ಪಕ್ಷ ಬಿಡುವವರ ಬಗ್ಗೆ ಚಿಂತೆಯಿಲ್ಲ, ಪಕ್ಷ ಕಟ್ಟುವ ಮನಸ್ಸುಗಳು ಇದ್ದರೆ ಸಾಕು! – ಎಚ್ಡಿಡಿ
Team Udayavani, Jan 11, 2020, 10:07 PM IST
ಬೆಂಗಳೂರು: ಪಕ್ಷ ಬಿಡುವವರ ಬಗ್ಗೆ ನನಗೆ ಚಿಂತೆಯಿಲ್ಲ. ಪಕ್ಷ ಕಟ್ಟುವ ಮನಸ್ಸುಗಳು ಇದ್ದರೆ ಸಾಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಹಿಳಾ ಘಟಕದ ಪದಾಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಪಕ್ಷ ಬಿಡುವವರು ಬಿಟ್ಟು ಹೋಗಲಿ. ಆದರೆ, ಇಲ್ಲೇ ಇದ್ದು ಸಮಸ್ಯೆ ಮಾಡುವುದು ಬೇಡ ಎಂದು ತಿಳಿಸಿದರು.
ರಾಜ್ಯದಲ್ಲಿ ಪಕ್ಷವನ್ನು ಪ್ರಬಲವಾಗಿ ಕಟ್ಟುವುದು ನನಗೆ ಗೊತ್ತಿದೆ. ಲೋಕಸಭೆ ಚುನಾವಣೆ, ಉಪ ಚುನಾವಣೆ ಸೋಲಿನ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಾನು ಸೋತಿದ್ದರೂ ಪಕ್ಷ ಕಟ್ಟುವ ಶಕ್ತಿ ಇದೆ. ಕೇರಳಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದಿದ್ದೇನೆ ಎಂದು ಹೇಳಿದರು.
ರಾಜ್ಯಸಭೆಗೆ ಹೋಗಲು ನನಗೆ ಮನಸ್ಸಿಲ್ಲ. ಅದಕ್ಕೂ ದೇವೇಗೌಡರಿಗೆ ಅಧಿಕಾರ ದಾಹ ಎಂಬ ಆರೋಪ ಬರುತ್ತದೆ. ಹೀಗಾಗಿ, ಇಲ್ಲೇ ಇದ್ದು ಹೋರಾಟ ಮುಂದುವರಿಸಲಿದ್ದೇನೆ ಎಂದು ತಿಳಿಸಿದರು.
ಮಂಗಳೂರು ಗಲಭೆ ಬಗ್ಗೆ ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಸಿಡಿ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ನೋಡುತ್ತಿದ್ದೇನೆ. ಸೂಕ್ತ ಕಾಲದಲ್ಲಿ ಎಲ್ಲದಕ್ಕೂ ಉತ್ತರಿಸಲಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ