ಹೆಮ್ಮೆಯ ಮಲೆನಾಡು… ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ…

ಮತ್ತೆ ಕೆಲಸ ಶುರುವಾಗುವುದು ದವಡೆ ಹಲ್ಲಿಗೂ ಮತ್ತು ವೀಳ್ಯದೆಲೆ,ಅಡಿಕೆಗೆ ಯುದ್ಧ ಆರಂಭವಾದಗಲೆ

Team Udayavani, Nov 29, 2021, 10:30 AM IST

ಹೆಮ್ಮೆಯ ಮಲೆನಾಡು… ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ…

ಮಲೆನಾಡು ಎಂದ ಕೂಡಲೇ ನೆನಪಾಗುವುದು ಹಚ್ಚ ಹಸಿರಾದ ಬೆಟ್ಟ-ಗುಡ್ಡಗಳು, ಭವ್ಯವಾದ ಶಿಲ್ಪಕಲೆಯುಳ್ಳ ದೇವಸ್ಥಾನಗಳು, ಪ್ರಾಣಿ ವರ್ಗ ಹಾಗೂ ಅಲ್ಲಿನ ಶ್ರೀಮಂತ ಹೃದಯದ ಜನರು. ಮಲೆನಾಡ ಜನರ ಬದುಕಿನ ಶೈಲಿಗೂ ಇಲ್ಲಿಗೂ ಅಜಗಜಾಂತರ ವ್ಯತ್ಯಾಸವಿದೆ. ಮಲೆನಾಡು ಹಸಿರು ತೋರಣಗಳ ನಾಡು. ಅಲ್ಲಿ ಕೃಷಿಯಲ್ಲಿ ತೊಡಗುವವರ ಸಂಖ್ಯೆ ಹೆಚ್ಚು. ಉದಾ ; ಕರಾವಳಿಯಲ್ಲಿ ಮೀನುಗಾರಿಕೆ ಹೇಗೋ ಅಲ್ಲಿ ಕೃಷಿಯೂ ಹಾಗೆ, ಒಂದೂರಿನಲ್ಲಿ 100 ಮನೆ  ಇದೆಯೆಂದಾದರೆ ಅದರಲ್ಲಿ 80ರಷ್ಟು  ಮನೆಯವರು ಹೊಲ, ಗದ್ದೆ,ತೋಟ ಹೊಂದಿರುತ್ತಾರೆ. ಮನೆಯಲ್ಲಿ ತಮ್ಮದೇ ಆದ ಸ್ವಲ್ಪಮಟ್ಟಿಗೆ ತೋಟ ಅಥವಾ ಗದ್ದೆ ಇದ್ದರೂ ಕೂಡ ಊರಿನ ಎಸ್ಟೇಟ್ ಗಳಿಗೆ ಹೋಗಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಾರೆ.

ಮಲೆನಾಡಿನ ಯಾವುದೇ ಮನೆಗಳಿಗೆ ಭೇಟಿ ಕೊಟ್ಟರೆ ಸುಮ್ಮನೆ ಕೂತು ಕಾಲಹರಣ ಮಾಡುವಂತಿಲ್ಲ, ಏಕೆಂದರೆ ಪ್ರತಿಯೊಂದು ಮನೆಯೂ ಒಂದಕ್ಕಿಂತ ಒಂದು ವಿಭಿನ್ನ ಹಾಗೂ ವೀಕ್ಷಣೀಯವಾಗಿದೆ. ವಿಭಿನ್ನವಾದ ವಿನ್ಯಾಸದೊಂದಿಗೆ ಮನೆಗೆ ಬರುವವರನ್ನು ತನ್ನೊಡಲಿಗೆ ಸೇರಿಸಿಕೊಳ್ಳುತ್ತದೆ. ಮಲೆನಾಡಿಗರಿಗೆ ಅದಕ್ಕಿಂತ ದೊಡ್ಡ ಆಸ್ತಿ ಇನ್ನೊಂದಿಲ್ಲ ಎಂದರೆ ತಪ್ಪಾಗದು.

ಅಲ್ಲಿನ ಜನರಿಗೆ ಬೆಳಗಾಗುವುದು ಮನೆಯ ಕೋಳಿ ಕೊಕ್ಕೊಕ್ಕೋ ಎಂದು ರಾಗ ಹಾಕಿದಾಗಲೆ. ಮುಂಜಾನೆ ಮನೆಯ ಕುಬೇರರಿಗೆ ತಿನ್ನಲು ಹುಲ್ಲು ತಂದು ಹಾಕಿ ಮೇವಿಗೆ ಬಿಟ್ಟರೆ ಮತ್ತೆ ಕೆಲಸ ಶುರುವಾಗುವುದು ದವಡೆ ಹಲ್ಲಿಗೂ ಮತ್ತು ವೀಳ್ಯದೆಲೆ,ಅಡಿಕೆಗೆ ಯುದ್ಧ ಆರಂಭವಾದಗಲೆ. ಗದ್ದೆಯಲ್ಲೊ, ತೋಟದಲ್ಲೊ ಬೆವರು ಸುರಿಸಿ ಬಂದರೆ ಮನೆಯಲ್ಲಿ ಬೆಲ್ಲಕ್ಕೆ ನೀರು ಹಾಕಿದಂತೆ ಮಾಡಿದ ಕಾಫಿಯನ್ನು ಕುಡಿಯುತ್ತಾರೆ.

ಮಳೆಗಾಲದ ಸಂದರ್ಭದಲ್ಲಿ ಮಲೆನಾಡು  ಸ್ವರ್ಗದ ದ್ವಾರ ಬಾಗಿಲಿನಂತೆ  ಕಾಣುತ್ತಿರುತ್ತದೆ. ಆ ಸಮಯದಲ್ಲಿ ಪಟಪಟನೆ ಹಂಚಿನ ಮೇಲೆ ಬೀಳುವ ಮಳೆಗೆ ಹಲಸಿನ ಹಬ್ಬಳ ಮುರಿಯುವ ಮಜವೇ ಬೇರೆ. ಮನೆಯ ಅಂಗಳದಲ್ಲಿ ಬಿಟ್ಟರೆ ಇನ್ನುಳಿದ ಕಡೆ ನದಿಯೋ, ಜಲಪಾತವು ಹರಿಯುತ್ತಿರುತ್ತದೆ. ಅಣಬೆ ಎಂದರೆ ಎಲ್ಲರೂ  ಕೇಳಿರಲಿಕ್ಕಿಲ್ಲ, ನಿಮಗೆ ಅರ್ಥವಾಗುವಂತೆ (ಮಶ್ರೂಮ್ ) ನಾಯಿಕೊಡೆಯನ್ನು ಹುಡುಕುವುದು ಸಿಲಿಕಾನ್ ಸಿಟಿ ಟ್ರಾಫಿಕ್ ನಲ್ಲಿ ತಿಂಡಿ ತಿಂದು ಮುಗಿಸಿದಷ್ಟು ಸುಲಭದ ಕೆಲಸ. ಗದ್ದೆಯಂಚಿನಲ್ಲಿ ಹಾಳು ಬಿದ್ದ ಜಾಗದಲ್ಲಿ ಹುಟ್ಟಿರುತ್ತದೆ.

ಎಂದಿನಂತೆ ಅಲ್ಲಿಗೂ ಇಲ್ಲಿಗೂ ತುಂಬಾ ವ್ಯತ್ಯಾಸವಿದೆ, ಇಲ್ಲಿ ಮನೆಗಳಿಗೆ ಕಂಪೌಂಡ್ ಏರಿಸಿದ್ದಾರೆ, ಅಲ್ಲಿ ಅಚ್ಚುಕಟ್ಟಾದ ತಂತಿಬೇಲಿ, ಮನೆ ಎದುರಿಗೆ ಇಲ್ಲಿ ಸಿಮೆಂಟಿನ ಹಾಸಿಗೆ, ಅಲ್ಲಿ ಹಸಿರು ಬಳ್ಳಿಗಳು ಎದ್ದು ನಿಂತಿರುತ್ತವೆ, ಇಲ್ಲಿ ತಿನ್ನಲು ಜೊತೆಗೆ ಜಾಮ್ ಅಥವಾ ಸಾಸ್ ಇದ್ದರೆ, ಅಲ್ಲಿ ಚಗಳಿ ಇರುವೆ ಚಟ್ನಿ ಹೀಗೆ ಹೇಳುತ್ತ ಹೋದರೆ ಮುಗಿಯದಷ್ಟಿದೆ.

ಬದುಕೆಂಬುದು ನೆನಪಿನ ದೋಣಿ ಇದ್ದ ಹಾಗೆ ಅದು ಮಧ್ಯದಲ್ಲಿ ಮುಳುಗಿ ಹೋಗಬಹುದು ಅಥವಾ ದಡಸೇರಲು ಬಹುದು. ಬದುಕು ಕೊನೆಗೊಳ್ಳುವ ಮೊದಲು ಆದಷ್ಟು ಸಿಹಿ ಕಹಿ ನೆನಪುಗಳು ಉಳಿದು ಅಳಿದು ಹೋಗುತ್ತವೆ. ಆದರೆ ಕಲ್ಲು-ಸಕ್ಕರೆಯಂಥ ಸಿಹಿನೆನಪು ಬದುಕಿನಲ್ಲಿ  ಉಳಿಯಬೇಕಾದರೆ ನೀವು ಒಮ್ಮೆ ಮಲೆನಾಡಿಗೆ ಕಾಲಿಡಲೇ ಬೇಕು.

ರಾಹುಲ್, ಎಂಜಿಎಂ ಕಾಲೇಜು ಉಡುಪಿ

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

Jammu Kashmir: ಗುಲ್‌ ಮಾರ್ಗ್‌, ಆದಿ ಶಂಕರಾಚಾರ್ಯ ಪೀಠ..ನೋಡಲೇಬೇಕಾದ ಸ್ಥಳಗಳು ಹಲವು…

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

ಬರದ ಬಿಕ್ಕಟ್ಟು:ತಂತ್ರಜ್ಞಾನ ನಗರಿ ಬೆಂಗಳೂರನ್ನು ದಿವಾಳಿಯಂಚಿಗೆ ತಳ್ಳುವುದೇ ನೀರಿನ ಸಮಸ್ಯೆ?

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Desi Swara: ಇಟಲಿಯಲ್ಲಿ ಶ್ರೀರಾಮನಾಮ ಸತ್ಸಂಗ, ಆರಾಧನೆ

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

Jammu-Kashmir: ಅಂದು-ಇಂದು- ಸಮೃದ್ಧಿಯ ನಾಡು- ನೆಮ್ಮದಿಯ ಬೀಡು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.