13 ವರ್ಷಗಳಿಂದ ಸವಲತ್ತಿಲ್ಲ ; ಸಂಕಷ್ಟ ಕಾಲದಲ್ಲೂ ನಿರ್ಲಕ್ಷ್ಯ


Team Udayavani, May 30, 2021, 7:15 AM IST

13 ವರ್ಷಗಳಿಂದ ಸವಲತ್ತಿಲ್ಲ ; ಸಂಕಷ್ಟ ಕಾಲದಲ್ಲೂ ನಿರ್ಲಕ್ಷ್ಯ

ಪುತ್ತೂರು : ಹಾಲಿ ಸಂಕಷ್ಟ ಕಾಲದಲ್ಲಿ ಸರಕಾರ ಹಳ್ಳಿ ಹಳ್ಳಿಗೆ ಉಚಿತ ಪಡಿತರ ವಿತರಿಸುವುದಾಗಿ ಹೇಳು ತ್ತಿದ್ದರೂ ಇಲ್ಲಿನ 15 ಬಡ, ದಲಿತ ಕುಟುಂಬಗಳಿಗೆ 13 ವರ್ಷಗಳಿಂದ ಪಡಿತರವೇ ಇಲ್ಲ!

ಪರಿಶಿಷ್ಟ ಜಾತಿ ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಸುಳ್ಯದ ಅಮರಪಟ್ನೂರು ಗ್ರಾಮದ ಅಕ್ಕೋಜಿಪಾಲ್‌ ಎಂಬಲ್ಲಿರುವ ಪರಿಶಿಷ್ಟ ಜಾತಿಯ ಮಾಯಿಲ ಸಮುದಾಯದ ಕುಟುಂಬಗಳ ವರುಷಾನು ಗಟ್ಟಲೆಯ ಗೋಳಿನ ಕಥೆ ಇದು.

19 ದಲಿತ ಕುಟುಂಬ
ಅಕ್ಕೋಜಿಲ್‌ಪಾಲ್‌ನಲ್ಲಿ ನೂರಕ್ಕೂ ಅಧಿಕ ವರ್ಷಗಳಿಂದ ಮಲೆಯಾಳ ಮಾತೃಭಾಷಿಕ ಮಾಯಿಲ ಕುಟುಂಬಗಳು ನೆಲೆಸಿವೆ. ನಾಲ್ಕೈದು ಮಂದಿಯ ಹೆಸರಿನಲ್ಲಿದ್ದ ಜಾಗವನ್ನು 18 ವರ್ಷಗಳ ಹಿಂದೆ ನವಗ್ರಾಮ ಯೋಜನೆಯಡಿ 21 ಕುಟುಂಬಗಳಿಗೆ ತಲಾ 3 ಸೆಂಟ್ಸ್‌ನಂತೆ ವಿಭಾಗಿಸಿ ನೀಡಿ ವಸತಿ ಯೋಜನೆಯಡಿ ಮನೆ ನಿರ್ಮಿಸಲಾಗಿತ್ತು. 19 ಮನೆಗಳಲ್ಲಿ 60ಕ್ಕೂ ಅಧಿಕ ಮಂದಿ ಇಲ್ಲಿದ್ದಾರೆ. ವಿಭಜನೆಯ ಬಳಿಕ 5 ಕುಟುಂಬಗಳನ್ನು ಬಿಟ್ಟು 15 ಕುಟುಂಬಗಳಿಗೆ ಪಡಿತರ ಕಾರ್ಡ್‌ ಮರುನೋಂದಣಿ ಮಾಡದ ಕಾರಣ ಪಡಿತರ ಲಭಿಸುತ್ತಿಲ್ಲ. ಯಾವ ಇಲಾಖೆಯೂ ಅವರ ಗೋಳು ಕೇಳುವ ಗೋಜಿಗೆ ಹೋಗಿಲ್ಲ.

ಆಧಾರ್‌ ಕಾರ್ಡ್‌ ಇಲ್ಲ
ಇಲ್ಲಿರುವ 60 ಮಂದಿಯ ಪೈಕಿ 45 ಮಂದಿಗೆ ಆಧಾರ್‌ ಕಾರ್ಡ್‌ ಇಲ್ಲ. “ಸರಕಾರ ಸಮುದಾಯದ ಏಳಿಗೆಗೋಸ್ಕರ ಘೋಷಿಸುವ ಯೋಜನೆಗಳ ಸೌಲಭ್ಯ ಪಡೆಯಲು ಯಾವುದೇ ದಾಖಲೆಗಳು ನಮ್ಮಲ್ಲಿಲ್ಲ. 3 ಸೆಂಟ್ಸ್‌ ಜಾಗ, ಅದರಲ್ಲಿ ಈಗಲೋ ಆಗಲೋ ಎನ್ನುವಂತಿರುವ ಮುರುಕು ಜೋಪಡಿ ವಿನಾ ಬೇರೇನೂ ಇಲ್ಲ. ಕೆಲವು ಮನೆಗಳಲ್ಲಿ ಶೌಚಾಲಯವೂ ಸರಿ ಇಲ್ಲ’ ಎನ್ನುತ್ತಾರೆ ಕಾಲನಿಯ ನಾರಾಯಣ, ಚೆನ್ನು ಮತ್ತು ಮಾದೆ.

ಕಾಡುತ್ತಿದೆ ಅನಾರೋಗ್ಯ
ಕಾಲನಿಯಲ್ಲಿ ಪುಟ್ಟ ಮಕ್ಕಳಿದ್ದಾರೆ. ಕೆಲವು ದಿನಗಳಿಂದ ಜ್ವರ ಸೇರಿದಂತೆ ಅನಾರೋಗ್ಯ ಅವರನ್ನು ಕಾಡುತ್ತಿದೆ. ಅಮರಪಟ್ನೂರು ಗ್ರಾಮಕ್ಕೆ ಪ್ರತ್ಯೇಕ ಆಶಾ ಕಾರ್ಯಕರ್ತೆಯರಿಲ್ಲ; ನೆರೆಯ ಗ್ರಾಮದ ಕಾರ್ಯಕರ್ತೆಗೆ ಇಲ್ಲಿನ ಜವಾಬ್ದಾರಿ. ಆರೋಗ್ಯ ಇಲಾ ಖೆಯ ಅಧಿಕಾರಿಗಳಾಗಲಿ ವೈದ್ಯರಾ ಗಲೀ ಇಲ್ಲಿ ಪರಿಶೀಲನೆಗೆ ಬಂದಿಲ್ಲ.

ಪಡಿತರ ಚೀಟಿ ಇಲ್ಲದಿರುವ ವಿಚಾರ ಗಮನಕ್ಕೆ ಬಂದಿದೆ. ಅವರ ಬಳಿ ಪೂರಕ ದಾಖಲೆಗಳಿಲ್ಲ. ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಿ ಪಡಿತರ ಚೀಟಿ ಇತ್ಯಾದಿ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
– ಅನಿತಾಲಕ್ಷ್ಮೀ, ಸುಳ್ಯ ತಹಶೀಲ್ದಾರ್‌

– ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.