ಹೆಮ್ಮೆಯ ಮಲೆನಾಡು… ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ…

ಮತ್ತೆ ಕೆಲಸ ಶುರುವಾಗುವುದು ದವಡೆ ಹಲ್ಲಿಗೂ ಮತ್ತು ವೀಳ್ಯದೆಲೆ,ಅಡಿಕೆಗೆ ಯುದ್ಧ ಆರಂಭವಾದಗಲೆ

Team Udayavani, Nov 29, 2021, 10:30 AM IST

ಹೆಮ್ಮೆಯ ಮಲೆನಾಡು… ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ…

ಮಲೆನಾಡು ಎಂದ ಕೂಡಲೇ ನೆನಪಾಗುವುದು ಹಚ್ಚ ಹಸಿರಾದ ಬೆಟ್ಟ-ಗುಡ್ಡಗಳು, ಭವ್ಯವಾದ ಶಿಲ್ಪಕಲೆಯುಳ್ಳ ದೇವಸ್ಥಾನಗಳು, ಪ್ರಾಣಿ ವರ್ಗ ಹಾಗೂ ಅಲ್ಲಿನ ಶ್ರೀಮಂತ ಹೃದಯದ ಜನರು. ಮಲೆನಾಡ ಜನರ ಬದುಕಿನ ಶೈಲಿಗೂ ಇಲ್ಲಿಗೂ ಅಜಗಜಾಂತರ ವ್ಯತ್ಯಾಸವಿದೆ. ಮಲೆನಾಡು ಹಸಿರು ತೋರಣಗಳ ನಾಡು. ಅಲ್ಲಿ ಕೃಷಿಯಲ್ಲಿ ತೊಡಗುವವರ ಸಂಖ್ಯೆ ಹೆಚ್ಚು. ಉದಾ ; ಕರಾವಳಿಯಲ್ಲಿ ಮೀನುಗಾರಿಕೆ ಹೇಗೋ ಅಲ್ಲಿ ಕೃಷಿಯೂ ಹಾಗೆ, ಒಂದೂರಿನಲ್ಲಿ 100 ಮನೆ  ಇದೆಯೆಂದಾದರೆ ಅದರಲ್ಲಿ 80ರಷ್ಟು  ಮನೆಯವರು ಹೊಲ, ಗದ್ದೆ,ತೋಟ ಹೊಂದಿರುತ್ತಾರೆ. ಮನೆಯಲ್ಲಿ ತಮ್ಮದೇ ಆದ ಸ್ವಲ್ಪಮಟ್ಟಿಗೆ ತೋಟ ಅಥವಾ ಗದ್ದೆ ಇದ್ದರೂ ಕೂಡ ಊರಿನ ಎಸ್ಟೇಟ್ ಗಳಿಗೆ ಹೋಗಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಾರೆ.

ಮಲೆನಾಡಿನ ಯಾವುದೇ ಮನೆಗಳಿಗೆ ಭೇಟಿ ಕೊಟ್ಟರೆ ಸುಮ್ಮನೆ ಕೂತು ಕಾಲಹರಣ ಮಾಡುವಂತಿಲ್ಲ, ಏಕೆಂದರೆ ಪ್ರತಿಯೊಂದು ಮನೆಯೂ ಒಂದಕ್ಕಿಂತ ಒಂದು ವಿಭಿನ್ನ ಹಾಗೂ ವೀಕ್ಷಣೀಯವಾಗಿದೆ. ವಿಭಿನ್ನವಾದ ವಿನ್ಯಾಸದೊಂದಿಗೆ ಮನೆಗೆ ಬರುವವರನ್ನು ತನ್ನೊಡಲಿಗೆ ಸೇರಿಸಿಕೊಳ್ಳುತ್ತದೆ. ಮಲೆನಾಡಿಗರಿಗೆ ಅದಕ್ಕಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ ಎಂದರೆ ತಪ್ಪಾಗದು.

ಅಲ್ಲಿನ ಜನರಿಗೆ ಬೆಳಗಾಗುವುದು ಮನೆಯ ಕೋಳಿ ಕೊಕ್ಕೊಕ್ಕೋ ಎಂದು ರಾಗ ಹಾಕಿದಾಗಲೆ. ಮುಂಜಾನೆ ಮನೆಯ ಕುಬೇರರಿಗೆ ತಿನ್ನಲು ಹುಲ್ಲು ತಂದು ಹಾಕಿ ಮೇವಿಗೆ ಬಿಟ್ಟರೆ ಮತ್ತೆ ಕೆಲಸ ಶುರುವಾಗುವುದು ದವಡೆ ಹಲ್ಲಿಗೂ ಮತ್ತು ವೀಳ್ಯದೆಲೆ,ಅಡಿಕೆಗೆ ಯುದ್ಧ ಆರಂಭವಾದಗಲೆ. ಗದ್ದೆಯಲ್ಲೊ, ತೋಟದಲ್ಲೊ ಬೆವರು ಸುರಿಸಿ ಬಂದರೆ ಮನೆಯಲ್ಲಿ ಬೆಲ್ಲಕ್ಕೆ ನೀರು ಹಾಕಿದಂತೆ ಮಾಡಿದ ಕಾಫಿಯನ್ನು ಕುಡಿಯುತ್ತಾರೆ.

ಮಳೆಗಾಲದ ಸಂದರ್ಭದಲ್ಲಿ ಮಲೆನಾಡು  ಸ್ವರ್ಗದ ದ್ವಾರ ಬಾಗಿಲಿನಂತೆ  ಕಾಣುತ್ತಿರುತ್ತದೆ. ಆ ಸಮಯದಲ್ಲಿ ಪಟಪಟನೆ ಹಂಚಿನ ಮೇಲೆ ಬೀಳುವ ಮಳೆಗೆ ಹಲಸಿನ ಹಬ್ಬಳ ಮುರಿಯುವ ಮಜವೇ ಬೇರೆ. ಮನೆಯ ಅಂಗಳದಲ್ಲಿ ಬಿಟ್ಟರೆ ಇನ್ನುಳಿದ ಕಡೆ ನದಿಯೋ, ಜಲಪಾತವು ಹರಿಯುತ್ತಿರುತ್ತದೆ. ಅಣಬೆ ಎಂದರೆ ಎಲ್ಲರೂ  ಕೇಳಿರಲಿಕ್ಕಿಲ್ಲ, ನಿಮಗೆ ಅರ್ಥವಾಗುವಂತೆ (ಮಶ್ರೂಮ್ ) ನಾಯಿಕೊಡೆಯನ್ನು ಹುಡುಕುವುದು ಸಿಲಿಕಾನ್ ಸಿಟಿ ಟ್ರಾಫಿಕ್ ನಲ್ಲಿ ತಿಂಡಿ ತಿಂದು ಮುಗಿಸಿದಷ್ಟು ಸುಲಭದ ಕೆಲಸ. ಗದ್ದೆಯಂಚಿನಲ್ಲಿ ಹಾಳು ಬಿದ್ದ ಜಾಗದಲ್ಲಿ ಹುಟ್ಟಿರುತ್ತದೆ.

ಎಂದಿನಂತೆ ಅಲ್ಲಿಗೂ ಇಲ್ಲಿಗೂ ತುಂಬಾ ವ್ಯತ್ಯಾಸವಿದೆ, ಇಲ್ಲಿ ಮನೆಗಳಿಗೆ ಕಂಪೌಂಡ್ ಏರಿಸಿದ್ದಾರೆ, ಅಲ್ಲಿ ಅಚ್ಚುಕಟ್ಟಾದ ತಂತಿಬೇಲಿ, ಮನೆ ಎದುರಿಗೆ ಇಲ್ಲಿ ಸಿಮೆಂಟಿನ ಹಾಸಿಗೆ, ಅಲ್ಲಿ ಹಸಿರು ಬಳ್ಳಿಗಳು ಎದ್ದು ನಿಂತಿರುತ್ತವೆ, ಇಲ್ಲಿ ತಿನ್ನಲು ಜೊತೆಗೆ ಜಾಮ್ ಅಥವಾ ಸಾಸ್ ಇದ್ದರೆ, ಅಲ್ಲಿ ಚಗಳಿ ಇರುವೆ ಚಟ್ನಿ ಹೀಗೆ ಹೇಳುತ್ತ ಹೋದರೆ ಮುಗಿಯದಷ್ಟಿದೆ.

ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ ಅದು ಮಧ್ಯದಲ್ಲಿ ಮುಳುಗಿ ಹೋಗಬಹುದು ಅಥವಾ ದಡಸೇರಲು ಬಹುದು. ಬದುಕು ಕೊನೆಗೊಳ್ಳುವ ಮೊದಲು ಆದಷ್ಟು ಸಿಹಿ ಕಹಿ ನೆನಪುಗಳು ಉಳಿದು ಅಳಿದು ಹೋಗುತ್ತವೆ. ಆದರೆ ಕಲ್ಲು-ಸಕ್ಕರೆಯಂಥ ಸಿಹಿನೆನಪು ಬದುಕಿನಲ್ಲಿ  ಉಳಿಯಬೇಕಾದರೆ ನೀವು ಒಮ್ಮೆ ಮಲೆನಾಡಿಗೆ ಕಾಲಿಡಲೇ ಬೇಕು.

ರಾಹುಲ್, ಎಂಜಿಎಂ ಕಾಲೇಜು ಉಡುಪಿ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.