ್ರಸ್ತಾಪಿಸಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಸ್ಪಷ್ಟಪಡಿಸಿದೆ. ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಲಿಖಿತ ರೂಪದ ಪ್ರತಿಕ್ರಿಯೆಯಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.
ಈ ನಡುವೆ, ಅದಾನಿ ಗ್ರೂಪ್ ವಿರುದ್ಧದ ವಂಚನೆ ಆರೋಪ ಕುರಿತು ಚರ್ಚೆಯಾಗಬೇಕು ಮತ್ತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳು ಶುಕ್ರವಾರವೂ ಗದ್ದಲವೆಬ್ಬಿಸಿದ ಕಾರಣ, ಉಭಯ ಸದನಗಳ ಕಲಾಪ ಮುಂದೂಡಲ್ಪಟ್ಟಿತು.
ದೇಶದ ನಾಗರಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಅದಾನಿ ಗ್ರೂಪ್ ವಿಚಾರವನ್ನು ಎಲ್ಲಾ ಪ್ರತಿಪಕ್ಷಗಳು ಒಗ್ಗಟ್ಟಾಗಿ ಚರ್ಚಿಸಲು ಬಯಸಿವೆ. ಆದರೆ, ಸರ್ಕಾರ ತಾನು ಮುಜುಗರಕ್ಕೀಡಾಗಬಹುದೆಂಬ ಭಯದಿಂದ ಚರ್ಚೆಗೆ ಅವಕಾಶವನ್ನೇ ನೀಡುತ್ತಿಲ್ಲ.
-ಶಶಿ ತರೂರ್, ಕಾಂಗ್ರೆಸ್ ಸಂಸದ
ಅದಾನಿಗ್ರೂಪ್ ವಿಚಾರವಾಗಿ ಜಂಟಿ ಸಂಸದೀಯ ಸಮಿತಿಯ ತನಿಖೆ ಕೋರುವುದರಲ್ಲಿ ಅರ್ಥವಿಲ್ಲ. ಎಲ್ಐಸಿ ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ತನ್ನ ಹೂಡಿಕೆಗಳ ಬಗ್ಗೆ ತಾನೇ ನಿರ್ಣಯ ತೆಗೆದುಕೊಂಡಿದೆ. ಇದಕ್ಕೂ ಸರ್ಕಾರಕ್ಕೂ ಸಂಬಂಧವೇನಿದೆ?
– ಮಹೇಶ್ ಜೇಠ್ಮಲಾನಿ, ಬಿಜೆಪಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ