ಸೋಂಕು ನುಸುಳಲು ಬಿಡದ ಕಾನನವಾಸಿಗಳು : 2 ವರ್ಷಗಳಲ್ಲಿ ದಾಖಲಾಗಿಲ್ಲ ಪ್ರಕರಣ


Team Udayavani, Jun 1, 2021, 7:00 AM IST

ಸೋಂಕು ನುಸುಳಲು ಬಿಡದ ಕಾನನವಾಸಿಗಳು : 2 ವರ್ಷಗಳಲ್ಲಿ ದಾಖಲಾಗಿಲ್ಲ ಪ್ರಕರಣ

ಬೆಳ್ತಂಗಡಿ : ತಲತಲಾಂತರದಿಂದ ಅರಣ್ಯವನ್ನೇ ಉಸಿರಾಗಿಸಿ ಬದುಕುತ್ತಿರುವ ಬೆಳ್ತಂಗಡಿ ತಾಲೂಕಿನ ಬಾಂಜಾರುಮಲೆಯ 40ಕ್ಕೂ ಅಧಿಕ ಮಲೆಕುಡಿಯ ಕುಟುಂಬಗಳು ಕೋವಿಡ್‌-19ರ ಎರಡು ಅವತರಣಿಕೆಗಳಲ್ಲೂ ಬಾಧೆಗೀಡಾಗದೆ ಸುರಕ್ಷಿತವಾಗಿವೆ.

ಬೆಳ್ತಂಗಡಿ ತಾಲೂಕಿನಿಂದ 40 ಕಿ.ಮೀ. ದೂರದಲ್ಲಿದ್ದು, ನೆರಿಯ ಗ್ರಾ.ಪಂ.ಗೆ ಒಳಪಡುವ ಚಾರ್ಮಾಡಿ ಘಾಟಿಯಲ್ಲಿ 6ನೇ ತಿರುವಿನಿಂದ ಬಲಕ್ಕೆ ಸುಮಾರು 10 ಕಿ.ಮೀ. ಸಾಗಿದರೆ ಬಾಂಜಾರುಮಾಲೆ ಇದೆ. ಮಲೆಕುಡಿಯ ಸಮುದಾಯಕ್ಕೆ ಸೇರಿದ ಕುಟುಂಬಗಳು ಇಲ್ಲಿ ಮೂರು ತಲೆಮಾರುಗಳಿಂದ ವಾಸಿಸುತ್ತಿವೆ. ಪ್ರಸಕ್ತ 43 ಕುಟುಂಬಗಳ 168 ಮಂದಿ ಕೃಷಿಯನ್ನೇ ಆಶ್ರಯಿಸಿ ಜೀವನ ನಡೆಸುತ್ತಿದ್ದಾರೆ.

ಅರಣ್ಯವೇ ಆರೋಗ್ಯ ಸಂಪತ್ತು
ಕಳೆದ ಎರಡು ವರ್ಷಗಳಿಂದ ಪ್ರಪಂಚದಾದ್ಯಂತ ಹಳ್ಳಿಹಳ್ಳಿಯ ಮನೆಗಳ ಕದ ತಟ್ಟಿರುವ ಕೋವಿಡ್‌ ಬಾಂಜಾರು ಮಲೆ ಮಲೆಕುಡಿಯ ನಿವಾಸಿಗಳತ್ತ ಸುಳಿದಿಲ್ಲ. ಇವರು ಲಾಕ್‌ಡೌನ್‌ ಬಳಿಕ ಊರಿನಿಂದ ಹೊರಗೆ ಕಾಲಿಡದಿರುವುದೇ ಕಾರಣ. ಹಾಗೆಯೇ ತಮ್ಮೂರಿಗೆ ಯಾರೂ ಪ್ರವೇಶಿಸಲು ಬಿಟ್ಟಿಲ್ಲ. ಹುಟ್ಟು ಶ್ರಮಜೀವಿಗಳಾಗಿರುವ ಇವರು ತಮ್ಮ ಆಹಾರವನ್ನು ತಾವೇ ಬೆಳೆ ಯುತ್ತಾರೆ, ಮೂಲಿಕೆಗಳನ್ನು ಆಶ್ರಯಿಸಿ ಆರೋಗ್ಯವಾಗಿದ್ದಾರೆ.

168ಕ್ಕೂ ಹೆಚ್ಚು ಜನ
ಸುಮಾರು 168 ಜನಸಂಖ್ಯೆ ಹೊಂದಿರುವ ಗ್ರಾಮವು 250 ಎಕ್ರೆಗೂ ಅಧಿಕ ಕೃಷಿ ಭೂಮಿ ಹೊಂದಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 20ಕ್ಕೂ ಹೆಚ್ಚು ಮಂದಿಯಿದ್ದು, 5 ವರ್ಷಕ್ಕಿಂತ ಕಡಿಮೆಯ 22 ಮಕ್ಕಳು, 14 ವರ್ಷಕ್ಕಿಂತ ಕಡಿಮೆಯ 14 ಮಕ್ಕಳಿದ್ದಾರೆ. ಒಬ್ಬ ಗರ್ಭಿಣಿಯೂ ಕಾಲೊನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಈವರೆಗೆ ಕೋವಿಡ್‌ ಪ್ರಕರಣ ದಾಖಲಾಗದೆ ಆರೋಗ್ಯ ವಂತರಾಗಿದ್ದಾರೆ.

ಹಿತ್ತಲಗಿಡವೇ ಮದ್ದು
ನಿಸರ್ಗ ಸಹಜ ಆಹಾರ, ನೀರು, ಗಾಳಿಯೇ ಇವರ ಆರೋಗ್ಯ ಸುರಕ್ಷಿತವಾಗಿರಲು ಕಾರಣ. ತಾವೇ ಬೆಳೆದ ಸಾವಯವ ತರಕಾರಿಯ ಬಳಕೆ ಇವರ ರೋಗನಿರೋಧಕ ಶಕ್ತಿ ವೃದ್ಧಿ ಮಾಡಿದೆ. ಸಂಬಾರ ಬೆಳೆಗಳು, ಅಡಿಕೆ, ರಬ್ಬರ್‌, ತೆಂಗು ಬೆಳೆಯುತ್ತಿದ್ದು, ಕಠಿನ ಪರಿಶ್ರಮಿಗಳೂ ಆಗಿರುವುದರಿಂದ ಇತರ ಕಾಯಿಲೆಗಳಿಲ್ಲ, ದೈಹಿಕವಾಗಿಯೂ ಸದೃಢರಾಗಿದ್ದಾರೆ.

ಕಳೆದ ಬಾರಿ ಕೋವಿಡ್‌ ಪರೀಕ್ಷೆ ನಡೆಸಿದ್ದು, ಯಾರಿಗೂ ಪಾಸಿಟಿವ್‌ ಬಂದಿಲ್ಲ. ಎಲ್ಲರೂ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ. “ವೈದ್ಯರ ನಡೆ ಹಳ್ಳಿ ಕಡೆ’ ಯೋಜನೆಯಡಿ ಈ ವಾರ ಬಾಂಜಾರು ಮಲೆ ಕಾಲೊನಿ ನಿವಾಸಿಗಳ ಆರೋಗ್ಯ ತಪಾಸಣೆ ನಡೆಸಲಾಗುವುದು.
-ಡಾ| ಕಲಾಮಧು, ಆರೋಗ್ಯಾಧಿಕಾರಿ, ಬೆಳ್ತಂಗಡಿ

- ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.