4 ಸಾವಿರ ಶಾಲೆಗಳಲ್ಲಿ ಬಯಲೇ ಶೌಚಾಲಯ!


Team Udayavani, May 9, 2019, 6:16 AM IST

ilake

ಬೆಂಗಳೂರು: ರಾಜ್ಯದ ಸುಮಾರು ನಾಲ್ಕು ಸಾವಿರ ಶಾಲೆಗಳಲ್ಲಿ ಇಂದಿಗೂ ಬಯಲೇ ಶೌಚಾಲಯ…!

ಹೌದು, ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಕಟಿಸಿರುವ 2018-19ನೇ ಸಾಲಿನ ಶೈಕ್ಷಣಿಕ ವರದಿಯಲ್ಲಿ ಈ ಆಘಾತಕಾರಿ ಅಂಶ ಬಯಲಿಗೆ ಬಂದಿದೆ. ರಾಜ್ಯದ ಒಟ್ಟು 43,492 ಸರಕಾರಿ ಪ್ರಾಥಮಿಕ ಶಾಲೆಗಳ ಪೈಕಿ 2,794 ಶಾಲೆಗಳಲ್ಲಿ ಬಾಲಕರಿಗೆ ಮತ್ತು 1,288 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳೇ ಇಲ್ಲ.

4,696 ಪ್ರೌಢಶಾಲೆಗಳ ಪೈಕಿ 153 ಶಾಲೆಗಳಲ್ಲಿ ಬಾಲಕರಿಗೆ ಶೌಚಾಲಯ ಹಾಗೂ 64 ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯಗಳಿಲ್ಲ. ಹೀಗಾಗಿ ಇವರೆಲ್ಲರೂ ಇನ್ನೂ ಶೌಚಾಲಯಕ್ಕೆ ಬಯಲನ್ನೇ ಅವಲಂಬಿಸಿಕೊಂಡಿದ್ದಾರೆ. ಇನ್ನೇನು ಮುಂಗಾರು ಮಳೆ ಆರಂಭವಾಗುವ ಹೊತ್ತಿಗೆ 2019-20ನೇ ಸಾಲಿನ ಶೈಕ್ಷಣಿಕ ವರ್ಷವೂ ಆರಂಭವಾಗುತ್ತಿದೆ. ಈ ಹೊತ್ತಲ್ಲೇ ಇಂಥ ವರದಿ ಹೊರಬಿದ್ದಿದೆ.

ಆಟದ ಮೈದಾನವೂ ಇಲ್ಲ

ರಾಜ್ಯದ 18,669 ಸರಕಾರಿ ಪ್ರಾಥಮಿಕ ಶಾಲೆಗಳು ಹಾಗೂ 717 ಪ್ರೌಢಶಾಲೆಗಳಲ್ಲೂ ಮಕ್ಕಳಿಗೆ ಆಟದ ಮೈದಾನವೇ ಇಲ್ಲ. 30,407 ಸರಕಾರಿ ಪ್ರಾಥಮಿಕ ಶಾಲೆ ಮತ್ತು 3,088 ಪ್ರೌಢಶಾಲೆಗಳಲ್ಲಿ ಗ್ರಂಥಾಲಯದ ವ್ಯವಸ್ಥೆಯನ್ನೂ ಮಾಡಿಲ್ಲ. ಕಲಿಕೆಗೆ ಪೂರಕವಾಗಿರುವ ಪುಸ್ತಕಗಳ ಆಲಯವೇ ಸರಕಾರಿ ಶಾಲೆಗಳಲ್ಲಿ ಇಲ್ಲದಿರುವುದು ವಿಪರ್ಯಾಸ.

ಸ.ಪ್ರಾ. ಶಾಲೆಗಳಲ್ಲಿ 2,08,681 ಕೊಠಡಿಗಳಿದ್ದು, 1,37,392 ಉತ್ತಮ, 27,445 ಸಣ್ಣ ಪ್ರಮಾಣ ಮತ್ತು 43,844 ದೊಡ್ಡ ಪ್ರಮಾಣದ ದುರಸ್ತಿಗೆ ಅಗತ್ಯವಿರುವವು. ಸರಕಾರಿ ಪ್ರೌಢಶಾಲೆಗಳ 23,318 ಕೊಠಡಿಗಳಲ್ಲಿ 11,601 ಉತ್ತಮ, 1,727 ಸಣ್ಣ ಮತ್ತು 9,990 ದೊಡ್ಡ ಪ್ರಮಾಣದ ದುರಸ್ತಿ ಅಗತ್ಯವಿರುವು ಎಂಬುದು ಶೈಕ್ಷಣಿಕ ವರದಿಯಲ್ಲಿ ಉಲ್ಲೇಖವಾಗಿದೆ.

2019-20ನೇ ಸಾಲಿಗೆ ದಾಖಲಾತಿ ಆರಂಭ ವಾಗಿದೆ. ಆದರೆ ಶೌಚಾಲಯ, ಕುಡಿಯುವ ನೀರು, ಮೈದಾನ, ಗ್ರಂಥಾಲಯ ಇತ್ಯಾದಿಗಳನ್ನು ಸಮರ್ಪಕ ವಾಗಿ ಒದಗಿಸದಿದ್ದರೆ ಪಾಲಕ, ಪೋಷಕರು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಹಿಂದೇಟು ಹಾಕುವುದರಲ್ಲಿ ಸಂಶಯವೇ ಇಲ್ಲ.

ಶಿಕ್ಷಕರೂ ಇಲ್ಲ

ಶಿಕ್ಷಕರ ಕೊರತೆಯನ್ನು ನೀಗಿಸಲು ಇನ್ನೂ ಸಾಧ್ಯವಾಗಿಲ್ಲ. ಪ್ರಾಥಮಿಕ ಶಾಲೆಗೆ 1,91,387 ಶಿಕ್ಷಕರ ಹುದ್ದೆಗಳು ಮಂಜೂರಾಗಿದ್ದು, 1,60,572 ಹುದ್ದೆಗಳಲ್ಲಿ ಮಾತ್ರ ಸೇವೆ ಸಲ್ಲಿಸುತ್ತಿದ್ದಾರೆ. ಉಳಿದ 30,815 ಹುದ್ದೆ ಖಾಲಿ. ಸುಮಾರು 10 ಸಾವಿರ ಪದವೀಧರ ಶಿಕ್ಷಕರ ಹುದ್ದೆ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರೌಢಶಾಲೆಗೆ 39,332 ಹುದ್ದೆ ಮಂಜೂರಾಗಿದ್ದು, 35,961 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. 3,371 ಹುದ್ದೆಗಳು ಖಾಲಿಯಾಗಿವೆ. ಇದು ಸರಕಾರಿ ಶಾಲೆಯ ಸ್ಥಿತಿಯಾದರೆ, ಬುಡಕಟ್ಟು ಮತ್ತು ಸಮಾಜ ಕಲ್ಯಾಣ ಇಲಾಖೆ ಶಾಲೆಗಳು, ಸ್ಥಳೀಯ ಸಂಸ್ಥೆಗಳ ಶಾಲೆಗಳು, ಕೆಲವು ಅನುದಾನಿತ ಶಾಲೆಗಳ ಸ್ಥಿತಿ ಇದಕ್ಕಿಂತಲೂ ಭಿನ್ನವಾಗಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.