ಬಿಜೆಪಿ ರಾಜ್ಯಾಧ್ಯಕ್ಷ ಗಾದಿಗೆ ಉ.ಕ. ಒತ್ತಡ!


Team Udayavani, May 7, 2019, 3:10 AM IST

bjp-logo

ಕಲಬುರಗಿ: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಸಾರಥ್ಯ ವಹಿಸುವರು ಯಾರು? ಇಂಥದೊಂದು ಬಿರುಸಿನ ಚರ್ಚೆ ಈಗ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ಸಿಗಬೇಕೆಂಬ ಕೂಗು ಬಲವಾಗಿ ಕೇಳಿ ಬರುತ್ತಿದೆ.

ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಡಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಯಡಿಯೂರಪ್ಪ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಮುಂದಿನ ತಿಂಗಳು ಬಿಡುಗಡೆಗೊಳಿಸಿ ಆ ಸ್ಥಾನಕ್ಕೆ ಯಾರು ಸೂಕ್ತ ಎಂಬ ಚಿಂತನೆ ಪಕ್ಷದಲ್ಲಿ ನಡೆದಿದ್ದರಿಂದ ಆಕಾಂಕ್ಷಿಗಳು ತಮ್ಮದೇಯಾದ ಶಕ್ತಿ ಒರೆಗಲ್ಲಿಗೆ ಹಚ್ಚಲು ಮುಂದಾಗಿದ್ದಾರೆ.

ಬಿಜೆಪಿಯ ಭದ್ರಕೋಟೆಯಾಗಿರುವ ಹಾಗೂ ಸರ್ಕಾರ ರಚನೆಯಲ್ಲಿ ಉತ್ತರ ಕರ್ನಾಟಕದ ಕೊಡುಗೆಯೇ ಹೆಚ್ಚಿರುವಾಗ ಪಕ್ಷದ ಅಧ್ಯಕ್ಷ ಸ್ಥಾನವೂ ಉ.ಕ.ಕ್ಕೆ ದೊರೆಯಬೇಕೆಂಬ ಕೂಗು ಈಗ ತೀವ್ರ ಸಂಚಲನ ಮೂಡಿಸಿದೆ. ಈ ಮೂಲಕ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ ನಡುವೆ ಪೈಪೋಟಿ ಏರ್ಪಡುವಂತಾಗಿದೆ.

ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಡಿಸಿಎಂ ಆರ್‌. ಅಶೋಕ, ಶಾಸಕ ಸಿ.ಟಿ.ರವಿ ಸೇರಿ ಇತರರ ಹೆಸರು ಮುಂಚೂಣಿಯಲ್ಲಿದೆ. ಇನ್ನು ಉತ್ತರ ಕರ್ನಾಟಕ ಹೆಸರು ಚಾಲ್ತಿಗೆ ಬಂದರೆ ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷರಾಗಿರುವ ಲಕ್ಷ್ಮಣ ಸವದಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ, ಉಮೇಶ ಕತ್ತಿ, ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ್‌ ಸೇರಿ ಮತ್ತಿತರರ ಹೆಸರು ಮುಂಚೂಣಿಯಲ್ಲಿವೆ.

ಉ.ಕ ಮುನ್ನೆಲೆಗೆ: ಲೋಕಸಭೆ ಚುನಾವಣೆ ಫಲಿತಾಂಶ ನಂತರ ರಾಜ್ಯದ ರಾಜಕೀಯದಲ್ಲಿ ಕ್ಷೀಪ್ರ ಬದಲಾವಣೆಯಾಗಿ ಒಂದು ವೇಳೆ ಯಡಿಯೂರಪ್ಪ ಸಿಎಂ ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉ.ಕ. ಭಾಗಕ್ಕೆ ದೊರಕಬೇಕೆಂಬ ಬೇಡಿಕೆಗೆ ಮತ್ತಷ್ಟು ಶಕ್ತಿ ಬರಲಿದೆ.

ತಮ್ಮ ಆಪ್ತರನ್ನು ಅಧ್ಯಕ್ಷ ಗಾದಿಗೆ ತರುವ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಉತ್ತರ ಕೂಗು ಚಾಲ್ತಿಗೆ ತರುವಂತೆ ತಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಪ್ರಸ್ತುತ ಬಿಜೆಪಿ ಪಡೆದಿರುವ 104 ಶಾಸಕ ಸ್ಥಾನಗಳಲ್ಲಿ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಯನ್ನೊಳಗೊಂಡ ಉತ್ತರ ಕರ್ನಾಟದಲ್ಲಿ 44 ಸ್ಥಾನಗಳನ್ನು ಬಿಜೆಪಿ ಪಡೆದಿದೆ.

ಇದಲ್ಲದೇ 2008ರಲ್ಲಿ ಬಿಜೆಪಿ 110 ಸ್ಥಾನಗಳನ್ನು ಪಡೆದು ಸರ್ಕಾರ ರಚನೆಯಾದಾಗ ಉ.ಕ.ದಲ್ಲಿ 55 ಸ್ಥಾನಗಳು ಬಿಜೆಪಿ ಪಡೆದಿತ್ತು. ಆ ವೇಳೆಯಲ್ಲೂ ಉ.ಕ.ಕ್ಕೆ ಬಿಜೆಪಿ ಅಧ್ಯಕ್ಷ ಸ್ಥಾನ ಬಲವಾಗಿ ಕೇಳಿ ಬಂದಿತ್ತು.

ಉ.ಕ.ದಿಂದ ಮೂವರು: ಕಲಬುರಗಿಯವರಾಗಿರುವ ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ್‌ ಸೇಡಂ ಈ ಹಿಂದೆ 2000ದಿಂದ 2003ರವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಅದೇ ರೀತಿ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹಾಗೂ ಸಂಸದ ಪ್ರಹ್ಲಾದ ಜೋಶಿ ಉತ್ತರ ಕರ್ನಾಟಕ ಭಾಗದಿಂದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ರಾಜ್ಯ ಘಟಕದ ಮುಂದಿನ ಅಧ್ಯಕ್ಷರು ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ ಎಂಬುದು ಇಲ್ಲ. ಆದರೆ ಉತ್ತರ ಕರ್ನಾಟಕದವರಾದರೆ ಖುಷಿ. ಒಟ್ಟಾರೆ ಬಿಜೆಪಿ ಮುಂದಿನ ಅಧ್ಯಕ್ಷರು ಉತ್ತರ ಕರ್ನಾಟಕ ಭಾಗದವರಾಗಲಿ.
-ವಿ. ಸೋಮಣ್ಣ, ಮಾಜಿ ಸಚಿವ

ಉತ್ತರ ಕರ್ನಾಟಕ ಬಿಜೆಪಿ ಭದ್ರಕೋಟೆ. ಸರ್ಕಾರ ರಚನೆಯಲ್ಲಿ ಹಾಗೂ ಶಾಸಕರ ಸಂಖ್ಯೆ ಹೆಚ್ಚಳದಲ್ಲಿ ಉ.ಕ. ಕೊಡುಗೆ ಅಪಾರ. ಸಂಖ್ಯೆಗೆ ನಾವು ಬೇಕು. ಆದರೆ ಅಧಿಕಾರಕ್ಕೆ ಬೇಡವೇ? ಅಧ್ಯಕ್ಷ ಸ್ಥಾನ ಯಾವುದೇ ಒಂದು ಪ್ರದೇಶವನ್ನು ಯಾರಿಗೂ ಗುತ್ತಿಗೆ ಕೊಟ್ಟಿಲ್ಲ. ಈ ಸಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನಮ್ಮ ಭಾಗಕ್ಕೆ ಬೇಕು.
-ಬಸನಗೌಡ ಪಾಟೀಲ್‌ ಯತ್ನಾಳ, ವಿಜಯಪುರ ನಗರ ಶಾಸಕ

* ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.